ಆ್ಯಪ್ನಗರ

ಕಣಿವೆ ರಾಜ್ಯಕ್ಕೆ ಶಾ ಭೇಟಿ: ಭದ್ರತಾ ಪರಿಶೀಲನೆ

ಎಲ್ಲ ರೀತಿಯ ಶಿಷ್ಟಾಚಾರಗಳನ್ನು ಬದಿಗೊತ್ತಿದ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ತಮ್ಮ ರಾಜಕೀಯ ಸಲಹೆಗಾರ ಮತ್ತು ಹಿರಿಯ ಅಧಿಕಾರಿಗಳ ಜತೆಗೂಡಿ ವಿಮಾನ ನಿಲ್ದಾಣಕ್ಕೆ ತೆರಳಿ ಅಮಿತ್‌ ಶಾ ಅವರನ್ನು ಬರ ಮಾಡಿಕೊಂಡರು.

PTI 27 Jun 2019, 5:00 am
ಶ್ರೀನಗರ: ಅಧಿಕಾರ ವಹಿಸಿಕೊಂಡ ಬಳಿಕ ಜಮ್ಮು-ಕಾಶ್ಮೀರಕ್ಕೆ ಬುಧವಾರ ಚೊಚ್ಚಲ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಕಣಿವೆ ರಾಜ್ಯದ ಭದ್ರತಾ ಪರಿಸ್ಥಿತಿಯ ಪರಿಶೀಲನೆ ನಡೆಸಿದರು.
Vijaya Karnataka Web 799135-shah-use


ಎಲ್ಲ ರೀತಿಯ ಶಿಷ್ಟಾಚಾರಗಳನ್ನು ಬದಿಗೊತ್ತಿದ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ತಮ್ಮ ರಾಜಕೀಯ ಸಲಹೆಗಾರ ಮತ್ತು ಹಿರಿಯ ಅಧಿಕಾರಿಗಳ ಜತೆಗೂಡಿ ವಿಮಾನ ನಿಲ್ದಾಣಕ್ಕೆ ತೆರಳಿ ಅಮಿತ್‌ ಶಾ ಅವರನ್ನು ಬರ ಮಾಡಿಕೊಂಡರು. ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡಿದರೆ ಮಾತ್ರ ರಾಜ್ಯಪಾಲರು ಹೋಗಿ ಅವರನ್ನು ಬರ ಮಾಡಿಕೊಳ್ಳುವುದು ಇದುವರೆಗಿನ ಸಂಪ್ರದಾಯವಾಗಿತ್ತು. ಆದರೆ ಈ ಬಾರಿ ಆ ಸಂಪ್ರದಾಯ ಮೀರಿ ಮಲಿಕ್‌ ಅವರು ಎರಡು ದಿನಗಳ ರಾಜ್ಯ ಭೇಟಿಗೆ ಆಗಮಿಸಿದ ಗೃಹ ಸಚಿವರನ್ನು ಬರ ಮಾಡಿಕೊಂಡರು.

ರಾಜ್ಯಕ್ಕೆ ಆಮಿಸಿದ ತಕ್ಷಣ ಶಾ ಅವರು ಒಂದು ನಿಮಿಷವೂ ವ್ಯರ್ಥ ಮಾಡದೆ ಉನ್ನತಾಧಿಕಾರಿಗಳ ಸಭೆ ನಡೆಸಿ ಭದ್ರತಾ ವ್ಯವಸ್ಥೆಯ ಸ್ಥಿತಿಗತಿ ಮಾಹಿತಿ ಪಡೆದರು. ರಾಜ್ಯಪಾಲ ಮಲಿಕ್‌, ಅವರ ಸಲಹೆಗಾರ ಕೆ.ವಿಜಯ್‌ ಕುಮಾರ್‌, ಗೃಹ ಕಾರ್ಯದರ್ಶಿ ರಾಜೀವ್‌ ಗೌಬಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವಿ.ಆರ್‌.ಸುಬ್ರಮಣ್ಯಂ, ದಕ್ಷಿಣ ಸೇನಾ ಕಮಾಂಡರ್‌ ಲೆಫ್ಟಿನಂಟ್‌ ಜನರಲ್‌ ರಣಬೀರ್‌ ಸಿಂಗ್‌, ಡಿಜಿಪಿ ದಿಲ್ಬಾಗ್‌ ಸಿಂಗ್‌ ಮತ್ತು ಕಣಿವೆ ರಾಜ್ಯದ ವಿಭಾಗೀಯ ಆಯುಕ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪುಲ್ವಾಮ ದಾಳಿ ನಂತರ ರಾಜ್ಯದ ಭದ್ರತಾ ವ್ಯವಸ್ಥೆಯಲ್ಲಿ ಆದ ಬದಲಾವಣೆಗಳ ಬಗ್ಗೆ ಗೃಹ ಸಚಿವರಿಗೆ ಮಾಹಿತಿ ನೀಡಲಾಯಿತು. ಉಗ್ರರ ನಿರ್ಮೂಲನೆಗೆ ಕೈಗೊಂಡ ಕ್ರಮಗಳ ವಿವರ ಪಡೆದರು. ಇದೇ ವೇಳೆ, ಜುಲೈ 1ರಿಂದ ಆರಂಭಗೊಳ್ಳುವ ಅಮರನಾಥ ಯಾತ್ರೆಗೆ ಕೈಗೊಳ್ಳಬೇಕಾದ ಬಿಗಿ ಕ್ರಮಗಳ ಕುರಿತು ಶಾ ಸಲಹೆ ಸೂಚನೆಗಳನ್ನು ನೀಡಿದರು ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ