ಆ್ಯಪ್ನಗರ

ಸೋನ್‌ಭದ್ರಾ ಹತ್ಯಾಕಾಂಡ: ಜಿಲ್ಲಾಧಿಕಾರಿ, ಎಸ್‌ಪಿ ವಜಾಗೊಳಿಸಿದ ಯೋಗಿ ಸರಕಾರ

ಉತ್ತರ ಪ್ರದೇಶದ ಸೋನ್‌ಭದ್ರಾದಲ್ಲಿ ಇತ್ತೀಚೆಗೆ ನಡೆದ 10 ಮಂದಿ ಗೊಂಡ ಬುಡಕಟ್ಟು ಸಮುದಾಯದ ಜನರ ಹತ್ಯೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯನ್ನು ವಜಾಗೊಳಿಸಲಾಗಿದೆ.

TIMESOFINDIA.COM 4 Aug 2019, 7:41 pm
ಲಖನೌ: ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ಗೊಂಡ ಬುಡಕಟ್ಟು ಜನರ ಹತ್ಯೆ ಕುರಿತ ತನಿಖೆ ಹಿನ್ನೆಲೆಯಲ್ಲಿ ಸೋನ್‌ಭದ್ರ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿಯನ್ನು (ಎಸ್‌ಪಿ) ಉತ್ತರ ಪ್ರದೇಶ ಸರಕಾರ ವಜಾಗೊಳಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತ, ಸೋನಾಭದ್ರ ಜಿಲ್ಲೆಯ ಜಿಲ್ಲಾಧಿಕಾರಿ ಅಂಕಿತ್ ಕುಮಾರ್ ಅಗರ್ವಾಲ್ ಮತ್ತು ಎಸ್‌ಪಿ ಸಲ್ಮಾನ್‌ತಾಜ್ ಪಾಟೀಲ್ ವಿರುದ್ಧ ಇಲಾಖಾ ತನಿಖೆ ಆರಂಭವಾಗಿದೆ ಎಂದು ತಿಳಿಸಿದರು.

ಸೋನ್‌ಭದ್ರ ಹತ್ಯಾಕಾಂಡಕ್ಕೆ ಸಂಬಂಧಿಸಿ ಕಂದಾಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವರದಿ ಸಲ್ಲಿಸಿದ ಮರುದಿನವೇ ರಾಜ್ಯ ಸರಕಾರ ಕ್ರಮ ಕೈಗೊಂಡಿದೆ ಎಂದು ಯೋಗಿ ತಿಳಿಸಿದರು.

ಭೂ ವಿವಾದಕ್ಕೆ ಸಂಬಂಧಿಸಿದಂತೆ ಹುಟ್ಟಿಕೊಂಡ ಘರ್ಷಣೆ ವೇಳೆ ಗ್ರಾಮದ ಮುಖಂಡನೊಬ್ಬ ಗುಂಡು ಹಾರಿಸಿದಾಗ 10 ಮಂದಿ ಮೃತಪಟ್ಟು 28 ಮಂದಿ ಗಾಯಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ