ಆ್ಯಪ್ನಗರ

ಸ್ವಾತಂತ್ರ್ಯ ದಿನ 'ಭಾರತ್ ಮಾತಾಕಿ ಜೈ' ಘೋಷಣೆ ಕಡ್ಡಾಯ: ಶಿಯಾ ವಕ್ಫ್ ಬೋರ್ಡ್ ಆದೇಶ

ತಮ್ಮ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ವಾಸೀಂ ರಿಜ್ವಿ ಅವರು ಹೊಸ ಆದೇಶವೊಂದನ್ನು ಹೊರಡಿಸಿದ್ದಾರೆ.

Times Now 12 Aug 2018, 4:06 pm
ಹೊಸದಿಲ್ಲಿ: ತಮ್ಮ ಹೇಳಿಕೆಗಳಿಂದ ಸದಾ ಸುದ್ದಿಯಲ್ಲಿರುವ ಉತ್ತರ ಪ್ರದೇಶದ ಶಿಯಾ ವಕ್ಫ್ ಬೋರ್ಡ್ ಅಧ್ಯಕ್ಷ ವಾಸೀಂ ರಿಜ್ವಿ ಅವರು ಹೊಸ ಆದೇಶವೊಂದನ್ನು ಹೊರಡಿಸಿದ್ದಾರೆ.
Vijaya Karnataka Web Rejvi


ವಕ್ಫ್ ವ್ಯಾಪ್ತಿಯ ಎಲ್ಲ ಶಾಖೆಗಳಲ್ಲಿ ಅಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಬಳಿಕ 'ಭಾರತ್ ಮಾತಾಕಿ ಜೈ' ಘೋಷಣೆ ಕಡ್ಡಾಯಗೊಳಿಸಿರುವ ರಿಜ್ವಿ, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡುತ್ತಾ ಅವರು ಈ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು 10 ಸಾವಿರ ರೂಪಾಯಿ ದೇಣಿಗೆಯನ್ನು ಸಹ ನೀಡಿ ಸುದ್ದಿಯಾಗಿದ್ದರು.



ಮದರಸಾಗಳು ದೇಶಕ್ಕೆ ಡಾಕ್ಟರ್, ಇಂಜಿನಿಯರ್‌, ಐಎಎಸ್ ಅಧಿಕಾರಿಗಳನ್ನು ನೀಡುತ್ತಿಲ್ಲ. ಬದಲಾಗಿ ಭಯೋತ್ಪಾದಕರನ್ನು ನೀಡುತ್ತಿವೆ. ಹೀಗಾಗಿ ಮದರಸಾಗಳನ್ನು ಮುಖ್ಯವಾಹಿನಿಗೆ ತರಬೇಕು ಎಂದು ಒತ್ತಾಯಿಸಿ ರಿಜ್ವಿ ಅವರು ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜನವರಿಯಲ್ಲಿ ಪತ್ರ ಬರೆದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ