ಆ್ಯಪ್ನಗರ

ಜಮ್ಮು ಕಾಶ್ಮೀರ ವಿಷಯದಲ್ಲಿ ನೆಹರೂ ನಡೆ ತಪ್ಪು, ಪಟೇಲ್‌ ನಡೆ ಸರಿ: ರವಿಶಂಕರ್‌ ಪ್ರಸಾದ್‌

ಕಾಶ್ಮೀರದ ವಿಷಯದಲ್ಲಿ ಜವಾಹರಲಾಲ್ ನೆಹರೂ ನಿರ್ಧಾರಗಳು ತಪ್ಪಾಗಿದ್ದರೆ, ಸರ್ದಾರ್ ಪಟೇಲ್ ನಿರ್ಧಾರಗಳು ಸರಿಯಾಗಿದ್ದವು ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದರು.

TIMESOFINDIA.COM 11 Sep 2019, 7:15 pm
ಅಹಮದಾಬಾದ್: 'ಸ್ವಾತಂತ್ರ್ಯದ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಷಯದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ನಿರ್ಧಾರಗಳು ತಪ್ಪಾಗಿದ್ದರೆ, ಅಂದಿನ ಗೃಹ ಸಚಿವ ಸರ್ದಾರ್ ವಲ್ಲಭಭಾಯ್ ಪಟೇಲ್ ನಿರ್ಧಾರಗಳು ಸರಿಯಾಗಿದ್ದವು' ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದರು.
Vijaya Karnataka Web ravishankar


ಸತತ ಎರಡನೇ ಅವಧಿಗೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂತಸ ಹಾಗೂ ಎನ್‌ಡಿಎ ಸರಕಾರ 100 ದಿನಗಳ ಅವಧಿ ಪೂರೈಸಿರುವ ಸವಿನೆನಪಿಗಾಗಿ ಸಚಿವ ಪ್ರಸಾದ್ ಅವರು ಅಹ್ಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

ದೇಶ ಸ್ವಾತಂತ್ರ್ಯ ಕಂಡ ಬಳಿಕ ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಜವಾಹರ‌ಲಾಲ್ ನೆಹರು ಅವರು ತೆಗೆದುಕೊಂಡ ನಿರ್ಧಾರಗಳು ಸೂಕ್ತವಾಗಿರಲಿಲ್ಲ. ಹೀಗಾಗಿ ದಶಕಗಳ ಕಾಲ ಕಾಶ್ಮೀರದ ಜ್ವಲಂತ ಸಮಸ್ಯೆ ಜೀವಂತವಾಗಿಯೇ ಉಳಿದಿತ್ತು ಎಂದು ಸಚಿವರು ದೂರಿದ್ದಾರೆ.

'ಜಮ್ಮು ಮತ್ತು ಕಾಶ್ಮೀರದ ವಿಷಯದಲ್ಲಿ ಸರ್ದಾರ್ ಪಟೇಲ್ ಅವರ ನಿರ್ಧಾರ ಸರಿಯಾಗಿದ್ದರೆ, ಜವಾಹರಲಾಲ್ ನೆಹರೂ ಅವರು ನಿರ್ಣಯ ತಪ್ಪಾಗಿತ್ತು' ಎಂದು ಅವರು ಪ್ರತಿಪಾದಿಸಿದರು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ 370ನೇ ವಿಧಿ ರದ್ದುಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಷ್ಟೆ ಅಲ್ಲದೆ, ಸ್ವಾತಂತ್ರ್ಯದ ಬಳಿಕ ಕಾಶ್ಮೀರದ ವಿಷಯದಲ್ಲಾದ ಐತಿಹಾಸಿಕ ತಪ್ಪನ್ನು ಸರಿಪಡಿಸಿದ್ದಾರೆಂದು ಶ್ಲಾಘಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ