ಆ್ಯಪ್ನಗರ

ಡ್ರಗ್ಸ್‌ ಹಾವಳಿ: ಕ್ರಿಯಾ ಯೋಜನೆ ರೂಪಿಸಲು ಸುಪ್ರೀಂ ಆದೇಶ

ಶಾಲಾ, ಕಾಲೇಜು ಮಕ್ಕಳೂ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಸೇವನೆ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಷ್ಟ್ರೀಯ ಕ್ರಿಯಾ ಯೋಜನೆ ರೂಪಿಸುವಂತೆ ಸುಪ್ರೀಂ ಕೋರ್ಟ್‌, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್‌) ನಿರ್ದೇಶನ ನೀಡಿದೆ.

Vijaya Karnataka 23 Jul 2018, 8:42 am
ಹೊಸದಿಲ್ಲಿ: ಶಾಲಾ, ಕಾಲೇಜು ಮಕ್ಕಳೂ ಸೇರಿದಂತೆ ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಸೇವನೆ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಷ್ಟ್ರೀಯ ಕ್ರಿಯಾ ಯೋಜನೆ ರೂಪಿಸುವಂತೆ ಸುಪ್ರೀಂ ಕೋರ್ಟ್‌, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್‌) ನಿರ್ದೇಶನ ನೀಡಿದೆ.
Vijaya Karnataka Web Supreme Court 1


ಬೆಂಗಳೂರು ಸೇರಿದಂತೆ ಅನೇಕ ಮಹಾನಗರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ದೇಶನ ಮಹತ್ವ ಪಡೆದಿದೆ. ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿ ಸದಸ್ಯ ಪೀಠವು, ''ಇದೊಂದು ರಾಷ್ಟ್ರೀಯ ಸಮಸ್ಯೆಯಾಗಿದ್ದು ತಡೆಗಟ್ಟಲು ಕ್ರಿಯಾ ಯೋಜನೆ ರೂಪಿಸಲು ಮುಂದಾಗಿ. ಸೆಪ್ಟೆಂಬರ್‌ 7ರ ಒಳಗಾಗಿ ಉನ್ನತ ಮಟ್ಟದ ಸಮಿತಿಯು ತನ್ನ ವರದಿ ಅಂತಿಮಗೊಳಿಸುವಂತೆ ಏಮ್ಸ್‌ಗೆ ಸೂಚಿಸಿ. ಇಲ್ಲಿಂದೀಚೆಗೆ ಪುನಃ ಸಮಯಾವಕಾಶ ವಿಸ್ತರಿಸಲು ಸಾಧ್ಯವಿಲ್ಲ,'' ಎಂದು ಕೇಂದ್ರ ಸರಕಾರದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಮಣಿಂದರ್‌ ಸಿಂಗ್‌ ಅವರಿಗೆ ಖಡಕ್ಕಾಗಿ ಸೂಚಿಸಿದೆ.

ನೊಬೆಲ್‌ ಪುರಸ್ಕೃತ ಕೈಲಾಸ್‌ ಸತ್ಯಾರ್ಥಿ ಅವರ 'ಬಚಪನ್‌ ಬಚಾವೋ ಆಂದೋಲನ್‌' (ಬಿಬಿಎ) ಎನ್‌ಜಿಒ ಸಲ್ಲಿಸಿದ್ದ ಅರ್ಜಿ ಕುರಿತು 2016ರಲ್ಲಿ ನೀಡಿದ್ದ ತೀರ್ಪಿನ ಅಂಶಗಳನ್ನು ಜಾರಿಗೊಳಿಸಲು ಕೇಂದ್ರವು ಮೀನಾಮೇಷ ಎಣಿಸುತ್ತಿದೆ ಎಂದು ದೂರಿ, ಕೆ. ಜಗದೀಶ್ವರ ರೆಡ್ಡಿ ಎಂಬುವರು ಸುಪ್ರೀಂ ಮೊರೆ ಹೋಗಿದ್ದರು. ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೋರ್ಟ್‌ ಏಮ್ಸ್‌ಗೆ ಈ ಆದೇಶ ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ