ಆ್ಯಪ್ನಗರ

ರಫೇಲ್‌: ದೋಷಪೂರಿತ ಅರ್ಜಿಗಳ ಬಗ್ಗೆ ಸುಪ್ರೀಂ ಕಿಡಿ

ಭಾರತ ಮತ್ತು ಫ್ರಾನ್ಸ್‌ ನಡವುಎ 36 ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ನಡೆದ ಒಪ್ಪಂದವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕಳೆದ ಡಿ.14ರಂದು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು.

Vijaya Karnataka 16 Feb 2019, 5:00 am
ಹೊಸದಿಲ್ಲಿ: ರಫೇಲ್‌ ಒಪ್ಪಂದದ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ ತೀರ್ಪು ಮರುಪರಿಶೀಲಿಸಿ ಸಲ್ಲಿಸಲಾಗಿರುವ ಕೆಲವೊಂದು ಅರ್ಜಿಗಳು ದೋಷಪೂರಿತವಾಗಿರುವ ಬಗ್ಗೆ ಸುಪ್ರೀಂ ಕೋರ್ಟ್‌ ಕಿಡಿಕಾರಿದೆ. ಕೆಲವು ವಕೀಲರು ಮಾಧ್ಯಮದಲ್ಲಿ ಪ್ರಚಾರಕ್ಕಾಗಿ ದೋಷಪೂರಿತ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಹೀಗಾಗಿಯೇ ವಿಚಾರಣೆ ತಡವಾಗುತ್ತಿದೆ ಎಂದು ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.
Vijaya Karnataka Web rafale


ತೀರ್ಪು ಮೇಲ್ಮನವಿ ಅರ್ಜಿಗಳನ್ನು ತುರ್ತು ವಿಚಾರಣೆ ನಡೆಸಬೇಕೆಂದು ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ನೇತೃತ್ವದ ನ್ಯಾಯಪೀಠ, ''ಅರ್ಜಿದಾರರು ಅಮಾಯಕರೇನಲ್ಲ. ಅವರು ದೋಷಪೂರಿತ ಅರ್ಜಿಗಳನ್ನು ತೆರವುಗೊಳಿಸುವುದನ್ನು ಬಿಟ್ಟು, ದೊಡ್ಡ ಮಟ್ಟದ ಪ್ರಚಾರಕ್ಕಾಗಿ ಮಾಧ್ಯಮಗಳ ಮುಂದೆ ಹೋಗುತ್ತಿದ್ದಾರೆ,'' ಎಂದು ಅಸಮಾಧಾನ ವ್ಯಕ್ತಪಡಿಸಿತು.

ಭಾರತ ಮತ್ತು ಫ್ರಾನ್ಸ್‌ ನಡವುಎ 36 ರಫೇಲ್‌ ಯುದ್ಧ ವಿಮಾನಗಳ ಖರೀದಿಗೆ ನಡೆದ ಒಪ್ಪಂದವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಕಳೆದ ಡಿ.14ರಂದು ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು. ಸರಕಾರದ ನಿರ್ಧಾರವನ್ನು ಅನುಮಾನಿಸುವ ಅಗತ್ಯವಿಲ್ಲ ಎಂದು ಕೋಟ್‌ ಹೇಳಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ