ಮುಂಬಯಿ: ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಮಹಾರಾಷ್ಟ್ರದಲ್ಲಿ ಆಗಸ್ಟ್ 1ರಿಂದ 'ಮಹಾ ಜನಾದೇಶ ಯಾತ್ರೆ'ಯನ್ನು ಆರಂಭಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷದ ಅಧ್ಯಕ್ಷ ಅಮಿತ್ ಶಾ ರಾರಯಲಿಗೆ ಚಾಲನೆ ನೀಡಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ''ಮೊಝಾರಿ ಜಿಲ್ಲೆಯ ಅಮರಾವತಿಯಲ್ಲಿ ರಾರಯಲಿಗೆ ಅಮಿತ್ ಶಾ ಚಾಲನೆ ನೀಡಲಿದ್ದಾರೆ. ನಾಸಿಕ್ನಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಪಾಲ್ಗೊಳ್ಳುವ ಈ ಸಭೆಯ ದಿನಾಂಕ ಇನ್ನು ನಿರ್ಧಾರಗೊಳ್ಳಬೇಕಿದೆ,'' ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದರು. ಒಂದು ತಿಂಗಳ ಕಾಲ ನಡೆಯುವ ಮಹಾ ಜನಾದೇಶ ಯಾತ್ರೆಯು ರಾಜ್ಯದ 288 ವಿಧಾನಸಭೆ ಕ್ಷೇತ್ರಗಳ ಪೈಕಿ 152 ಕ್ಷೇತ್ರಗಳನ್ನು ಕ್ರಮಿಸಲಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು 104 ರಾರಯಲಿಗಳು ಹಾಗೂ 200 ಸಣ್ಣ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಹಾರಾಷ್ಟ್ರದಲ್ಲಿ ಆ.1ರಂದು ಬಿಜೆಪಿ ಮಹಾ ಜನಾದೇಶ ಯಾತ್ರೆಗೆ ಚಾಲನೆ
ಪಕ್ಷದ ಅಧ್ಯಕ್ಷ ಅಮಿತ್ ಶಾ ಯಾತ್ರೆಗೆ ಚಾಲನೆ ನೀಡಲಿದ್ದು, ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
PTI 24 Jul 2019, 5:00 am