ಆ್ಯಪ್ನಗರ

ತಮಿಳುನಾಡಿನಲ್ಲಿ ಮಳೆ ಆರ್ಭಟ , ಐವರು ಬಲಿ

ವಾಯುಭಾರ ಕುಸಿತದ ಪರಿಣಾಮ ನೆರೆಯ ತಮಿಳುನಾಡಿನಲ್ಲಿ ಮಳೆ ಆರ್ಭಟ ಹೆಚ್ಚಿದ್ದು, ಕರಾವಳಿ ಪ್ರದೇಶಗಳಲ್ಲಿ'ಆರೇಂಜ್‌ ಅಲರ್ಟ್‌'ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಐವರು ಬಲಿಯಾಗಿದ್ದಾರೆ.

Vijaya Karnataka Web 2 Dec 2019, 8:12 am
ಚೆನ್ನೈ: ವಾಯುಭಾರ ಕುಸಿತದ ಪರಿಣಾಮ ನೆರೆಯ ತಮಿಳುನಾಡಿನಲ್ಲಿ ಮಳೆ ಆರ್ಭಟ ಹೆಚ್ಚಿದ್ದು, ಕರಾವಳಿ ಪ್ರದೇಶಗಳಲ್ಲಿ'ಆರೇಂಜ್‌ ಅಲರ್ಟ್‌' (ಭಾರಿ ಮಳೆ ಸಾಧ್ಯತೆ) ಘೋಷಿಸಲಾಗಿದೆ. ಕಳೆದ ಎರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಐವರು ಬಲಿಯಾಗಿದ್ದು, ಮುಂದಿನ ಎರಡು ದಿನವೂ ಮಳೆ-ಚಳಿಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Vijaya Karnataka Web school colleges shut in tamil nadu due to the heavy rain
ತಮಿಳುನಾಡಿನಲ್ಲಿ ಮಳೆ ಆರ್ಭಟ , ಐವರು ಬಲಿ


''ವಾಯುಭಾರ ಕುಸಿತದಿಂದ ಕರಾವಳಿ ಪ್ರದೇಶಗಳಲ್ಲಿವ್ಯಾಪಕ ಮಳೆ ಬೀಳುತ್ತಿದೆ. ತಮಿಳುನಾಡಿನ ರಾಮನಾಥಪುರಂ, ಶಿವಗಂಗಾ, ತಂಜಾವೂರು, ಪುದುಕೊಟ್ಟೈ, ತಿರುವರೂರು, ನಾಗಪಟ್ಟಣಂ, ಕಡಲೂರು ಮತ್ತು ನೆರೆಯ ಪುದುಚೇರಿ, ಕರೈಕಲ್‌ನಲ್ಲಿಧಾರಾಕಾರ ಮಳೆ ಸುರಿಯುತ್ತಿದೆ. ಇದೇ ಸ್ಥಿತಿ ಇನ್ನೂ ಎರಡು ದಿನ ಮುಂದುವರಿಯಲಿದೆ,'' ಎಂದು ಹವಾಮಾನ ಇಲಾಖೆ ತಿಳಿಸಿದೆ. ಲಕ್ಷದ್ವೀಪ ಸಮೀಪ ಆಗ್ನೇಯ ಅರಬ್ಬಿ ಸಮುದ್ರದಲ್ಲಿವಾಯುಭಾರ ಕುಸಿತ ಉಂಟಾಗಿದ್ದು, ನೆರೆಹೊರೆ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ