ಆ್ಯಪ್ನಗರ

ಐಟಿ ಪದವೀಧರರಲ್ಲಿ ಶೇ 94 ಮಂದಿಗೆ ಕೌಶಲ್ಯದ ಕೊರತೆ: ಟೆಕ್ ಮಹೀಂದ್ರಾ ಸಿಇಓ

ದೇಶದ ಒಟ್ಟಾರೆ ಎಂಜಿನಿಯರಿಂಗ್‌ ಪದವೀಧರರಲ್ಲಿ ಉತ್ತಮ ಕಂಪನಿಗಳಲ್ಲಿ ಕೆಲಸ ಪಡೆಯುವವರು ಕೇವಲ ಶೇ.6ರಷ್ಟು ಮಾತ್ರ; ಶೇ 94 ಮಂದಿ ಐಟಿ ಪದವೀಧರರೂ ಉದ್ಯೋಗಕ್ಕೆ ಅನರ್ಹರಾಗಿರುತ್ತಾರೆ ಎಂದು ಟೆಕ್‌ ಮಹೀಂದ್ರ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಪಿ. ಗುರ್ನಾನಿ ಹೇಳಿದ್ದಾರೆ.

TIMESOFINDIA.COM 4 Jun 2018, 5:57 pm
ಹೊಸದಿಲ್ಲಿ: ದೇಶದ ಒಟ್ಟಾರೆ ಎಂಜಿನಿಯರಿಂಗ್‌ ಪದವೀಧರರಲ್ಲಿ ಉತ್ತಮ ಕಂಪನಿಗಳಲ್ಲಿ ಕೆಲಸ ಪಡೆಯುವವರು ಕೇವಲ ಶೇ.6ರಷ್ಟು ಮಾತ್ರ; ಶೇ 94 ಮಂದಿ ಐಟಿ ಪದವೀಧರರೂ ಉದ್ಯೋಗಕ್ಕೆ ಅನರ್ಹರಾಗಿರುತ್ತಾರೆ ಎಂದು ಟೆಕ್‌ ಮಹೀಂದ್ರ ಸಂಸ್ಥೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ.ಪಿ. ಗುರ್ನಾನಿ ಹೇಳಿದ್ದಾರೆ.
Vijaya Karnataka Web gurnani


ಟೈಮ್ಸ್‌ ಆಫ್‌ ಇಂಡಿಯಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಎಂಜಿನಿಯರಿಂಗ್‌ ಪದವೀಧರರಲ್ಲಿ ಕೌಶಲ್ಯದ ಕೊರತೆ ಇಂದಿನ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸೈಬರ್‌ ಸೆಕ್ಯುರಿಟಿ ಸೇರಿದಂತೆ ಮಾಹಿತಿ ತಂತ್ರಜ್ಞಾನದ ಅನೇಕ ವಿಭಾಗದಲ್ಲಿ ಉದ್ಯೋಗಗಳಿವೆ. ಆದರೆ ಆ ಸೀಟುಗಳನ್ನು ತುಂಬಲು ಅರ್ಹ ವ್ಯಕ್ತಿಗಳು ನಮ್ಮಲ್ಲಿ ಇಲ್ಲವಾಗಿದ್ದಾರೆ. ಒಟ್ಟಾರೆ ಎಂಜಿನಿಯರಿಂಗ್‌ ಪದವೀಧರರಲ್ಲಿ ಶೇ.96ರಷ್ಟು ಅಭ್ಯರ್ಥಿಗಳು ಐಟಿ ವಿಭಾಗದಲ್ಲಿ ಕೆಲಸ ಮಾಡಲು ಅರ್ಹರಾಗಿರುವುದಿಲ್ಲ ಎಂದು ಹೇಳಿದ್ದಾರೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೈಬರ್‌ ಸೆಕ್ಯುರಿಟಿ ವಿಭಾಗಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಎಲ್ಲ ಹೊಸ ಸಂಸ್ಥೆಗಳಿಗೆ ಭದ್ರತೆ ಒದಗಿಸುವುದು ಕಷ್ಟವಾಗುತ್ತಿದೆ. ಕೇವಲ ಪಾಸ್‌ವರ್ಡ್‌ಗಳಿಂದ ಇಂದು ಭದ್ರತೆ ಒದಗಿಸುವುದು ಕಷ್ಟಸಾಧ್ಯ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಅಮೆರಿಕದ ಎಚ್‌-1ಬಿ ವೀಸಾ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರತಿಯೊಂದ ಐಟಿ ಸಂಸ್ಥೆ, ವೀಸಾ ವಿಚಾರದಲ್ಲಿ ತನ್ನದೇ ಆದ ಕಾರ್ಯತಂತ್ರಗಳನ್ನು ಅಳವಡಿಸಿಕೊಂಡಿದ್ದಾರೆ. ಯುಎಸ್‌ಎ ಪ್ರತಿಭಾವಂತರಿಗೆ ಅತ್ಯುತ್ತಮ ವೇದಿಕೆಯಾಗಿ ಗುರುತಿಸಿಕೊಂಡಿದೆ. ಹೀಗಾಗಿ ಸಣ್ಣ ವಿಚಾರವನ್ನು ದೊಡ್ಡ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ ಎಂದು ಅವರು ಹೇಳಿದರು.

Read this in English

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ