ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ದಿಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಶೀಲಾ ದೀಕ್ಷಿತ್ ಮತ್ತು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪರಿಸ್ಪರ ಭೇಟಿಯಾಗಿ ಮಾತುಕತೆ ನಡೆಸಿದರು. ಕಾಂಗ್ರೆಸ್-ಆಮ್ ಆದ್ಮಿ ಪಕ್ಷ ಚುನಾವಣೆ ಹೊಂದಾಣಿಕೆಗೆ ಯತ್ನಿಸಿ ವಿಫಲಗೊಂಡು ಪ್ರತ್ಯೇಕ ಸ್ಪರ್ಧೆ ಮಾಡಿ ಮುಖಭಂಗ ಅನುಭವಿಸಿದ್ದವು. ಅದಾಗಿ ಇದೇ ಮೊದಲ ಬಾರಿ ಕೇಜ್ರಿವಾಲ್ ಅವರ ನಿವಾಸಕ್ಕೆ ಆಗಮಿಸಿದ ಶೀಲಾ ದೀಕ್ಷಿತ್, ರಾಜಧಾನಿ ನಗರವನ್ನು ಕಾಡುವ ಹಲವು ಸಮಸ್ಯೆಗಳ ಕುರಿತು ಚರ್ಚಿಸಿದರು. ಏತನ್ಮಧ್ಯೆ, ದಿಲ್ಲಿ ವಿಧಾನಸಭೆ ಚುನಾವಣೆಗೆ ಎಂಟು ತಿಂಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲೂ ಈ ನಾಯಕರ ಭೇಟಿಗೆ ವಿಶೇಷ ಮಹತ್ವ ಲಭಿಸಿದೆ.
ಕೇಜ್ರಿವಾಲ್-ಶೀಲಾ ದೀಕ್ಷಿತ್ ಭೇಟಿ
ದಿಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಶೀಲಾ ದೀಕ್ಷಿತ್ ಮತ್ತು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬುಧವಾರ ಪರಸ್ಪರ ಭೇಟಿಯಾಗಿ ದಿಲ್ಲಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
PTI 13 Jun 2019, 5:00 am