ಚೆನ್ನೈ: ಡಿಎಂಕೆ ನಾಯಕ ಕರುಣಾನಿಧಿ ಅವರ ಪ್ರತಿಮೆಯನ್ನು ಚೆನ್ನೈನ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಪ್ರಧಾನ ಕಚೇರಿಯ ಮುಂಭಾಗ ಭಾನುವಾರ ಸಂಜೆ ಸೋನಿಯಾ ಗಾಂಧಿ ಅನಾವರಣಗೊಳಿಸಿದ್ದಾರೆ.
ನಟ ಮತ್ತು ರಾಜಕಾರಣಿ ರಜನೀಕಾಂತ್ ಮತ್ತು ಶತ್ರುಘ್ನ ಸಿನ್ಹ, ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮವು ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಕಾರ್ಯಕ್ರಮದಂತೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ವಿರೋಧ ಪಕ್ಷದ ಪ್ರಮುಖ ನಾಯಕರು ಕೂಡ ಡಿಎಂಕೆ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.
ಪ್ರತಿಮೆ ಅನಾವರಣಕ್ಕೂ ಮುನ್ನ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಚೆನ್ನೈನ ಮರೀನಾ ಬೀಚ್ನಲ್ಲಿರುವ ಕರುಣಾನಿಧಿ ಅವರ ಸಮಾಧಿಯ ಬಳಿ ತೆರಳಿ ಗೌರವ ಸಲ್ಲಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಬಿಜೆಪಿ ಕೇಂದ್ರದ ಸಿಬಿಐ, ಆರ್ಬಿಐನಂತಹ ಸಂಸ್ಥೆಗಳ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಿದ್ದು, ಅವಕ್ಕೆ ಹಾನಿಯೆಸಗಿದೆ ಎಂದು ಆರೋಪಿಸಿದ್ದಾರೆ.
ಡಿಎಂಕೆ ನಾಯಕ ಸ್ಟಾಲಿನ್ ಮತ್ತು ಪಕ್ಷದ ಪ್ರಮುಖರು, ಇತರ ರಾಜಕೀಯ ಮತ್ತು ಸಂಘಟನೆಗಳ ನಾಯಕರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಡಿಎಂಕೆ ವರಿಷ್ಠ ಕರುಣಾನಿಧಿ ಪುತ್ರ, ಎಂ ಕೆ ಸ್ಟಾಲಿನ್, ಪ್ರತಿಮೆ ಅನಾವರಣ ಕಾರ್ಯಕ್ರಮವು ವಿಪಕ್ಷಗಳ ಒಗ್ಗೂಡುವಿಕೆಗೆ ಸಾಕ್ಷಿಯಾಗಿದೆ. ಇಂದಿನ ಕಾರ್ಯಕ್ರಮದ ಮೂಲದ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ಘೋಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ನಟ ಮತ್ತು ರಾಜಕಾರಣಿ ರಜನೀಕಾಂತ್ ಮತ್ತು ಶತ್ರುಘ್ನ ಸಿನ್ಹ, ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಕರುಣಾನಿಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮವು ವಿಪಕ್ಷಗಳ ಒಗ್ಗಟ್ಟು ಪ್ರದರ್ಶನ ಕಾರ್ಯಕ್ರಮದಂತೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ವಿರೋಧ ಪಕ್ಷದ ಪ್ರಮುಖ ನಾಯಕರು ಕೂಡ ಡಿಎಂಕೆ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.
ಪ್ರತಿಮೆ ಅನಾವರಣಕ್ಕೂ ಮುನ್ನ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಚೆನ್ನೈನ ಮರೀನಾ ಬೀಚ್ನಲ್ಲಿರುವ ಕರುಣಾನಿಧಿ ಅವರ ಸಮಾಧಿಯ ಬಳಿ ತೆರಳಿ ಗೌರವ ಸಲ್ಲಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಬಿಜೆಪಿ ಕೇಂದ್ರದ ಸಿಬಿಐ, ಆರ್ಬಿಐನಂತಹ ಸಂಸ್ಥೆಗಳ ಕಾರ್ಯದಲ್ಲಿ ಹಸ್ತಕ್ಷೇಪ ಮಾಡಿದ್ದು, ಅವಕ್ಕೆ ಹಾನಿಯೆಸಗಿದೆ ಎಂದು ಆರೋಪಿಸಿದ್ದಾರೆ.
ಡಿಎಂಕೆ ನಾಯಕ ಸ್ಟಾಲಿನ್ ಮತ್ತು ಪಕ್ಷದ ಪ್ರಮುಖರು, ಇತರ ರಾಜಕೀಯ ಮತ್ತು ಸಂಘಟನೆಗಳ ನಾಯಕರು ಕೂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಡಿಎಂಕೆ ವರಿಷ್ಠ ಕರುಣಾನಿಧಿ ಪುತ್ರ, ಎಂ ಕೆ ಸ್ಟಾಲಿನ್, ಪ್ರತಿಮೆ ಅನಾವರಣ ಕಾರ್ಯಕ್ರಮವು ವಿಪಕ್ಷಗಳ ಒಗ್ಗೂಡುವಿಕೆಗೆ ಸಾಕ್ಷಿಯಾಗಿದೆ. ಇಂದಿನ ಕಾರ್ಯಕ್ರಮದ ಮೂಲದ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ರಾಹುಲ್ ಗಾಂಧಿ ಸೂಕ್ತ ವ್ಯಕ್ತಿ ಎಂದು ಘೋಷಿಸುತ್ತಿದ್ದೇನೆ ಎಂದು ಹೇಳಿದ್ದಾರೆ.