ಆ್ಯಪ್ನಗರ

ರಾಮಮಂದಿರ:ಮತ್ತೆ ವಿವಾದಕ್ಕೆ ಸಿಲುಕಿದ ಶಶಿ ತರೂರ್

ಸಾಹಿತ್ಯ ಸಮಾರಂಭವೊಂದರಲ್ಲಿ ಮಾತನಾಡಿದ್ದ ಶಶಿ ತರೂರ್, 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವನ್ನು ಉಲ್ಲೇಖಿಸಿ ಯಾವೊಬ್ಬ ಉತ್ತಮ ಹಿಂದು ಕೂಡ ಮತ್ತೊಬ್ಬರ ಆರಾಧನಾಲಯವನ್ನು ಕೆಡವಿ ಅಲ್ಲಿ ರಾಮಮಂದಿರ ನಿರ್ಮಾಣಕ್ಕೆ ಇಚ್ಛಿಸುವುದಿಲ್ಲ ಎಂದಿದ್ದರು.

Vijaya Karnataka Web 15 Oct 2018, 8:19 pm
ಹೊಸದಿಲ್ಲಿ: ರಾಮಮಂದಿರ ಕುರಿತಾದ ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದ್ದು, ಬಿಜೆಪಿ ಅನಗತ್ಯ ವಿವಾದ ಸೃಷ್ಟಿಸುತ್ತಿದೆ. ನನ್ನ ಹೇಳಿಕೆ ಏನಿತ್ತು ಮತ್ತು ಅದರ ಆರ್ಥವೇನು ಎಂದು ಬಿಜೆಪಿ ಮೊದಲು ತಿಳಿದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.
Vijaya Karnataka Web Bengaluru: Congress MP Shashi Tharoor addresses a press conference ahead of Karn...


ಸಾಹಿತ್ಯ ಸಮಾರಂಭವೊಂದರಲ್ಲಿ ಮಾತನಾಡಿದ್ದ ಶಶಿ ತರೂರ್, 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣವನ್ನು ಉಲ್ಲೇಖಿಸಿ ಯಾವೊಬ್ಬ ಉತ್ತಮ ಹಿಂದು ಕೂಡ ಮತ್ತೊಬ್ಬರ ಆರಾಧನಾಲಯವನ್ನು ಕೆಡವಿ ಅಲ್ಲಿ ರಾಮಮಂದಿರ ನಿರ್ಮಾಣಕ್ಕೆ ಇಚ್ಛಿಸುವುದಿಲ್ಲ ಎಂದಿದ್ದರು.


ತರೂರ್ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ರಾಮಮಂದಿರ ನಿರ್ಮಾಣ ಕಾಂಗ್ರೆಸ್‌ ಇಷ್ಟವಿಲ್ಲ, ಕಾಂಗ್ರೆಸ್‌ ನಾಯಕರು ಕೂಡ ಅದನ್ನೇ ಬಯಸುತ್ತಾರೆ ಎಂದು ಬಿಜೆಪಿ ಹೇಳಿತ್ತು.

ಹೇಳಿಕೆ ವಿವಾದ ಸೃಷ್ಟಿಸುತ್ತಲೇ ಸ್ಪಷ್ಟನೆ ನೀಡಿರುವ ತರೂರ್, ಬಿಜೆಪಿ ಅನಗತ್ಯ ವಿವಾದ ಸೃಷ್ಟಿಸಿದೆ. ರಾಮ ಮಂದಿರ ನಿರ್ಮಾಣ ಬೇಡ ಎಂದು ನಾನು ಹೇಳಿಲ್ಲ, ಆದರೆ ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಿ ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ