ಆ್ಯಪ್ನಗರ

ಮೇಜರ್‌ ಆದಿತ್ಯ ವಿರುದ್ಧ ಬಲವಂತದ ಕ್ರಮ ಬೇಡ: ಕಾಶ್ಮೀರ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಕಲ್ಲು ತೂರಾಟಗಾರರ ಮೇಲೆ ಗುಂಡು ಹಾರಿಸಿದ ಮೇಜರ್‌ ಆದಿತ್ಯ ಕುಮಾರ್‌ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್‌ ರಜ್ಯ ಪೊಲೀಸರಿಗೆ ಆದೇಶಿಸಿದೆ.

Vijaya Karnataka Web 12 Feb 2018, 3:28 pm
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಕಲ್ಲು ತೂರಾಟಗಾರರ ಮೇಲೆ ಗುಂಡು ಹಾರಿಸಿದ ಮೇಜರ್‌ ಆದಿತ್ಯ ಕುಮಾರ್‌ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್‌ ರಜ್ಯ ಪೊಲೀಸರಿಗೆ ಆದೇಶಿಸಿದೆ.
Vijaya Karnataka Web shopian firing case sc restrains jk police from taking coercive steps against major aditya
ಮೇಜರ್‌ ಆದಿತ್ಯ ವಿರುದ್ಧ ಬಲವಂತದ ಕ್ರಮ ಬೇಡ: ಕಾಶ್ಮೀರ ಪೊಲೀಸರಿಗೆ ಸುಪ್ರೀಂ ಕೋರ್ಟ್‌ ನಿರ್ದೇಶನ


ಮೇಜರ್‌ ಆದಿತ್ಯ ಕುಮಾರ್‌ ಅವರನ್ನು ವಿಚಾರಣೆಗೆ ಕರೆಸಿಕೊಳ್ಳುವುದಾಗಲಿ, ಅವರನ್ನು ಬಂಧಿಸುವುದಾಗಲಿ ಮಾಡಕೂಡದು ಎಂದು ಕೋರ್ಟ್‌ ಸೂಚಿಸಿದೆ.

ಜಮ್ಮು ಕಾಶ್ಮೀರ ಪೊಲೀಸರು ಮೇಜರ್‌ ಆದಿತ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿ ಅವರ ತಂದೆ ನಿವೃತ್ತ ಲೆಫ್ಟಿನೆಂಟ್‌ ಕರ್ನಲ್‌ ಕರಮ್‌ವೀರ್‌ ಸಿಂಗ್‌ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಉಗ್ರರ ವಿರುದ್ಧ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸೇನಾಧಿಕಾರಿಗಳ ವಿರುದ್ಧ ರಾಜ್ಯ ಪೊಲೀಸರು ಎಫ್‌ಐಆರ್‌ ದಾಖಲಿಸುವುದರ ಬಗ್ಗೆ ಕೇಂದ್ರ ಸರಕಾರದ ನಿಲುವು ಏನೆಂಬುದನ್ನು ಸ್ಪಷ್ಟಪಡಿಸುವಂತೆ ಅಟಾರ್ನಿ ಜನರಲ್‌ ಕೆ.ಕೆ ವೇಣುಗೋಪಾಲ್‌ ಅವರಿಗೆ ಕೋರ್ಟ್‌ ಸೂಚಿಸಿದೆ.

ಕಲ್ಲು ತೂರಾಟ ಪ್ರಕರಣದಲ್ಲಿ ಬಂಧಿತರಾಗಿರುವ 9,730 ಉಗ್ರ ಬೆಂಬಲಿಗರ ಕೇಸುಗಳನ್ನು ರದ್ದುಪಡಿಸುವ ಜಮ್ಮು ಕಾಶ್ಮೀರ ಸರಕಾರದ ಕ್ರಮವನ್ನು ಹಿಂತೆಗೆದುಕೊಳ್ಳಲು ನಿರ್ದೇಶನ ಕೋರಿ ವಕೀಲ ವಿನೀತ್‌ ಧಂಡಾ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಎ.ಎಂ ಖಾನ್ವಿಲ್ಕರ್‌ ಮತ್ತು ಡಿ.ವೈ ಚಂದ್ರಚೂಡ್‌ ಅವರ ಪೀಠ ಈ ಅರ್ಜಿಯನ್ನು ಮಂಗಳವಾರ (ಫೆ.12) ಕೈಗೆತ್ತಿಕೊಳ್ಳಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ