ಆ್ಯಪ್ನಗರ

ಸೋಮವಾರದಿಂದ ಅಯೋಧ್ಯೆ ವಿಚಾರಣಾ ಕಲಾಪ ಅವಧಿ ಒಂದು ಗಂಟೆ ವಿಸ್ತರಣೆ

ದಶಕಗಳಿಂದ ನಡೆಯುತ್ತಿರುವ ರಾಜಕೀಯ ಹಾಗೂ ಧಾರ್ಮಿಕವಾಗಿ ಸೂಕ್ಷ್ಮವಾಗಿರುವ ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್‌ 18ರೊಳಗೆ ಪೂರ್ಣಗೊಳಿಸುವ ಗುಡುವನ್ನು ನ್ಯಾಯಪೀಠವು ಹಾಕಿಕೊಂಡಿದೆ.

PTI 21 Sep 2019, 5:00 am
ಹೊಸದಿಲ್ಲಿ: ಅಯೋಧ್ಯೆಯ ಶ್ರೀರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ಒಡೆತನ ಪ್ರಕರಣದ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪಂಚ ಸದಸ್ಯರ ಸಂವಿಧಾನ ಪೀಠವು ಸೋಮವಾರದಿಂದ ದಿನವಹಿ ವಿಚಾರಣೆಯ ಕಲಾಪ ಅವಧಿಯನ್ನು ಒಂದು ಗಂಟೆ ವಿಸ್ತರಿಸಲಿದೆ.
Vijaya Karnataka Web sc


ದಶಕಗಳಿಂದ ನಡೆಯುತ್ತಿರುವ ರಾಜಕೀಯ ಹಾಗೂ ಧಾರ್ಮಿಕವಾಗಿ ಸೂಕ್ಷ್ಮವಾಗಿರುವ ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್‌ 18ರೊಳಗೆ ಪೂರ್ಣಗೊಳಿಸುವ ಗುಡುವನ್ನು ನ್ಯಾಯಪೀಠವು ಹಾಕಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ನಿತ್ಯ ಒಂದು ಗಂಟೆ ಹೆಚ್ಚುವರಿಯಾಗಿ ಕಲಾಪ ನಡೆಸಲು ನಿರ್ಧರಿಸಿದೆ. ಇದರಿಂದ ಪೀಠದ ಕಲಾಪವು ಸಂಜೆ 4ರ ಬದಲು 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ತಿಳಿಸಿದೆ.

ನವೆಂಬರ್‌ ಮಧ್ಯಭಾಗದೊಳಗೆ ತೀರ್ಪು ಪ್ರಕಟಿಸುವ ಉದ್ದೇಶದಿಂದ ನ್ಯಾಯಪೀಠವು ವಿಚಾರಣೆಯನ್ನು ತ್ವರಿತಗೊಳಿಸಲು ಆದ್ಯತೆ ಕೊಟ್ಟಿದ್ದು, ಈ ನಿಟ್ಟಿನಲ್ಲಿಎಲ್ಲಅರ್ಜಿದಾರರಿಗೆ ತಮ್ಮ ವಾದ ಪ್ರತಿವಾದಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಸೂಚಿಸಿದೆ. ಸಿಜೆಐ ರಂಜನ್‌ ಗೊಗೋಯ್‌ ನೇತೃತ್ವದ ಪಂಚ ಸದಸ್ಯ ಪೀಠದಲ್ಲಿನ್ಯಾಯಮೂರ್ತಿಗಳಾದ ಎಸ್‌.ಎ. ಬೋಬ್ಡೆ, ಡಿ.ವೈ. ಚಂದ್ರಚೂಡ್‌, ಅಶೋಕ್‌ ಭೂಷಣ್‌, ಎಸ್‌.ಎ.ನಜೀರ್‌ ಇದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ