ಆ್ಯಪ್ನಗರ

ಶತ್ರುಘ್ನ ಸಿನ್ಹಗೆ ವಾರಾಣಸಿಯಿಂದ ಎಸ್‌ಪಿ ಟಿಕೆಟ್‌? ಮೋದಿ ವಿರುದ್ಧ ಸಮರಕ್ಕೆ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲು ಸಮಾಜವಾದಿ ಪಕ್ಷ ಹೊಸ ಅಸ್ತ್ರ ಪ್ರಯೋಗಿಸಲು ಸಿದ್ದತೆ ಮಾಡಿದೆ. ಬಾಲಿವುಡ್ ಖ್ಯಾತ ನಟ ಶತ್ರುಘ್ನ ಸಿನ್ಹ ಅವರನ್ನು ಮೋದಿ ವಿರುದ್ಧ ಕಣಕ್ಕಳಿಸಲು ಸಿದ್ಧತೆ ನಡೆಸಲಾಗಿದೆ

TIMESOFINDIA.COM 12 Oct 2018, 2:07 pm
[This story originally published in Times of India oct 12, 2018]
Vijaya Karnataka Web shatrughna


ಲಖನೌ:
ಮುಂಬರುವ ಲೋಕಸಭೆ ಚುನಾವಣೆಗೆ ಪ್ರಧಾನಿ ಮೋದಿಗೆ ಪೈಪೋಟಿ ನೀಡುವವರು ಯಾರು ಗೊತ್ತೇ?

ಸಮಾಜವಾದಿ ಪಾರ್ಟಿಯಿಂದ ಮೋದಿ ವಿರುದ್ಧ ಕಣಕ್ಕಿಳಿಯಲು ಹಿರಿಯ ಬಾಲಿವುಡ್‌ ನಟ ಶತ್ರುಘ್ನ ಸಿನ್ಹ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕೇಂದ್ರ ಮಾಜಿ ಹಣಕಾಸು ಸಚಿವ ಯಶ್ವಂತ್‌ ಸಿನ್ಹ, ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್‌ ಯಾದವ್‌ ಸೇರಿದಂತೆ ಇನ್ನಿತರ ಮುಖಂಡರೊಂದಿಗೆ ಶತ್ರಘ್ನ ಸಿನ್ಹ ಕಾಣಿಸಿಕೊಂಡಿದ್ದಾರೆ. ಸಮಾಜವಾದಿ ಪಾರ್ಟಿ ಕಚೇರಿಯಲ್ಲಿ ನಡೆದ ಜಯಪ್ರಕಾಶ್‌ ನಾರಾಯಣ್‌ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ನಾಯಕರು ಜತೆಯಾಗಿದ್ದಾರೆ. ಈ ವೇಳೆ ಶತ್ರುಘ್ನ ಅವರನ್ನು ಯಾವ ಕ್ಷೇತ್ರದಿಂದ ಚುನಾವಣೆಗೆ ಟಿಕೆಟ್‌ ನೀಡಿದರೆ ಉತ್ತಮ ಎಂಬ ವಿಚಾರ ಚರ್ಚೆಯಾಗಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ಮೋದಿ ಅವರ ವಿರುದ್ಧ ಸಾಕಷ್ಟು ಬಾರಿ ಧ್ವನಿ ಎತ್ತಿ, ನಿರ್ಧಾರಗಳನ್ನು ಖಂಡಿಸುತ್ತಲೇ ಬಂದಿರುವ ಶತ್ರುಘ್ನ ಸಿನ್ಹ, 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸರಿಯಾದ, ಸುರಕ್ಷಿತ ಕ್ಷೇತ್ರದ ಆಯ್ಕೆ ಮಾಡಿಕೊಳ್ಳಬೇಕಿದೆ. ವಾರಾಣಸಿಯಲ್ಲಿ ಶತ್ರುಘ್ನ ಅವರ ಅಭಿಮಾನಿ ಬಳಗ ಹೆಚ್ಚಿದೆ. ಹತ್ತಿರದ ಬಿಹಾರ ರಾಜ್ಯದವರಾದ ಸಿನ್ಹ, ಬಿಜೆಪಿಯಿಂದ ಬಂಡಾಯ ಸಾರಿ ಹೊರ ಬಂದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ