ಆ್ಯಪ್ನಗರ

ಕೂಡದ ಮೋದಿ ಭೇಟಿ, ಮಹಿಳೆಯಿಂದ ಬಸ್ಸಿಗೆ ಬೆಂಕಿ

ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಗೆ ಬಂದಾಗ ಅವರನ್ನು ಭೇಟಿ ಮಾಡಲು ಸಾಧ್ಯವಾಗದೆ ಹತಾಶೆಗೊಂಡ ಮಹಿಳೆಯೊಬ್ಬರು ಬಸ್ಸಿಗೆ ಬೆಂಕಿ ಹಚ್ಚಿದ ಘಟನೆ ಬುಧವಾರ ಲಖನೌದಲ್ಲಿ ನಡೆದಿದೆ...

Vijaya Karnataka 20 Sep 2018, 10:04 am
ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ ಅವರು ವಾರಾಣಸಿಗೆ ಬಂದಾಗ ಅವರನ್ನು ಭೇಟಿ ಮಾಡಲು ಸಾಧ್ಯವಾಗದೆ ಹತಾಶೆಗೊಂಡ ಮಹಿಳೆಯೊಬ್ಬರು ಬಸ್ಸಿಗೆ ಬೆಂಕಿ ಹಚ್ಚಿದ ಘಟನೆ ಬುಧವಾರ ಲಖನೌದಲ್ಲಿ ನಡೆದಿದೆ.
Vijaya Karnataka Web bus


ಉತ್ತರ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಐಷಾರಾಮಿ ಬಸ್ಸಿಗೆ ಮಹಿಳೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾರೆ. ಜ್ವಾಲೆ ವ್ಯಾಪಿಸುವ ಮುನ್ನವೇ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಈ ಕೃತ್ಯವೆಸಗಿದ ಮಹಿಳೆಯನ್ನು ವಂದನಾ ರಘವಂಶಿ ಎಂದು ಗುರುತಿಸಲಾಗಿದ್ದು, ಉತ್ತರ ಪ್ರದೇಶದಿಂದ ಪ್ರತ್ಯೇಕ ಪೂರ್ವಾಂಚಲ ರಾಜ್ಯ ಬೇಕು ಎಂಬುದು ಈಕೆಯ ಆಗ್ರಹ.

ತಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಒತ್ತಾಯಿಸಿ ವಂದನಾ ಆ.15 ರಂದು ಅನಿರ್ದಿಷ್ಟಾವಧಿ ಉಪವಾಸ ಕೈಗೊಂಡಿದ್ದರು. ಆರೋಗ್ಯ ಸ್ಥಿತಿ ಕೈಕೊಟ್ಟಿದ್ದರಿಂದ ಆ. 29ರಂದು ಉಪವಾಸ ಕೈ ಬಿಟ್ಟಿದ್ದರು. ಎರಡು ದಿನಳ ಹಿಂದೆ ಹುಟ್ಟು ಹಬ್ಬ ಆಚರಣೆ ಜತೆಗೆ ಹಲವು ಯೋಜನೆಗಳಿಗೆ ಚಾಲನೆ ನೀಡಲು ಮೋದಿ ವಾರಾಣಸಿಗೆ ಭೇಟಿ ನೀಡಿದಾಗ ಅವರನ್ನು ಭೇಟಿ ಮಾಡಲು ವಂದನಾಗೆ ಸಾಧ್ಯವಾಗಿರಲಿಲ್ಲ. ಕೃತ್ಯದ ಬಳಿಕ ಮಹಿಳೆಯನ್ನು ಬಂಧಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ