ಆ್ಯಪ್ನಗರ

'ಐ ಲವ್ ಪಾಕಿಸ್ತಾನ' ಎಂದ ಮಣಿಶಂಕರ್ ಅಯ್ಯರ್ ವಿರುದ್ಧ ದೇಶದ್ರೋಹದ ಪ್ರಕರಣ

ಶತ್ರುರಾಷ್ಟ್ರ ಪಾಕಿಸ್ತಾನದ ಪರ ಹೇಳಿಕೆ ನೀಡಿದ ಕಾಂಗ್ರೆಸ್ ಉಚ್ಚಾಟಿತ ನಾಯಕ ಮಣಿಶಂಕರ್ ಅಯ್ಯರ್ ವಿರುದ್ಧ ದೇಶದ್ರೋಹ ಹಾಗೂ ಮಾನನಷ್ಟ ಪ್ರಕರಣ ದಾಖಲಾಗಿದೆ.

Vijaya Karnataka Web 16 Feb 2018, 10:44 am
ಕೋಟಾ: ಶತ್ರುರಾಷ್ಟ್ರ ಪಾಕಿಸ್ತಾನದ ಪರ ಹೇಳಿಕೆ ನೀಡಿದ ಕಾಂಗ್ರೆಸ್ ಉಚ್ಚಾಟಿತ ನಾಯಕ ಮಣಿಶಂಕರ್ ಅಯ್ಯರ್ ವಿರುದ್ಧ ಕೋಟಾದ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೇಶದ್ರೋಹ ಹಾಗೂ ಮಾನನಷ್ಟ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಫೆ.20ರಂದು ವಿಚಾರಣೆ ನಡೆಯಲಿದೆ.
Vijaya Karnataka Web sedition case filed against mani shankar aiyar in kota
'ಐ ಲವ್ ಪಾಕಿಸ್ತಾನ' ಎಂದ ಮಣಿಶಂಕರ್ ಅಯ್ಯರ್ ವಿರುದ್ಧ ದೇಶದ್ರೋಹದ ಪ್ರಕರಣ


ಕೋಟಾದ ಭಾರತೀಯ ಜನತಾ ಪಾರ್ಟಿಯ ಒಬಿಸಿ ವಿಂಗ್ ಮುಖ್ಯಸ್ಥ ಅಶೋಕ್ ಚೌಧರಿ ಅವರು ಐಪಿಸಿ ಸೆಕ್ಷನ್ 124 (ಎ), 500 ಮತ್ತು 504 ಅಡಿಯಲ್ಲಿ ಅಯ್ಯರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅಯ್ಯರ್, 'ನಾನು ಪಾಕಿಸ್ತಾನವನ್ನು ಪ್ರೀತಿಸುತ್ತೇನೆ. ಏಕೆಂದರೆ, ನಾನು ಭಾರತವನ್ನು ಪ್ರೀತಿಸುತ್ತೇನೆ' ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ಅಲ್ಲದೆ, ಉಭಯ ರಾಷ್ಟ್ರಗಳು ಪರಸ್ಪರ ಮಾತನಾಡಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ. ಸಮಸ್ಯೆ ಇತ್ಯರ್ಥಕ್ಕೆ ಇಸ್ಲಾಮಾಬಾದ್ ದ್ವೀಪಕ್ಷೀಯ ಪ್ರಾಮುಖ್ಯತೆ ಮಾತುಕತೆಯ ನೀತಿಯನ್ನು ಒಪ್ಪಿದೆ. ಆದರೆ, ದಿಲ್ಲಿ ಒಪ್ಪಿಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದರು.

ಮಣಿಶಂಕರ್ ಅಯ್ಯರ್ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಕೂಡಲೇ ಅವರನ್ನು ಬಂಧಿಸುವಂತೆ ದೂರು ನೀಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ