ಆ್ಯಪ್ನಗರ

ಅವಿಶ್ವಾಸ ಅಗ್ನಿಪರೀಕ್ಷೆ: ಬಿಜೆಪಿ ಜತೆ ಕೈ ಜೋಡಿಸಲಿರುವ ಶಿವಸೇನೆ

ಲೋಕಸಭೆಯಲ್ಲಿ ಶುಕ್ರವಾರ ಕೇಂದ್ರ ಸರಕಾರದ ವಿರುದ್ಧ ನಡೆಯಲಿರುವ ಅವಿಶ್ವಾಸ ನಿರ್ಣಯ ಮಂಡನೆ ಪ್ರಕ್ರಿಯೆಯಲ್ಲಿ ಶಿವ ಸೇನೆ ಬಿಜೆಪಿ ಪರವಾಗಿ ನಿಲ್ಲಲಿದೆ.

TIMESOFINDIA.COM 19 Jul 2018, 7:14 pm
ಮುಂಬಯಿ: ಲೋಕಸಭೆಯಲ್ಲಿ ಶುಕ್ರವಾರ ಕೇಂದ್ರ ಸರಕಾರದ ವಿರುದ್ಧ ನಡೆಯಲಿರುವ ಬಹುಮತ ಸಾಬೀತು ಪಡಿಸುವ ಪ್ರಕ್ರಿಯೆಯಲ್ಲಿ ಶಿವ ಸೇನೆ ಬಿಜೆಪಿ ಪರವಾಗಿ ನಿಲ್ಲಲಿದೆ.
Vijaya Karnataka Web shiva sena


ಪ್ರಧಾನಿ ನರೇಂದ್ರ ಮೋದಿ - ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ಪ್ರತಿಪಕ್ಷಗಳು ಸಲ್ಲಿಸಿರುವ ಅವಿಶ್ವಾಸ ನಿರ್ಣಯ ಮಂಡಿಸಲಿದ್ದು, ಈ ವೇಳೆ ಶಿವಸೇನೆಯ ಸದಸ್ಯರು ಬಿಜೆಪಿ ಪರವಾಗಿಯೇ ಮತ ಚಲಾಯಿಸಲಿದ್ದಾರೆ. ಈ ಬಗ್ಗೆ ಅಧಿಕೃತ ಹೇಳಿಕೆಯನ್ನೂ ಶಿವಸೇನೆ ಪ್ರಕಟಿಸಲಿದೆ ಎಂದು ತಿಳಿದು ಬಂದಿದೆ.

ಸರಕಾರ ಅಧಿಕಾರಕ್ಕೆ ಬಂದ ಕಳೆದ 4 ವರ್ಷದಲ್ಲಿ ಇದೇ ಮೊದಲ ಬಾರಿಗೆ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ ನಡೆಯುತ್ತಿದೆ. ಟಿಡಿಪಿ ಸೇರಿ ಪ್ರತಿಪಕ್ಷಗಳು ಎನ್‌ಡಿಎ ಸರಕಾರಕ್ಕೆ ಬಹುಮತ ಇಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯಕ್ಕೆ ಪ್ರತಿಪಕ್ಷಗಳು ಲೋಕಸಭಾ ಅಧಿವೇಶನದ ಮೊದಲ ದಿನ ಸ್ಪೀಕರ್‌ ಗೆ ಮನವಿ ಮಾಡಿದ್ದರು.

ಇತ್ತೀಚೆಗೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ತಮ್ಮ ಬೆಂಬಲ ವಾಪಸು ಪಡೆದಿದ್ದರು. ಇದೇ ವೇಳೆ ಶಿವ ಸೇನಾ ನಾಯಕ ಸಂಜಯ್‌ ರೌತ್‌, ಅವಿಶ್ವಾಸ ನಿರ್ಣಯ ಮಂಡನೆ ಸಂಬಂಧ ಸೇನೆಯ ನಿರ್ಧಾರವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ