ಹೊಸದಿಲ್ಲಿ: ದೇಶದ ಮೂಲಸೌಕರ್ಯ ಕ್ಷೇತ್ರದಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರ ಸಚಿವಾಲಯ ಮಾಡಿರುವ ಉತ್ತಮ ಕೆಲಸ ಕಾರ್ಯಗಳಿಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಸಾರಿಗೆ ಸಚಿವಾಲಯಕ್ಕೆ ಸಂಬಂಧಿಸಿದ ಎರಡು ಪ್ರಶ್ನೆಗಳಿಗೆ ಗಡ್ಕರಿ, ಸಂಪರ್ಕ ಜಾಲಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಸಾರಿಗೆ ಕ್ಷೇತ್ರದಲ್ಲಿ ನಡೆಯುತ್ತಿರುವ ಕೆಲವು ಯೋಜನೆಗಳ ಬಗ್ಗೆ ವಿವರಣೆ ನೀಡಿದರು. ಈ ವೇಳೆ ಅವರು ರಾಜಕೀಯವನ್ನು ಬದಿಗಿಟ್ಟು ಎಲ್ಲ ಪಕ್ಷಗಳ ಸಂಸದರು ನನ್ನ ಸಚಿವಾಲಯದ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದನ್ನು ಹೇಳಲೇಬೇಕು,'' ಎಂದರು. ಆಗ ಆಡಳಿತಾರೂಢ ಬಿಜೆಪಿ ಸದಸ್ಯರು ಮೇಜು ಕುಟ್ಟಿ ಸಂಭ್ರಮಿಸಿದರು. ಮಧ್ಯ ಪ್ರದೇಶದ ಬಿಜೆಪಿ ಸಂಸದ ಗಣೇಶ್ ಸಿಂಗ್, ''ಕೇಂದ್ರ ಸಾರಿಗೆ ಸಚಿವರು ಮಾಡುತ್ತಿರುವ ಅದ್ಭುತ ಕೆಲಸಗಳಿಗೆ ಇಡೀ ಸದನವೇ ಮೆಚ್ಚುಗೆ ಸೂಚಿಸಬೇಕು,'' ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಲ್ಲಿ ಮನವಿ ಮಾಡಿಕೊಂಡರು.
ಆಗ ಸದನದಲ್ಲಿದ್ದ ಸೋನಿಯಾ ಗಾಂಧಿ ಅವರು ಖುಷಿಯಿಂದ ತಲೆಯಾಡಿಸುತ್ತಾ ಮೇಜು ಕುಟ್ಟಿ ಭೇಷ್ ಎಂದರು. ನಂತರ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ಸಂಸದರು ಸಹ ಪ್ರಶಂಸೆ ವ್ಯಕ್ತಪಡಿಸಿದರು. ಇತ್ತೀಚೆಗೆ ಎಬಿವಿಪಿ ಕಾರ್ಯಕರ್ತರನ್ನು ಉದ್ದೇಶಿಸಿ ಗಡ್ಕರಿ ''ಕುಟುಂಬವನ್ನು ನಿರ್ವಹಿಸದವರು, ದೇಶವನ್ನು ನಿಭಾಯಿಸಲಾರರು,'' ಎಂದು ನೀಡಿದ್ದ ಹೇಳಿಕೆಗೆ ರಾಹುಲ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಲೋಕಸಭೆ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಸಾರಿಗೆ ಸಚಿವಾಲಯಕ್ಕೆ ಸಂಬಂಧಿಸಿದ ಎರಡು ಪ್ರಶ್ನೆಗಳಿಗೆ ಗಡ್ಕರಿ, ಸಂಪರ್ಕ ಜಾಲಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಸಾರಿಗೆ ಕ್ಷೇತ್ರದಲ್ಲಿ ನಡೆಯುತ್ತಿರುವ ಕೆಲವು ಯೋಜನೆಗಳ ಬಗ್ಗೆ ವಿವರಣೆ ನೀಡಿದರು. ಈ ವೇಳೆ ಅವರು ರಾಜಕೀಯವನ್ನು ಬದಿಗಿಟ್ಟು ಎಲ್ಲ ಪಕ್ಷಗಳ ಸಂಸದರು ನನ್ನ ಸಚಿವಾಲಯದ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದನ್ನು ಹೇಳಲೇಬೇಕು,'' ಎಂದರು. ಆಗ ಆಡಳಿತಾರೂಢ ಬಿಜೆಪಿ ಸದಸ್ಯರು ಮೇಜು ಕುಟ್ಟಿ ಸಂಭ್ರಮಿಸಿದರು. ಮಧ್ಯ ಪ್ರದೇಶದ ಬಿಜೆಪಿ ಸಂಸದ ಗಣೇಶ್ ಸಿಂಗ್, ''ಕೇಂದ್ರ ಸಾರಿಗೆ ಸಚಿವರು ಮಾಡುತ್ತಿರುವ ಅದ್ಭುತ ಕೆಲಸಗಳಿಗೆ ಇಡೀ ಸದನವೇ ಮೆಚ್ಚುಗೆ ಸೂಚಿಸಬೇಕು,'' ಎಂದು ಸ್ಪೀಕರ್ ಸುಮಿತ್ರಾ ಮಹಾಜನ್ ಅವರಲ್ಲಿ ಮನವಿ ಮಾಡಿಕೊಂಡರು.
ಆಗ ಸದನದಲ್ಲಿದ್ದ ಸೋನಿಯಾ ಗಾಂಧಿ ಅವರು ಖುಷಿಯಿಂದ ತಲೆಯಾಡಿಸುತ್ತಾ ಮೇಜು ಕುಟ್ಟಿ ಭೇಷ್ ಎಂದರು. ನಂತರ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ಸಂಸದರು ಸಹ ಪ್ರಶಂಸೆ ವ್ಯಕ್ತಪಡಿಸಿದರು. ಇತ್ತೀಚೆಗೆ ಎಬಿವಿಪಿ ಕಾರ್ಯಕರ್ತರನ್ನು ಉದ್ದೇಶಿಸಿ ಗಡ್ಕರಿ ''ಕುಟುಂಬವನ್ನು ನಿರ್ವಹಿಸದವರು, ದೇಶವನ್ನು ನಿಭಾಯಿಸಲಾರರು,'' ಎಂದು ನೀಡಿದ್ದ ಹೇಳಿಕೆಗೆ ರಾಹುಲ್ ಮೆಚ್ಚುಗೆ ವ್ಯಕ್ತಪಡಿಸಿದ್ದರು.