ಹೊಸದಿಲ್ಲಿ: ಬಿಎಸ್ಪಿ ಪಕ್ಷದ ಆರು ಶಾಸಕರು ಕಾಂಗ್ರೆಸ್ ಜೊತೆ ವಿಲೀನಗೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಲೀನ ಪ್ರಕ್ರಿಯೆಯನ್ನು ತಡೆಯಲು ನಿರಾಕರಿಸಿದ ರಾಜಸ್ಥಾನ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಬಿಜೆಪಿಯ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ನಾಯಕತ್ವದ ವಿಚಾರಕ್ಕೆ 100 'ಕೈ' ನಾಯಕರಿಗೆ ಅತೃಪ್ತಿ..? ಸಂಜಯ್ ಝಾ ಹೇಳಿಕೆ ಅಲ್ಲಗಳೆದ ಕಾಂಗ್ರೆಸ್
ಇತ್ತೀಚೆಗೆ ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಉಂಟಾದಾಗ ಬಿಎಸ್ಪಿ ಪಕ್ಷದ ಆರು ಶಾಸಕರು ಕಾಂಗ್ರೆಸ್ಗೆ ಸೇರಿದ್ದರು. ಇದರ ವಿರುದ್ಧ ಬಿಎಸ್ಪಿ ಅಧಿನಾಯಕಿ ಮಾಯಾವತಿ ಕಿಡಿಕಾರಿದ್ದರು. ಇನ್ನೊಂದೆಡೆ ಬಿಜೆಪಿ ನಾಯಕರು ಶಾಸಕರು ಕಾಂಗ್ರೆಸ್ ಜೊತೆ ವಿಲೀನ ಆಗುವುದನ್ನು ಪ್ರಶ್ನಿಸಿ ರಾಜಸ್ಥಾನ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಈ ಪ್ರಕ್ರಿಯೆಯನ್ನು ತಡೆಯಲು ನಿರಾಕರಿಸಿತ್ತು. ಈ ಹಿನ್ನೆಲೆ ಬಿಜೆಪಿ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಭವಿಷ್ಯದ ಚುನಾವಣೆಗಳಿಗೆ ಬಿಜೆಪಿ ಪ್ರಚಾರ ಅಸ್ತ್ರ ಸಿದ್ಧ: ಸಾಧನೆಗಳ ಪಟ್ಟಿ ಜೊತೆಗೆ ಜನರನ್ನು ತಲುಪಲಿದೆ ಕೇಸರಿ ಪಡೆ!
ಆದರೆ ಇದೀಗ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರಿದ್ದ ಪೀಠವು ಪ್ರಕರಣದ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧಿಸಿ ಗೆದ್ದಿದ್ದ ಶಾಸಕರಾದ ಸಂದೀಪ್ ಯಾದವ್, ವಾಜಿಬ್ ಅಲಿ, ದೀಪ್ಚಂದ್ ಖೇರಿಯಾ, ಜೋಗೇಂದ್ರ ಅವಾನಾ, ಲಖನ್ ಮೀನಾ ಮತ್ತು ರಾಜೇಂದ್ರ ಗುಧಾ ಅವರು 2019ರ ಸೆಪ್ಟೆಂಬರ್ನಲ್ಲಿ ಕಾಂಗ್ರೆಸ್ ಸೇರಿದ್ದರು. ಬಿಎಸ್ಪಿ ಶಾಸಕರ ವಿಲೀನಕ್ಕೆ ಅನುಮತಿ ನೀಡಿದ್ದ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ದೇಗುಲ; ಆದರೆ ಭಕ್ತಾದಿಗಳಿಗೆ ಪ್ರವೇಶ ಇಲ್ಲ..!
ನಾಯಕತ್ವದ ವಿಚಾರಕ್ಕೆ 100 'ಕೈ' ನಾಯಕರಿಗೆ ಅತೃಪ್ತಿ..? ಸಂಜಯ್ ಝಾ ಹೇಳಿಕೆ ಅಲ್ಲಗಳೆದ ಕಾಂಗ್ರೆಸ್
ಇತ್ತೀಚೆಗೆ ರಾಜಸ್ಥಾನದಲ್ಲಿ ರಾಜಕೀಯ ಅಸ್ಥಿರತೆ ಉಂಟಾದಾಗ ಬಿಎಸ್ಪಿ ಪಕ್ಷದ ಆರು ಶಾಸಕರು ಕಾಂಗ್ರೆಸ್ಗೆ ಸೇರಿದ್ದರು. ಇದರ ವಿರುದ್ಧ ಬಿಎಸ್ಪಿ ಅಧಿನಾಯಕಿ ಮಾಯಾವತಿ ಕಿಡಿಕಾರಿದ್ದರು. ಇನ್ನೊಂದೆಡೆ ಬಿಜೆಪಿ ನಾಯಕರು ಶಾಸಕರು ಕಾಂಗ್ರೆಸ್ ಜೊತೆ ವಿಲೀನ ಆಗುವುದನ್ನು ಪ್ರಶ್ನಿಸಿ ರಾಜಸ್ಥಾನ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಈ ಪ್ರಕ್ರಿಯೆಯನ್ನು ತಡೆಯಲು ನಿರಾಕರಿಸಿತ್ತು. ಈ ಹಿನ್ನೆಲೆ ಬಿಜೆಪಿ ನಾಯಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಭವಿಷ್ಯದ ಚುನಾವಣೆಗಳಿಗೆ ಬಿಜೆಪಿ ಪ್ರಚಾರ ಅಸ್ತ್ರ ಸಿದ್ಧ: ಸಾಧನೆಗಳ ಪಟ್ಟಿ ಜೊತೆಗೆ ಜನರನ್ನು ತಲುಪಲಿದೆ ಕೇಸರಿ ಪಡೆ!
ಆದರೆ ಇದೀಗ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರಿದ್ದ ಪೀಠವು ಪ್ರಕರಣದ ವಿಚಾರಣೆಯನ್ನು ಆಗಸ್ಟ್ 24ಕ್ಕೆ ಮುಂದೂಡಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಪಕ್ಷದಿಂದ ಟಿಕೆಟ್ ಪಡೆದು ಸ್ಪರ್ಧಿಸಿ ಗೆದ್ದಿದ್ದ ಶಾಸಕರಾದ ಸಂದೀಪ್ ಯಾದವ್, ವಾಜಿಬ್ ಅಲಿ, ದೀಪ್ಚಂದ್ ಖೇರಿಯಾ, ಜೋಗೇಂದ್ರ ಅವಾನಾ, ಲಖನ್ ಮೀನಾ ಮತ್ತು ರಾಜೇಂದ್ರ ಗುಧಾ ಅವರು 2019ರ ಸೆಪ್ಟೆಂಬರ್ನಲ್ಲಿ ಕಾಂಗ್ರೆಸ್ ಸೇರಿದ್ದರು. ಬಿಎಸ್ಪಿ ಶಾಸಕರ ವಿಲೀನಕ್ಕೆ ಅನುಮತಿ ನೀಡಿದ್ದ ಸ್ಪೀಕರ್ ನಿರ್ಧಾರವನ್ನು ಪ್ರಶ್ನಿಸಿ ಬಿಜೆಪಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಬಾಗಿಲು ತೆರೆದ ಶಬರಿಮಲೆ ಅಯ್ಯಪ್ಪ ದೇಗುಲ; ಆದರೆ ಭಕ್ತಾದಿಗಳಿಗೆ ಪ್ರವೇಶ ಇಲ್ಲ..!