ಆ್ಯಪ್ನಗರ

ಎಸ್ಸಿ/ಎಸ್ಟಿ ಕಾಯಿದೆ ತಿದ್ದುಪಡಿ ತಡೆಗೆ ಸುಪ್ರೀಂ ನಕಾರ

ಕಳೆದ ವರ್ಷ ಮಾರ್ಚ್‌ 20ರಂದು ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ಮರುಪರಿಶೀಲನೆ ಕೋರಿದ ಕೇಂದ್ರ ಸರಕಾರದ ಮನವಿ ಮತ್ತು ಈ ಕಾಯಿದೆಯ ಹೊಸ ತಿದ್ದುಪಡಿ ಪ್ರಶ್ನಿಸಿದ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ಪೀಠ ಹೇಳಿದೆ.

Vijaya Karnataka 25 Jan 2019, 5:00 am
ಹೊಸದಿಲ್ಲಿ: ನಿರೀಕ್ಷಣಾ ಜಾಮೀನು ನಿರಾಕರಿಸುವ ದಿಸೆಯಲ್ಲಿ ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯಿದೆಗೆ ತರಲು ಉದ್ದೇಶಿಸಿರುವ ತಿದ್ದುಪಡಿಗೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.
Vijaya Karnataka Web supreme


ಕಳೆದ ವರ್ಷ ಮಾರ್ಚ್‌ 20ರಂದು ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪಿನ ಮರುಪರಿಶೀಲನೆ ಕೋರಿದ ಕೇಂದ್ರ ಸರಕಾರದ ಮನವಿ ಮತ್ತು ಈ ಕಾಯಿದೆಯ ಹೊಸ ತಿದ್ದುಪಡಿ ಪ್ರಶ್ನಿಸಿದ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಎ.ಕೆ.ಸಿಕ್ರಿ ನೇತೃತ್ವದ ಪೀಠ ಹೇಳಿದೆ. ಈ ಪ್ರಕರಣವು ನ್ಯಾಯಮೂರ್ತಿ ಯು.ಯು.ಲಲಿತ್‌ ಅವರನ್ನು ಒಳಗೊಂಡ ಸಂವಿಧಾನ ಪೀಠಕ್ಕೆ ವರ್ಗಾವಣೆಗೊಂಡಿದೆ.

ದೌರ್ಜನ್ಯ ತಡೆ ಕಾಯಿದೆ ವ್ಯಾಪಕ ದುರ್ಬಳಕೆಯಾಗುತ್ತಿದೆ ಎನ್ನುವ ದೂರನ್ನು ಪರಿಗಣಿಸಿದ್ದ ಸುಪ್ರೀಂ ಕೋರ್ಟ್‌, ಇಂತಹ ಪ್ರರಕಣಗಳಲ್ಲಿ ಸೂಕ್ತ ತನಿಖೆ ನಡೆಸದೇ ಸರಕಾರಿ ನೌಕರರನ್ನು ಬಂಧಿಸುವಂತಿಲ್ಲ ಎಂದು ಕಳೆದ ಮಾರ್ಚ್‌ನಲ್ಲಿ ತೀರ್ಪು ನೀಡಿತ್ತು. ಅಂದಿನ ಪೀಠದಲ್ಲಿ ನ್ಯಾ.ಲಲಿತ್‌ ಕೂಡ ಇದ್ದರು. ಈಗ ಅದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ಪುನಃ ಅವರ ನೇತೃತ್ವದ ಪೀಠಕ್ಕೆ ವರ್ಗಾಯಿಸಲಾಗಿದೆ.

ಇದಕ್ಕೂ ಮೊದಲು, ಕಾಯಿದೆಯ ಹೊಸ ತಿದ್ದುಪಡಿಗೆ ಮುಂದಾಗಿರುವ ಸರಕಾರದ ಕ್ರಮಕ್ಕೆ ತಡೆ ನೀಡಲು ನ್ಯಾಯಪೀಠ ಸ್ಪಷ್ಟ ನಿರಾಕರಿಸಿತು. ಈ ತಿದ್ದುಪಡಿ ಕಾಯಿದೆಗೆ ಸಂಸತ್ತಿನ ಸಮ್ಮತಿ ಲಭಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ