ಆ್ಯಪ್ನಗರ

ಆಧಾರ್‌ಗೆ ದೀದಿ ತಕರಾರು: ಅ.30ಕ್ಕೆ ಸುಪ್ರೀಂ ವಿಚಾರಣೆ

ಸರಕಾರದ ವಿವಿಧ ಸಮಾಜಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಕಡ್ಡಾಯಗೊಳಿಸಲು ಹೊರಟಿರುವ ಕೇಂದ್ರ ಸರಕಾರದ ನಡೆ ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಅಕ್ಟೋಬರ್‌ 30ರಂದು ನಡೆಯಲಿದೆ.

Vijaya Karnataka Web 27 Oct 2017, 10:21 pm

ಹೊಸದಿಲ್ಲಿ: ಸರಕಾರದ ವಿವಿಧ ಸಮಾಜಕಲ್ಯಾಣ ಯೋಜನೆಗಳ ಫಲಾನುಭವಿಗಳಿಗೆ ಆಧಾರ್‌ ಕಾರ್ಡ್‌ ಲಿಂಕ್‌ ಕಡ್ಡಾಯಗೊಳಿಸಲು ಹೊರಟಿರುವ ಕೇಂದ್ರ ಸರಕಾರದ ನಡೆ ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರಕಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಅಕ್ಟೋಬರ್‌ 30ರಂದು ನಡೆಯಲಿದೆ.

ನ್ಯಾಯಮೂರ್ತಿಗಳಾದ ಎ.ಕೆ.ಸಕ್ರಿ ಮತ್ತು ಅಶೋಕ್‌ ಭೂಷನ್‌ ಒಳಗೊಂಡ ನ್ಯಾಯಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.

ಬಂಗಾಳ ಸರಕಾರ ಈ ಮುಂಚೆ ಸಲ್ಲಿಸಿದ್ದ ಅರ್ಜಿಯು ಸುಪ್ರೀಂ ಪೀಠದ ಮುಂದೆ ಅ.30ರಂದು ವಿಚಾರಣೆಗೆ ಬರಲಿದೆ ಎಂದು ಸಂಸದರೂ ಆಗಿರುವ ಹಿರಿಯ ವಕೀಲ ಕಲ್ಯಾಣ್‌ ಬ್ಯಾನರ್ಜಿ ಶುಕ್ರವಾರ ಹೇಳಿದ್ದಾರೆ.

ಸರಕಾರದ ಸಬ್ಸಿಡಿ ಯೋಜನೆಗಳ ಫಲಾನುಭವಿಗಳು ಮುಂದಿನ ಮಾರ್ಚ್‌ 31ರೊಳಗೆ ಆಧಾರ್‌ ಕಾರ್ಡ್‌ ಲಿಂಕ್‌ ಹೊಂದುವುದು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಸರಕಾರ ಇತ್ತೀಚೆಗೆ ಸುಪ್ರೀಂ ಕೋರ್ಟ್‌ಗೆ ಸ್ಪಷ್ಟ ಪಡಿಸಿತ್ತು.

ಇದರ ವಿರುದ್ಧ, ಬಂಗಾಳ ಸರಕಾರದ ತಕರಾರೂ ಸೇರಿದಂತೆ ಹಲವು ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

SC to hear Mamata govt's plea on Aadhaar on Oct 30
Vijaya Karnataka Web sc to hear mamata govts plea on aadhaar on oct 30
ಆಧಾರ್‌ಗೆ ದೀದಿ ತಕರಾರು: ಅ.30ಕ್ಕೆ ಸುಪ್ರೀಂ ವಿಚಾರಣೆ


NEW DELHI: The Supreme Court would hear on October 30 a plea filed by the Mamata Banerjee-led West Bengal government+ against the Centre's move to make Aadhaar mandatory for availing the benefits of various social welfare schemes.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ