ಆ್ಯಪ್ನಗರ

ಮಹಾರಾಷ್ಟ್ರ: ಸರಕಾರ ರಚನೆ ಕುರಿತು ಸೋನಿಯಾ ಜತೆ ಚರ್ಚಿಸಿಲ್ಲ ಎಂದ ಶರದ್‌ ಪವಾರ್‌

ಮಹಾರಾಷ್ಟ್ರದಲ್ಲಿ ಚುನಾವಣೆ ಫಲಿತಾಂಶ ಬಂದೂ ತಿಂಗಳುಗಳೇ ಆದರೂ ಸರಕಾರ ರಚನೆ ಪ್ರಕ್ರಿಯೆ ಮಾತ್ರ ಕಗ್ಗಂಟ್ಟಾಗಿಯೇ ಮುಂದುವರಿದಿದೆ. ಕಾಂಗ್ರೆಸ್‌, ಎನ್‌ಸಿಪಿ ನಿರಂತ್ರ ಪ್ರಯತ್ನ ನಡೆಸುತ್ತಲೇ ಇದೆ.

Vijaya Karnataka Web 18 Nov 2019, 8:35 pm
ಮುಂಬಯಿ: ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಬಿಕ್ಕಟ್ಟು ಕಗ್ಗಂಟ್ಟಾಗಿಯೇ ಮುಂದುವರಿದಿದೆ.
Vijaya Karnataka Web sharad pawar meets sonia gandhi says did not discuss about govt formation
ಮಹಾರಾಷ್ಟ್ರ: ಸರಕಾರ ರಚನೆ ಕುರಿತು ಸೋನಿಯಾ ಜತೆ ಚರ್ಚಿಸಿಲ್ಲ ಎಂದ ಶರದ್‌ ಪವಾರ್‌


ಕಾಂಗ್ರೆಸ್‌, ಶಿವಸೇನೆ ಮತ್ತು ಎನ್‌ಸಿಪಿ ಮೈತ್ರಿ ಸರಕಾರ ರಚನೆಯಾಗಲಿದೆ ಎಂಬ ಬಗ್ಗೆ ಮಾತುಕತೆಗಳು ಜೋರಾಗಿ ಸಾಗಿವೆ.

ಈ ಬೆಳವಣಿಗೆ ಬೆನ್ನಲ್ಲೇ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಕಾಂಗ್ರೆಸ್‌ನ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಒಂದು ಗಂಟೆಗೂ ಹೆಚ್ಚು ಕಾಲ ಉಭಯ ನಾಯಕರು ಚರ್ಚೆ ನಡೆಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶರದ್‌ ಪವಾರ್‌, ಮಹಾರಾಷ್ಟ್ರದಲ್ಲಿ ಸರಕಾರ ರಚನೆ ಕುರಿತು ಯಾವುದೇ ರೀತಿಯ ಮಾತುಕತೆಯನ್ನು ನಡೆಸಿಲ್ಲ ಎಂದರು.

ಆದರೆ ಮಹಾರಾಷ್ಟ್ರದಲ್ಲಿ ಇರುವ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು ಎಂದು ಶರದ್‌ ಪವಾರ್‌ ಸ್ಪಷ್ಟಪಡಿಸಿದರು.

ಮಹಾರಾಷ್ಟ್ರದಲ್ಲಿನ ಸಂಖ್ಯಾಬಲ, ಮುಂದೆ ನಡೆಸಬಹುದಾದ ಕಾರ್ಯತಂತ್ರಗಳ ಬಗ್ಗೆಯೂ ಮಾತುಕತೆ ನಡೆಸಲಾಯಿತು ಎಂದರು.

ಮುಂದಿನ ಒಂದೆರಡು ದಿನಗಳಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶರದ್‌ ಪವಾರ್‌ ಮಾಹಿತಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ