ಆ್ಯಪ್ನಗರ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಿವಸೇನೆ ಆಗ್ರಹ

ಇಡೀ ದೇಶ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಯನ್ನು ದೇಶ ಎದುರು ನೋಡುತ್ತಿದೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಹೇಳಿದರು.

PTI 8 Sep 2019, 7:19 am
ಮುಂಬಯಿ: ಕಾಶ್ಮೀರದ ಅಭಿವೃದ್ಧಿಗೆ ಕಂಟಕವಾಗಿದ್ದ 370ನೇ ವಿಧಿ ರದ್ದತಿಯಂತಹ ದಿಟ್ಟ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಿಸುವುದು ದೊಡ್ಡ ಕೆಲಸವೆನಿಸದು. ಇಡೀ ದೇಶವೇ ರಾಮ ಮಂದಿರ ನಿರ್ಮಾಣ ಹಾಗೂ ಏಕರೂಪದ ನಾಗರಿಕ ಸಂಹಿತೆ ಜಾರಿಯನ್ನು ಎದುರು ನೋಡುತ್ತಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಾರ್ಯ ಪ್ರವೃತ್ತವಾಗಬೇಕು ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್‌ ಠಾಕ್ರೆ ಆಗ್ರಹಿಸಿದ್ದಾರೆ.
Vijaya Karnataka Web udhdhav


ಈ ವರ್ಷಾಂತ್ಯಕ್ಕೆ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ನಡೆಯಲಿರುವ ಹೊತ್ತಲ್ಲಿಯೇ ಠಾಕ್ರೆ ರಾಮ ಮಂದಿರ, ಏಕರೂಪ ನಾಗರಿಕ ಸಂಹಿತೆ ವಿಚಾರ ಪ್ರಸ್ತಾಪಿಸಿದ್ದಾರೆ. ಮುಂಬಯಿನ ಕಾರ‍್ಯಕ್ರಮವೊಂದರಲ್ಲಿ ಶನಿವಾರ ಮಾತನಾಡಿದ ಠಾಕ್ರೆ, ''ಮೋದಿ ಅವರ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯ ಪಥದತ್ತ ಮುನ್ನಡೆಯುತ್ತಿದೆ. ಚಂದ್ರಯಾನ 2 ಯೋಜನೆ ಕೊನೆ ಕ್ಷಣದಲ್ಲಿ ಹಿನ್ನಡೆ ಅನುಭವಿಸಿದ ಬೆನ್ನಲ್ಲೇ ವೈಫಲ್ಯಕ್ಕೆ ವಿಜ್ಞಾನಿಗಳನ್ನು ದೂಷಿಸದೇ ಮರಳಿ ಯತ್ನವ ಮಾಡಿ ಎಂದು ಅವರಲ್ಲಿ ಆತ್ಮವಿಶ್ವಾಸ ತುಂಬಿದ ಪ್ರಧಾನಿಯವರ ಮಾತುಗಳೇ ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ. ವೈಫಲ್ಯಗಳನ್ನು ಮೆಟ್ಟಿನಿಂತು ಧೈರ್ಯದಿಂದ ಮುನ್ನುಗ್ಗುವ ಮೋದಿ ಅವರ ನಾಯಕತ್ವದಲ್ಲಿ ದೇಶ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ಇಡೀ ದೇಶ ಅವರಿಂದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಹಾಗೂ ಏಕರೂಪ ನಾಗರಿಕ ಸಂಹಿತೆ ಜಾರಿಯನ್ನು ದೇಶ ಎದುರು ನೋಡುತ್ತಿದೆ. ಅವೆರಡನ್ನೂ ಜಾರಿಗೊಳಿಸುವ ಸಾಮರ್ಥ್ಯ‌ ಕೂಡ ಮೋದಿ ಅವರಿಗಿದೆ,'' ಎಂದು ಹೇಳಿದರು.

ಕಾಶ್ಮೀರ ಭಾರತದ ಅಂಗ: ಕಾಶ್ಮೀರ ಯಾವತ್ತಿದ್ದರೂ ಭಾರತದ ಅವಿಭಾಜ್ಯ ಅಂಗ. ಜಮ್ಮು-ಕಾಶ್ಮೀರವನ್ನು ಅಸ್ಥಿರಗೊಳಿಸುವ ಪಾಕಿಸ್ತಾನದ ಯಾವ ಪ್ರಯತ್ನಗಳೂ ಫಲ ನೀಡದು. ಪಾಕ್‌ನ ಕುತಂತ್ರಗಳನ್ನು ಭಾರತ ಬಗ್ಗುಬಡಿಯಲಿದೆ ಎಂದ ಠಾಕ್ರೆ, ''ಮೋದಿ ಅವರು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಎಂಬುದನ್ನು ಬರೀ ಮಾಯಿ ಮಾತಿನಲ್ಲಿ ಹೇಳದೇ ಕೃತಿ ರೂಪದಲ್ಲಿ ತೋರಿಸಿದ್ದಾರೆ,'' ಎಂದು ಹೊಗಳಿದರು. ಬಿಜೆಪಿ ಜತೆಗಿನ ಶಿವಸೇನೆ ಮೈತ್ರಿ ಅಭಾಧಿತವಾಗಿ ಮುಂದುವರಿಯಲಿದೆ. ನಮ್ಮ ಮೈತ್ರಿಕೂಟ ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ