ಪುಣೆ: ದೇಶದಲ್ಲಿ ಸಾರ್ವತ್ರಿಕ ಬಳಕೆಗೆ ಅನುಮತಿ ಪಡೆದಿರುವ ಕೋವಿಶೀಲ್ಡ್ ಲಸಿಕೆಯನ್ನು ತಯಾರಿಸುತ್ತಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ನಿನ್ನೆ ನಡೆದ ಅಗ್ನಿ ಅವಘಡ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು.
ಘಟನೆಗೆ ಆತಂಕ ವ್ಯಕ್ತಪಡಿಸಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಚೇರ್ಮೆನ್ ಸಿರಸ್ ಎಸ್ ಪೂನಾವಾಲಾ, ಅವಘಡದಲ್ಲಿ ಸಾವನ್ನಪ್ಪಿರುವ ಕಾರ್ಮಿಕರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿ ಕಡೆಯಿಂದ ಮೃತರ ಕುಟುಂಬದವರಿಗೆ ತಲಾ ಇಪ್ಪತ್ತೈದು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ನಮಗೆಲ್ಲ ಇಂದು ಅತ್ಯಂತ ದುಃಖದ ದಿನವಾಗಿದೆ. ಮಂಜ್ರಿಯ ವಿಶೇಷ ಆರ್ಥಿಕ ವಲಯ(SEZ)ದ ಭಾಗವಾಗಿದ್ದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್ 1ರ ಒಳಗಿರುವ ಕಟ್ಟಡದಲ್ಲಿ ನಡೆದ ಅಗ್ನಿ ದುರಂತದಲ್ಲಿ ಪ್ರಾಣಹಾನಿ ಸಂಭವಿಸಿದೆ. ಇದರಿಂದ ನಾವು ತುಂಬಾ ದುಃಖಿತರಾಗಿದ್ದೇವೆ ಮತ್ತು ಅಗಲಿದವರ ಕುಟುಂಬಗಳಿಗೆ ನಮ್ಮ ಸಂತಾಪವನ್ನು ಅರ್ಪಿಸುತ್ತೇವೆ ಎಂದು ಹೇಳಿದ್ದಾರೆ.
ಅಲ್ಲದೇ, ಈ ನಿಟ್ಟಿನಲ್ಲಿ ಮಾನದಂಡಗಳ ಪ್ರಕಾರ ಕಡ್ಡಾಯ ಮೊತ್ತಕ್ಕೆ ಹೆಚ್ಚುವರಿಯಾಗಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹25 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಿದ್ದೇವೆ. ಇಂತಹ ದುಃಖದ ಸಮಯದಲ್ಲಿ ಪ್ರತಿಯೊಬ್ಬರ ಕಾಳಜಿ ಮತ್ತು ಪ್ರಾರ್ಥನೆಗಾಗಿ ನಾವು ಕೃತಜ್ಞತೆಯನ್ನು ಅರ್ಪಿಸುತ್ತೇವೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಎಂ.ಡಿ ಸಿರಸ್ ಎಸ್ ಪೂನಾವಾಲಾ ತಿಳಿಸಿದ್ದಾರೆ.
ಘಟನೆಗೆ ಆತಂಕ ವ್ಯಕ್ತಪಡಿಸಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಚೇರ್ಮೆನ್ ಸಿರಸ್ ಎಸ್ ಪೂನಾವಾಲಾ, ಅವಘಡದಲ್ಲಿ ಸಾವನ್ನಪ್ಪಿರುವ ಕಾರ್ಮಿಕರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಕಂಪನಿ ಕಡೆಯಿಂದ ಮೃತರ ಕುಟುಂಬದವರಿಗೆ ತಲಾ ಇಪ್ಪತ್ತೈದು ಲಕ್ಷ ಪರಿಹಾರ ಘೋಷಿಸಿದ್ದಾರೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ನಮಗೆಲ್ಲ ಇಂದು ಅತ್ಯಂತ ದುಃಖದ ದಿನವಾಗಿದೆ. ಮಂಜ್ರಿಯ ವಿಶೇಷ ಆರ್ಥಿಕ ವಲಯ(SEZ)ದ ಭಾಗವಾಗಿದ್ದ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್ 1ರ ಒಳಗಿರುವ ಕಟ್ಟಡದಲ್ಲಿ ನಡೆದ ಅಗ್ನಿ ದುರಂತದಲ್ಲಿ ಪ್ರಾಣಹಾನಿ ಸಂಭವಿಸಿದೆ. ಇದರಿಂದ ನಾವು ತುಂಬಾ ದುಃಖಿತರಾಗಿದ್ದೇವೆ ಮತ್ತು ಅಗಲಿದವರ ಕುಟುಂಬಗಳಿಗೆ ನಮ್ಮ ಸಂತಾಪವನ್ನು ಅರ್ಪಿಸುತ್ತೇವೆ ಎಂದು ಹೇಳಿದ್ದಾರೆ.
ಅಲ್ಲದೇ, ಈ ನಿಟ್ಟಿನಲ್ಲಿ ಮಾನದಂಡಗಳ ಪ್ರಕಾರ ಕಡ್ಡಾಯ ಮೊತ್ತಕ್ಕೆ ಹೆಚ್ಚುವರಿಯಾಗಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹25 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಿದ್ದೇವೆ. ಇಂತಹ ದುಃಖದ ಸಮಯದಲ್ಲಿ ಪ್ರತಿಯೊಬ್ಬರ ಕಾಳಜಿ ಮತ್ತು ಪ್ರಾರ್ಥನೆಗಾಗಿ ನಾವು ಕೃತಜ್ಞತೆಯನ್ನು ಅರ್ಪಿಸುತ್ತೇವೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಎಂ.ಡಿ ಸಿರಸ್ ಎಸ್ ಪೂನಾವಾಲಾ ತಿಳಿಸಿದ್ದಾರೆ.