ಆ್ಯಪ್ನಗರ

ಕಪ್ಪೆಂದು ವ್ಯಂಗ್ಯ: ಐವರ ಹತ್ಯೆ

ಕಪ್ಪು ಮೈಬಣ್ಣದ ಬಗ್ಗೆ ಲೇವಡಿ ಮಾಡಿದ ಕಾರಣಕ್ಕೆ ಕುಪಿತಗೊಂಡ ಮಹಿಳೆಯೊಬ್ಬರು ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರಿಗೆ ಆಹಾರದಲ್ಲಿ ವಿಷ ಬೆರೆಸಿ ಐವರನ್ನು ಕೊಂದು ಹಾಕಿದ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರ ರಾಯಗಢದಲ್ಲಿ ನಡೆದಿದೆ.

Vijaya Karnataka 24 Jun 2018, 9:18 am
ರಾಯಗಢ: ಕಪ್ಪು ಮೈಬಣ್ಣದ ಬಗ್ಗೆ ಲೇವಡಿ ಮಾಡಿದ ಕಾರಣಕ್ಕೆ ಕುಪಿತಗೊಂಡ ಮಹಿಳೆಯೊಬ್ಬರು ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರಿಗೆ ಆಹಾರದಲ್ಲಿ ವಿಷ ಬೆರೆಸಿ ಐವರನ್ನು ಕೊಂದು ಹಾಕಿದ ಹೃದಯವಿದ್ರಾವಕ ಘಟನೆ ಮಹಾರಾಷ್ಟ್ರ ರಾಯಗಢದಲ್ಲಿ ನಡೆದಿದೆ.
Vijaya Karnataka Web Arrest


ಜೂನ್‌18ರಂದು ಘಟನೆ ನಡೆಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಹಾರಕ್ಕೆ ವಿಷ ಹಾಕಿದ ಮಹಿಳೆಯನ್ನು ಪ್ರಜ್ಞಾ ಸರ್ವಾಸೆ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟವರ ಪೈಕಿ ನಾಲ್ವರು ಮಕ್ಕಳು ಸೇರಿದ್ದಾರೆ.

ಇತರೆ 80 ಮಂದಿ ಅಸ್ವಸ್ಥಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮಹಿಳೆಯನ್ನು ಬಂಧಿಸಿ, ತನಿಖೆ ಆರಂಭಿಸಿದ್ದಾರೆ. ಕಪ್ಪೆಂದು ಎಲ್ಲರೂ ಹೀಯಾಳಿಸುತ್ತಿದ್ದ ಕಾರಣಕ್ಕೆ ಆಹಾರಕ್ಕೆ ವಿಷ ಹಾಕಿದ್ದಾಗಿ ಮಹಿಳೆ ತಪ್ಪೊಪ್ಪಿಕೊಂಡಿದ್ದಾಳೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ