ಆ್ಯಪ್ನಗರ

Shraddha Walker Murder Case: ಖಡ್ಗ ಹಿಡಿದು ಶ್ರದ್ಧಾ ಹಂತಕ ಅಫ್ತಾಬ್ ಮೇಲೆ ದಾಳಿಗೆ ಯತ್ನ; ಪೊಲೀಸ್‌ ವಾಹನದ ಮೇಲೆ ಮುಗಿಬಿದ್ದ ಗುಂಪು!

ದೇಶವನ್ನು ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್ ಪೂನಾವಾಲಾ ಇದ್ದ ಪೊಲೀಸ್‌ ವಾಹನದ ಮೇಲೆ ಸೋಮವಾರ ಸಂಜೆ ದಾಳಿ ನಡೆಸಿದೆ. ಕತ್ತಿ ಹಿಡಿದಿದ್ದ ಉದ್ರಿಕ್ತರ ಗುಂಪೊಂದು ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಅಫ್ತಾಬ್‌ ಅನ್ನು ಜೈಲಿಗೆ ವಾಪಸ್‌ ಕರೆದೊಯ್ಯುತ್ತಿರುವಾಗ ಪೊಲೀಸ್‌ ವಾಹನದ ಮೇಲೆ ದಾಳಿ ನಡೆಸಿದ್ದು, ಅಫ್ತಾಬ್‌ನ ರಕ್ಷಣೆಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ.

Edited byಅವಿನಾಶ ವಗರನಾಳ | Vijaya Karnataka Web 28 Nov 2022, 8:11 pm

ಹೈಲೈಟ್ಸ್‌:


  • ಶ್ರದ್ಧಾ ಹತ್ಯೆ ಆರೋಪಿ ಅಫ್ತಾಬ್‌ ಇದ್ದ ಪೊಲೀಸ್‌ ವ್ಯಾನ್‌ ಮೇಲೆ ದಾಳಿ
  • ಕತ್ತಿ ಹಿಡಿದ ಉದ್ರಿಕ್ತರ ಗುಂಪಿನಿಂದ ಅಫ್ತಾಬ್‌ ಇರೋ ವ್ಯಾನ್‌ ಮೇಲೆ ದಾಳಿ
  • ಎಫ್‌ಎಸ್‌ಎಲ್‌ನಿಂದ ಜೈಲಿಗೆ ಕರೆದೊಯ್ಯುತ್ತಿರುವಾಗ ವಾಹನದ ಮೇಲೆ ದಾಳಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Shraddha Walker Murder case
ಹೊಸದಿಲ್ಲಿ: ಶ್ರದ್ಧಾ ವಾಕರ್ ಹತ್ಯೆ ಆರೋಪಿ ಅಫ್ತಾಬ್ ಪೂನಾವಾಲಾನನ್ನು ಕರೆದೊಯ್ಯುತ್ತಿದ್ದ ಪೊಲೀಸ್‌ ವಾಹನದ ಮೇಲೆ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಸಂಜೆ ಕತ್ತಿಗಳನ್ನು ಹಿಡಿದ ಜನರ ಗುಂಪೊಂದು ವಿಧಿ ವಿಜ್ಞಾನ ಪ್ರಯೋಗಾಲಯದಿಂದ ಜೈಲಿಗೆ ವಾಪಸ್‌ ಕರೆದೊಯ್ಯುತ್ತಿರುವಾಗ ಪೊಲೀಸ್‌ ವಾಹನದ ಮೇಲೆ ದಾಳಿ ನಡೆಸಿದ್ದು, ಅಫ್ತಾಬ್‌ನ ರಕ್ಷಣೆಗಾಗಿ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಶ್ರದ್ಧಾ ವಾಕರ್‌ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ ಅಫ್ತಾಬ್‌ ಪೂನಾವಾಲಾಗೆ ಎರಡನೇ ಬಾರಿ ಪಾಲಿಗ್ರಾಫ್‌ ಪರೀಕ್ಷೆಯನ್ನು ಸೋಮವಾರ ನಡೆಸಲಾಯಿತು. ಅದಕ್ಕಾಗಿ ಆರೋಪಿ ಅಫ್ತಾಬ್‌ ಅನ್ನು ಪಶ್ಚಿಮ ದಿಲ್ಲಿಯಲ್ಲಿರುವ ರೋಹಿಣಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕರೆದುಕೊಂಡು ಬರಲಾಗಿತ್ತು. ಪರೀಕ್ಷೆಯ ಬಳಿಕ ಅಫ್ತಾಬ್‌ ಅನ್ನು ಜೈಲಿಗೆ ಕರೆದೊಯ್ಯುವ ವೇಳೆ ಎಫ್‌ಎಸ್‌ಎಲ್‌ ಕಟ್ಟಡದ ಹೊರಗಡೆ ಪೊಲೀಸರ ವಾಹನ ಬರುತ್ತಿದ್ದಂತೆ ಕತ್ತಿಯಿಡಿದ ಜನರ ಗುಂಪು ದಾಳಿ ನಡೆಸಿದೆ.

ಕತ್ತಿ ಹಿಡಿದಿದ್ದ ಹದಿನೈದು ಮಂದಿಯ ಗುಂಪು ಪೊಲೀಸ್‌ ವಾಹನದ ಮೇಲೆ ಹತ್ತಿತ್ತು. ಆ ವ್ಯಕ್ತಿಗಳು ಅಫ್ತಾಬ್‌ನನ್ನು ಹುಡುಕುತ್ತಿದ್ದರು, ಅವರೆಲ್ಲಾ ಬಲಪಂಥೀಯ ಗುಂಪಿನ ಭಾಗವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಅಫ್ತಾಬ್ ಪೂನಾವಾಲಾ ಸುರಕ್ಷಿತವಾಗಿದ್ದಾರೆ. ಘಟನೆಯಲ್ಲಿ ಕೆಲವು ದಾಳಿಕೋರರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಘಟನೆಯ ಬಗ್ಗೆ ಎಎನ್‌ಐ ಸುದ್ದಿಸಂಸ್ಥೆ ವಿಡಿಯೋ ಒಂದನ್ನು ಟ್ವೀಟ್‌ ಮಾಡಿದ್ದು, ಅದರಲ್ಲಿ ಪೊಲೀಸ್ ಸಿಬ್ಬಂದಿ ಒಬ್ಬರು ದಾಳಿಕೋರರನ್ನು ಓಡಿಸಲು ವಾಹನದಿಂದ ಹೊರಬಂದಿರುವುದನ್ನು ಕಾಣಬಹುದು. ಆದರೆ, ದಾಳಿಕೋರರು ವಾಹನದ ಮೇಲೆ ದಾಳಿ ಮುಂದುವರಿಸಿದಾಗ ಪೊಲೀಸ್‌ ತಮ್ಮ ಪಿಸ್ತೂಲ್‌ ಅನ್ನು ಹೊರಗೆ ತೆಗೆದು ವಾಹನ ಮುಂದೆ ಸಾಗುವಂತೆ ಮಾಡಿದ್ದಾರೆ. ಈ ವೇಳೆ ಪೊಲೀಸ್‌ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಪೊಲೀಸರು ಖಚಿತಪಡಿಸಿಲ್ಲ.

Delhi Murder Case: ಪತಿಯನ್ನು ಕೊಂದು 22 ತುಂಡು ಮಾಡಿದ ತಾಯಿ-ಮಗ; ಶ್ರದ್ಧಾ ಹತ್ಯೆಯ ಮರುಸೃಷ್ಟಿ
ಹಿಂದೂ ಸೇನಾದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶ್ರದ್ಧಾ ವಾಕರ್‌ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಾಗ ಹಿಂದೂ ಪರ ಸಂಘಟನೆಗಳು ಇದು ಲವ್‌ ಜಿಹಾದ್‌ ಎಂದು ಆಕ್ರೋಶ ವ್ಯಕ್ತಪಡಿಸಿದ್ದವು. ದೇಶದ ಹಲವೆಡೆ ಹತ್ಯೆಯನ್ನು ಖಂಡಿಸಿ ಪ್ರತಿಭಟನೆಗಳು ಆಗಿದ್ದವು. ಆರೋಪಿ ಅಫ್ತಾಬ್‌ಗೆ ಮರಣ ದಂಡನೆ ವಿಧಿಸುವಂತೆ ಜನ ಆಗ್ರಹಿಸಿದ್ದರು.

Shraddha Walker Murder: ಶ್ರದ್ಧಾಳನ್ನು ಕೊಂದ ಬಳಿಕ ಮನೋವೈದ್ಯೆ ಜತೆ ಹಂತಕ ಅಫ್ತಾಬ್ ಡೇಟಿಂಗ್
ಬೆಚ್ಚಿ ಬೀಳಿಸಿದ್ದ ಶ್ರದ್ಧಾ ವಾಕರ್‌ ಹತ್ಯೆ ಪ್ರಕರಣ!
ಕೆಲ ದಿನಗಳ ಹಿಂದಷ್ಟೇ ದಿಲ್ಲಿಯಲ್ಲಿ ಬೆಳಕಿಗೆ ಬಂದಿದ್ದ ಶ್ರದ್ಧಾ ವಾಕರ್‌ ಹತ್ಯೆ ಪ್ರಕರಣ ಇಡೀ ದೇಶವನ್ನು ಬೆಚ್ಚಿ ಬೀಳಿಸಿತ್ತು. ಮಹಾರಾಷ್ಟ್ರದ ಮೂಲದ ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಆಕೆಯ ಪ್ರಿಯತಮ ಅಫ್ತಾಬ್ ಪೂನಾವಾಲಾ ಭೀಕರವಾಗಿ ಹತ್ಯೆ ಮಾಡಿದ್ದ. ಹತ್ಯೆ ಬಳಿಕ ದೇಹವನ್ನು 35 ತುಂಡುಗಳಾಗಿ ಮಾಡಿ, ಫ್ರಿಡ್ಜ್‌ನಲ್ಲಿಟ್ಟು ದೇಹವನ್ನು 18 ದಿನಗಳ ಕಾಲ ವಿಲೇವಾರಿ ಮಾಡಿದ್ದ. ಮೇ ತಿಂಗಳಲ್ಲಿ ಹತ್ಯೆ ನಡೆದಿದ್ದರೂ ನವೆಂಬರ್‌ ತಿಂಗಳಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು.
ಲೇಖಕರ ಬಗ್ಗೆ
ಅವಿನಾಶ ವಗರನಾಳ
ವಿಜಯ ಕರ್ನಾಟಕ ಡಿಜಿಟಲ್‌ ವಿಭಾಗದಲ್ಲಿ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕಳೆದ 6 ವರ್ಷಗಳಿಂದ ವಿವಿಧ ಪತ್ರಿಕೆ, ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸಿದ್ದಾರೆ. ಸದ್ಯ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಒಂದಿಷ್ಟು ದಿನ ಕೆಲ ಸಂಸ್ಥೆಗಳಲ್ಲಿ ಸಾರ್ವಜನಿಕ ಸಂಪರ್ಕವನ್ನು ನಿಭಾಯಿಸಿದ್ದಾರೆ. ಇವರು ಹುಟ್ಟಿ ಬೆಳೆದಿದ್ದು ಭತ್ತದ ನಾಡು, ಹನುಮ ಹುಟ್ಟಿದ ನಾಡು ಗಂಗಾವತಿಯಲ್ಲಿ. ಕುವೆಂಪು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ರಾಜಕೀಯ ವಿಷಯಗಳು, ಪ್ರಚಲಿತ ವಿದ್ಯಮಾನಗಳ ಮೇಲೆ ಆಸಕ್ತಿ. ತಂತ್ರಜ್ಞಾನದ ವಿಷಯಗಳು ಇವರಿಗೆ ಹೆಚ್ಚು ಆಪ್ತ. ಇವರಿಗೆ ಊರೂರು ಸುತ್ತೋದು.. ಕ್ರಿಕೆಟ್‌ ಆಡೋದು.. ಅದಿದು ಹುಡುಕೋದು ಇಷ್ಟ. ಅಂತೆ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ