ಆ್ಯಪ್ನಗರ

ಶಬರಿಮಲೆ ವಿವಾದ: ಶಿವಸೇನೆಯಿಂದ ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ

ಸಂಪ್ರದಾಯಕ್ಕೆ ವಿರುದ್ಧವಾಗಿ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿದರೆ ಸಾಮೂಹಿಕ ಆತ್ಮಹತ್ಯೆಗೆ ಮುಂದಾಗುವುದಾಗಿ ಶಿವಸೇನೆಯ ಕೇರಳ ಘಟಕ ಎಚ್ಚರಿಸಿದೆ.

Vijaya Karnataka 14 Oct 2018, 8:00 am
ತಿರುವನಂತಪುರಂ: ಸಂಪ್ರದಾಯಕ್ಕೆ ವಿರುದ್ಧವಾಗಿ ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿದರೆ ಸಾಮೂಹಿಕ ಆತ್ಮಹತ್ಯೆಗೆ ಮುಂದಾಗುವುದಾಗಿ ಶಿವಸೇನೆಯ ಕೇರಳ ಘಟಕ ಎಚ್ಚರಿಸಿದೆ.
Vijaya Karnataka Web sabarimala


''ನಮ್ಮ ಮಹಿಳಾ ಕಾರ್ಯಕರ್ತೆಯರು ಅ.17 ಮತ್ತು 18ರಂದು ಪಂಪಾ ನದಿ ತೀರದಲ್ಲಿ ಸೇರಲಿದ್ದಾರೆ. ಯಾವುದೇ ಮಹಿಳೆ ದೇಗುಲ ಪ್ರವೇಶಕ್ಕೆ ಯತ್ನಿಸಿದರೆ, ಕಾರ್ಯಕರ್ತರು ಅಲ್ಲೇ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ,'' ಎಂದು ಶಿವಸೇನೆ ಮುಖಂಡ ಪೆರಿಂಗಮ್ಮಾಳ ಅಜಿ ಹೇಳಿದ್ದಾರೆ. ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಸುಪ್ರೀಂ ಕೋರ್ಟ್‌ ಸೆ.28ರಂದು ನೀಡಿದ ತೀರ್ಪಿಗೆ ಶಿವಸೇನೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಆದೇಶ ಪಾಲನೆಗೆ ಮುಂದಾಗಿರುವ ಕೇರಳ ಸರಕಾರದ ವಿರುದ್ಧ ಪ್ರತಿಭಟನೆಯಲ್ಲಿ ನಿರತವಾಗಿದೆ.

ಕೊಚ್ಚಿಯಲ್ಲಿ ಭಾರಿ ಪ್ರತಿಭಟನೆ: ಸುಪ್ರೀಂ ಕೋರ್ಟ್‌ ಆದೇಶ ಅನುಷ್ಠಾನ ವಿರೋಧಿಸಿ ಸಾವಿರಾರು ಅಯ್ಯಪ್ಪ ಭಕ್ತರು ಕೊಚ್ಚಿಯಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ ನಡೆಸಿದರು. ಅಲ್ಲದೆ, ರಾಜ್ಯದ ವಿವಿಧೆಡೆ ಮಹಿಳಾ ಸಂಘಟನೆಗಳು ಹಾಗೂ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದವು.

ಸಿದ್ಧತೆ ಸಭೆ: ಅ.17ರಂದು ಸಂಜೆ ಮಾಸಿಕ ಪೂಜೆಗಾಗಿ ಅಯ್ಯಪ್ಪ ದೇಗುಲದ ಬಾಗಿಲು ತೆರೆಯುವುದರಿಂದ, ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಸಂಬಂಧ ಸಿದ್ಧತೆ ಪರಿಶೀಲನೆಗೆ ಶನಿವಾರ ಅಧಿಕಾರಿಗಳು ಸಭೆ ನಡೆಸಿದರು.

ದೇಗುಲ ಪ್ರವೇಶಕ್ಕೆ ತೃಪ್ತಿ ಪಡೆ ಸಿದ್ಧತೆ:

ಮಹಿಳೆಯರ ದೇಗುಲ ಪ್ರವೇಶಕ್ಕೆ ಅಯ್ಯಪ್ಪ ಭಕ್ತರ ತೀವ್ರ ವಿರೋಧದ ನಡುವೆಯೂ ಶಬರಿಮಲೆ ಯಾತ್ರೆ ಕೈಗೊಳ್ಳುವುದಾಗಿ ಭೂ ಮಾತಾ ಬ್ರಿಗೇಡ್‌ ಸ್ಥಾಪಕಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಶನಿವಾರ ಹೇಳಿದ್ದಾರೆ.

''ನಾನೊಬ್ಬಳೇ ಯಾತ್ರೆ ಕೈಗೊಳ್ಳುವುದಿಲ್ಲ. ಬದಲಾಗಿ ಮಹಿಳೆಯರ ಗುಂಪಿನೊಂದಿಗೆ ಭೇಟಿ ನೀಡುತ್ತೇನೆ. ಸುಪ್ರೀಂ ಕೋರ್ಟ್‌ ತೀರ್ಪನ್ನು ಎಲ್ಲರೂ ಹೃದಯಪೂರ್ವಕವಾಗಿ ಸ್ವಾಗತಿಸಬೇಕು,'' ಎಂದು ಮನವಿ ಮಾಡಿದ್ದಾರೆ. ಈ ಮುನ್ನ, ಮಹಾರಾಷ್ಟ್ರದ ಶನಿಸಿಂಘಾಪುರದ ಶನಿ ದೇಗುಲ, ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯ ಮತ್ತು ನಾಸಿಕ್‌ ಬಳಿಯ ತ್ರಯಂಬಕೇಶ್ವರ ದೇಗುಲಗಳಲ್ಲಿ ಮಹಿಳೆಯರ ವಿರುದ್ಧ ತಾರಾತಮ್ಯ ಖಂಡಿಸಿ ದೇಸಾಯಿ ಹೋರಾಟ ನಡೆಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ