ಹೊಸದಿಲ್ಲಿ: ಉನ್ನಾವೊ ಗ್ಯಾಂಗ್ ರೇಪ್ ಸಂತ್ರಸ್ತೆ ಹಾಗೂ ಆಕೆಯ ಕುಟುಂಬ ಸದಸ್ಯರ ವಿರುದ್ಧ ದಾಖಲಾಗಿರುವ 20 ಪ್ರಕರಣಗಳ ವಿವರ ಸಲ್ಲಿಕೆಗೆ ಉತ್ತರ ಪ್ರದೇಶ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಳ್ಳಿಹಾಕಿದೆ. ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಬಿ.ಆರ್.ಗವಾಯಿ ಅವರನ್ನೊಳಗೊಂಡ ನ್ಯಾಯಪೀಠವು ಸದ್ಯ ತನ್ನ ಸುಪರ್ದಿಯಲ್ಲಿ ಇರುವ ಪ್ರಕರಣದ ವ್ಯಾಪ್ತಿಯನ್ನು ವಿಸ್ತರಿಸಲು ಇಚ್ಛಿಸುವುದಿಲ್ಲ ಎಂದು ತಿಳಿಸಿತು. ಜತೆಗೆ ಸಂತ್ರಸ್ತೆ ವಿರುದ್ಧ ರಾಜ್ಯದಲ್ಲಿ ದಾಖಲಾಗಿರುವ ಇತರ ಪ್ರಕರಣಗಳಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ ಎಂದೂ ಸ್ಪಷ್ಟಪಡಿಸಿತು. ಸುಪ್ರೀಂ ಕೋರ್ಟ್ ಇತ್ತೀಚೆಗೆ ಅತ್ಯಾಚಾರಕ್ಕೆ ಸಂಬಂಧಿಸಿದ ನಾಲ್ಕು ಪ್ರಕರಣಗಳನ್ನು ಉತ್ತರಪ್ರದೇಶದಿಂದ ದಿಲ್ಲಿಯ ವಿಶೇಷ ನ್ಯಾಯಾಲಯಕ್ಕೆ ವರ್ಗಾಯಿಸಿತ್ತು. ಈ ಪ್ರಕರಣದಲ್ಲಿ ಬಿಜೆಪಿಯ ಉಚ್ಚಾಟಿತ ಶಾಸಕ ಕುಲದೀಪ್ ಸೆಂಗಾರ್ ಪ್ರಮುಖ ಆರೋಪಿಯಾಗಿದ್ದಾರೆ.
ಉನ್ನಾವೊ ಸಂತ್ರಸ್ತೆ ವಿರುದ್ಧದ ಪ್ರಕರಣಗಳ ವರದಿ ಕೇಳಲು ಸುಪ್ರೀಂ ಕೋರ್ಟ್ ನಕಾರ
ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಬಿ.ಆರ್.ಗವಾಯಿ ಅವರನ್ನೊಳಗೊಂಡ ನ್ಯಾಯಪೀಠವು ಸದ್ಯ ತನ್ನ ಸುಪರ್ದಿಯಲ್ಲಿ ಇರುವ ಪ್ರಕರಣದ ವ್ಯಾಪ್ತಿಯನ್ನು ವಿಸ್ತರಿಸಲು ಇಚ್ಛಿಸುವುದಿಲ್ಲ ಎಂದು ತಿಳಿಸಿತು.
PTI 14 Aug 2019, 5:00 am