ಆ್ಯಪ್ನಗರ

ಸೇನೆಯ ವಿರುದ್ಧ ಶೆಹ್ಲಾ ರಷೀದ್ ಆರೋಪ: ಸುಪ್ರೀಂಕೋರ್ಟ್ ವಕೀಲರಿಂದ ಕ್ರಿಮಿನಲ್ ಮೊಕದ್ದಮೆ ದಾಖಲು

ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಇತ್ತೀಚೆಗಷ್ಟೇ ಘೋಷಿಸಲಾಗಿದೆ. ಅಲ್ಲದೆ, 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ದುಪಡಿಸಿದೆ. ಇದಾದ ಬಳಿಕ ಕಾಶ್ಮೀರದ ಸದ್ಯದ ಪರಿಸ್ಥಿತಿ ಇದು ಎಂದು ಶೆಹ್ಲಾ ರಷೀದ್‌ ಮೋದಿ ಸರಕಾರ, ಭಾರತೀಯ ಸೇನೆ ವಿರುದ್ಧ ಹಲವು ಆರೋಪ ಮಾಡಿದ್ದರು.

Agencies 19 Aug 2019, 2:42 pm
ಹೊಸದಿಲ್ಲಿ: ಜಮ್ಮು ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್‌ ನಾಯಕಿ ಶೆಹ್ಲಾ ರಷೀದ್‌ ವಿರುದ್ಧ ಸುಪ್ರೀಂಕೋರ್ಟ್ ವಕೀಲರೊಬ್ಬರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಭಾರತೀಯ ಸೇನೆ ಹಾಗೂ ಕೇಂದ್ರ ಸರಕಾರದ ವಿರುದ್ಧ ಆಧಾರ ರಹಿತ ಆರೋಪ ಮಾಡಿದ ಮೇರೆಗೆ ರಷೀದ್‌ನನ್ನು ತಕ್ಷಣವೇ ಬಂಧಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.
Vijaya Karnataka Web shehla rashid


ರಶೀದ್ ಮಾಡಿದ ಆರೋಪಗಳು ಸಂಪೂರ್ಣವಾಗಿ ಸುಳ್ಳು, ಆಧಾರರಹಿತ ಮತ್ತು ಸಂಯೋಜಿತವಾದವು ಎಂದು ಶ್ರೀವಾಸ್ತವ ಮನವಿ ಮಾಡಿಕೊಂಡಿದ್ದಾರೆ. ಅಲಖ್‌ ಅಲೋಕ್‌ ಶ್ರೀವಾಸ್ತವ ಎಂಬ ಸುಪ್ರೀಂಕೋರ್ಟ್ ವಕೀಲರು ಕ್ರಿಮಿನಲ್ ಕೇಸ್‌ ದಾಖಲಿಸಿದ್ದಾರೆ.

ಭಾನುವಾರ ಹಲವು ಟ್ವೀಟ್‌ಗಳ ಮೂಲಕ ಜಮ್ಮು ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್‌ ನಾಯಕಿ ಶೆಹ್ಲಾ ರಷೀದ್‌ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆ ವಿರುದ್ಧ ಆರೋಪಗಳ ಸುರಿಮಳೆ ಹೊರಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿಯಲ್ಲಿ ಮನೆಗಳನ್ನು ಪ್ರವೇಶಿಸುತ್ತಿವೆ, ಹುಡುಗರನ್ನು ಎತ್ತಿಕೊಳ್ಳುವುದು, ಮನೆಗಳನ್ನು ದರೋಡೆ ಮಾಡುವುದು, ಉದ್ದೇಶಪೂರ್ವಕವಾಗಿ ನೆಲದ ಮೇಲೆ ಪಡಿತರವನ್ನು ಚೆಲ್ಲುವುದು, ಅನ್ನದೊಂದಿಗೆ ತೈಲವನ್ನು ಬೆರೆಸುವುದು ಮುಂತಾದ ಕೆಲಸಗಳನ್ನು ಮಾಡುತ್ತಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಅಲ್ಲದೆ, ಶೋಪಿಯಾನ್‌ನಲ್ಲಿ ನಾಲ್ಕು ಮಂದಿಯನ್ನು ಸೇನೆ ಕ್ಯಾಂಪ್‌ಗೆ ಕರೆಸಿಕೊಂಡು ವಿಚಾರಣೆ ನೆಪದಲ್ಲಿ ಹಿಂಸೆ ನೀಡಲಾಗಿದೆ. ಅಲ್ಲದೆ, ಮೈಕ್ ಅನ್ನು ಅವರ ಹತ್ತಿರ ಇಟ್ಟುಕೊಂಡಿದ್ದರಿಂದ ಇಡೀ ಪ್ರದೇಶವು ಅವರು ಕಿರುಚುವುದನ್ನು ಕೇಳಬಹುದು ಮತ್ತು ಭಯಭೀತರಾಗಬಹುದಾಗಿತ್ತು. ಇದು ಇಡೀ ಪ್ರದೇಶದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಿದೆ ಎಂದು ಸಹ ಶೆಹ್ಲಾ ರಷೀದ್‌ ಟ್ವೀಟ್‌ ಮೂಲಕ ಆರೋಪಿಸಿದ್ದಾರೆ.

ಇನ್ನು, ಭಾರತೀಯ ಸೇನೆ ಶೆಹ್ಲಾ ರಷೀದ್‌ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದೆ. ಇನ್ನೊಂದೆಡೆ ಕೇಂದ್ರ ಸರಕಾರ ಹಾಗೂ ಭಾರತೀಯ ಸೇನೆ ವಿರುದ್ಧ ಶೆಹ್ಲಾ ರಷೀದ್‌ ಮಾಡಿರುವ ಆರೋಪಕ್ಕೆ ಸಾಮಾಜಿಕ ಜಾಲತಾಣದಲ್ಲಿ ಶೆಹ್ಲಾ ರಷೀದ್‌ ವಿರುದ್ಧ ಹೆಚ್ಚು ವಿರೋಧ ಕೇಳಿ ಬರುತ್ತಿದೆ. ಅರೆಸ್ಟ್ ಶೆಹ್ಲಾ ರಷೀದ್‌ ಎಂಬ ಹ್ಯಾಶ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ