ಆ್ಯಪ್ನಗರ

ನಾಲ್ಕು ತಿಂಗಳ ಹಸುಗೂಸು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತದೆಯೇ: ಸುಪ್ರೀಂ

ಶಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ತೊಡಗಿರುವವರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಪಟ್ಟಂತೆ ಕೇಂದ್ರ, ಹೊಸದಿಲ್ಲಿ ಸರಕಾರ ಮತ್ತು ಪೊಲೀಸರಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ.

Vijaya Karnataka Web 10 Feb 2020, 5:03 pm
ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಹೊಸದಿಲ್ಲಿಯ ಶಹೀನ್‌ಭಾಗ್‌ನಲ್ಲಿ ಇತ್ತೀಚೆಗೆ ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಹಸುಗೂಸು ಮೃತಪಟ್ಟಿರುವ ಘಟನೆಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ.
Vijaya Karnataka Web ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌


ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ನ್ಯಾಯಪೀಠ ಈ ಕುರಿತು ಸ್ವಯಂ ಪ್ರೇರಿತ ವಿಚಾರಣೆ ನಡೆಸಿತು.

ನಾಲ್ಕು ತಿಂಗಳ ಹಸುಗೂಸು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತದೆಯೇ ಎಂದು ಮಹಿಳಾ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಇಷ್ಟು ಸಣ್ಣು ಮಗುವನ್ನು ಪ್ರತಿಭಟನೆಯ ಸ್ಥಳಕ್ಕೆ ಕೊಂಡೊಯ್ದಿದ್ದೇ ತಪ್ಪು ಎಂದರು.

ಪ್ರತಿಭಟನೆಯ ಸ್ಥಳಕ್ಕೆ ಹಸುಗೂಸನ್ನು, ಚಿಕ್ಕಚಿಕ್ಕ ಮಕ್ಕಳನ್ನು ಕೊಂಡೊಯ್ಯುವ ಬಗ್ಗೆ ಪತ್ರ ಬಂದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ನ್ಯಾಯಪೀಠ ಸ್ವಯಂ ವಿಚಾರಣೆ ನಡೆಸಿತು.

ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ, ನ್ಯಾಯಮೂರ್ತಿಗಳಾದ ಬಿಆರ್‌ ಗವಾಯಿ, ಸೂರ್ಯಕಾಂತ್‌ ನ್ಯಾಯಪೀಠದಲ್ಲಿದ್ದಾರೆ.

ಕೇಂದ್ರಕ್ಕೆ ನೋಟಿಸ್‌

ಮತ್ತೊಂದು ಅರ್ಜಿಯ ವಿಚಾರಣೆ ಕೂಡ ನಡೆಯಿತು. ಶಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ತೊಡಗಿರುವವರನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಪಟ್ಟಂತೆ ಕೇಂದ್ರ, ಹೊಸದಿಲ್ಲಿ ಸರಕಾರ ಮತ್ತು ಪೊಲೀಸರಿಗೆ ಸುಪ್ರೀಂ ಕೋರ್ಟ್ ನೊಟೀಸ್ ಜಾರಿ ಮಾಡಿದೆ.

ಪ್ರತಿಭಟನೆ ಹೆಸರಿನಲ್ಲಿ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆ ಮಾಡಬಾರದೆಂದು ತರಾಟೆಗೆ ತಾಕೀತು ಮಾಡಿದೆ.

ನ್ಯಾಯಮೂರ್ತಿ ಎಸ್ ಕೆ ಕೌಲ್ ಅವರನ್ನೊಳಗೊಂಡ ನ್ಯಾಯಪೀಠ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ ಪ್ರತಿಭಟನೆಗೆ ನಿಗದಿಪಡಿಸಿರುವ ಪ್ರದೇಶಗಳಲ್ಲಿ ಅದನ್ನು ಮಾಡಬೇಕು. ಅದು ಬಿಟ್ಟು ಎಲ್ಲೆಂದರಲ್ಲಿ ಪ್ರತಿಭಟನೆ ಮಾಡಲು ಆರಂಭಿಸಿದರೆ ಪರಿಸ್ಥಿತಿ ಏನಾಗಬಹುದು ಎಂದು ನ್ಯಾಯಪೀಠ ತಿಳಿಸಿದೆ.

ಶಹೀನ್‌ಬಾಗ್‌ನಲ್ಲಿ ಸಿಎಎ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿ ಕೆಲವು ವಕೀಲರು ಅರ್ಜಿ ಸಲ್ಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ