ಆ್ಯಪ್ನಗರ

ಶಶಿಕಲಾ ಸಹೋದರ ದಿವಾಕರನ್‌ ಹೊಸ ಪಕ್ಷ ಸ್ಥಾಪನೆ

ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ ಅವರ ಕುಟುಂಬದಿಂದ ದೂರ ಉಳಿದಿರುವ ಸಹೋದರ ವಿ.ದಿವಾಕರನ್‌ ಭಾನುವಾರ ಹೊಸ ಪಕ್ಷ ಸ್ಥಾಪಿಸಿದ್ದು, ಅದಕ್ಕೆ 'ಅಣ್ಣಾ ದ್ರಾವಿಡರ್‌ ಕಳಗಂ' ಎಂದು ಹೆಸರಿಟ್ಟಿದ್ದಾರೆ.

Vijaya Karnataka 11 Jun 2018, 5:00 am
ಮನ್ನಾರ್‌ಗುಡಿ(ತಮಿಳುನಾಡು): ಎಐಎಡಿಎಂಕೆಯ ಉಚ್ಚಾಟಿತ ನಾಯಕಿ ವಿ.ಕೆ.ಶಶಿಕಲಾ ಅವರ ಕುಟುಂಬದಿಂದ ದೂರ ಉಳಿದಿರುವ ಸಹೋದರ ವಿ.ದಿವಾಕರನ್‌ ಭಾನುವಾರ ಹೊಸ ಪಕ್ಷ ಸ್ಥಾಪಿಸಿದ್ದು, ಅದಕ್ಕೆ 'ಅಣ್ಣಾ ದ್ರಾವಿಡರ್‌ ಕಳಗಂ' ಎಂದು ಹೆಸರಿಟ್ಟಿದ್ದಾರೆ.
Vijaya Karnataka Web Divakaran


ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ನಿಧನದ ಬಳಿಕ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ ಪಕ್ಷದಿಂದ ಮೂಲೆಗುಂಪಾದ ವಿ.ಕೆ. ಶಶಿಕಲಾ ಹಾಗೂ ಅವರ ಸೋದರ ಸಂಬಂಧಿ ಟಿ.ಟಿ.ವಿ. ದಿನಕರನ್‌ ಅವರು ಚೆನ್ನೈನ ಆರ್‌.ಕೆ.ನಗರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹೊತ್ತಿಗೆ 'ಅಮ್ಮಾ ಮಕ್ಕಳ್‌ ಮುನ್ನೇತ್ರ ಕಳಗಂ,'' ಪಕ್ಷ ಸ್ಥಾಪಿಸಿದ್ದರು. ಈಗ ಶಶಿಕಲಾ ಕುಟುಂಬದಿಂದ ಬೇರ್ಪಟ್ಟಿರುವ ಅವರ ಸಹೋದರ ದಿವಾಕರನ್‌ ಈಗ ದಿನಕರನ್‌ ವಿರುದ್ಧ ರಾಜಕೀಯ ಜಿದ್ದಾಜಿದ್ದಿ ಸಾಧಿಸಲು ಹೊಸ ಪಕ್ಷ ಸ್ಥಾಪಿಸಿದ್ದು, ಅವರು ಪಕ್ಷದ ಪ್ರಧಾನ ಕಾರ‍್ಯದರ್ಶಿಯಾಗಲಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಹಾಗೂ ಹೋರಾಟದ ರೂಪುರೇಷೆ ಸಿದ್ಧಪಡಿಸುವುದಾಗಿ ಅವರು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ