ಆ್ಯಪ್ನಗರ

ಜನತಾ ಕರ್ಫ್ಯೂ ಸಲಹೆ ನೀಡಿದ ಪ್ರಧಾನಿ ಮೋದಿಗೆ ಸೋನಿಯಾ ಸಲಹೆ: ಏನದು?

ಕೊರೊನಾ ವೈರಸ್ ಹರಡುವಿಕೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕರೆ ನೀಡಿದ್ದ ಜನತಾ ಕರ್ಫ್ಯೂವಿಗೆ ಎಲ್ಲಾ ವಿಪಕ್ಷಗಳು ಬೆಂಬಲ ಘೋಷಿಸಿವೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಕೊರೊನಾ ವಿರುದ್ಧದ ಹೋರಾಟಕ್ಕೆ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರಕ್ಕೆ ಕೆಲವು ಸಲಹೆಗಳನ್ನೂ ನೀಡಿದ್ದಾರೆ.

Vijaya Karnataka Web 22 Mar 2020, 9:02 pm
ನವದೆಹಲಿ: ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಇಂದು ದೇಶಾದ್ಯಂತ ಜನಾ ಕರ್ಫ್ಯೂ ಆಚರಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ಕರೆಗೆ ಓಗೊಟ್ಟಿರುವ ದೇಶ, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲಾ ದೈನಂದಿನ ವ್ಯವಹಾರಗಳನ್ನು ಸ್ಥಗಿತಗೊಳಿಸಿ ಜನತಾ ಕರ್ಫ್ಯೂಗೆ ಬೆಂಬಲ ಘೋಷಿಸಿದೆ.
Vijaya Karnataka Web New Delhi: Congress President Sonia Gandhi during a press conference after the C...
ಪ್ರಧಾನಿ ಮೋದಿ ಅವರ ಜನತಾ ಕರ್ಫ್ಯೂ ಬೆಂಬಲಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕೊರೊನಾ ವೈರಸ್ ಹರಡುವಿಕೆ ತಡೆಗಟ್ಟಲು ಕೇಂದ್ರ ಸರ್ಕಾರಕ್ಕೆ ಕೆಲವು ಸಲಹೆಗಳನ್ನೂ ನೀಡಿದ್ದಾರೆ.


ಅದರಂತೆ ವಿಪಕ್ಷಗಳೂ ಪ್ರಧಾನಿ ಮೋದಿ ಅವರ ಜನತಾ ಕರ್ಫ್ಯೂವನ್ನು ಬೆಂಬಲಿಸಿದ್ದು, ಪ್ರಧಾನಿ ಕರೆಯನ್ನು ಪಾಲಿಸುವುದಾಗಿ ಭರವಸೆ ನೀಡಿವೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೇಶವನ್ನು ಉದ್ದೇಶಿಸಿ ಇಂದು ಮಾತನಾಡಿದ್ದಾರೆ.

ಕೊರೊನಾ ವೈರಸ್ ಕುರಿತು ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಹೇಳಿರುವ ಸೋನಿಯಾ ಗಾಂಧಿ, ಮಾರ್ಗೂಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಮಾರಕ ವೈರಾಣುವಿನ ವಿರುದ್ಧ ಸಂಘಟಿತ ಹೋರಾಟ ನಡೆಸೋಣ ಎಂದು ಜನತೆಗೆ ಕರೆ ನೀಡಿದ್ದಾರೆ.

ಇದೇ ವೇಳೆ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡುವುದಾಗಿ ಹೇಳಿರುವ ಸೋನಿಯಾ ಗಾಂಧಿ, ವೈರಾಣು ಹೋಗಲಾಡಿಸಲು ಸರ್ಕಾರಕ್ಕೆ ಕೆಲವು ಸಲಹೆಗಳನ್ನೂ ನೀಡಿದ್ದಾರೆ.


ಜನತಾ ಕರ್ಫ್ಯೂಗೆ ಸರ್ವಪಕ್ಷಗಳ ಬೆಂಬಲ: ಪ್ರಜಾಪ್ರಭುತ್ವದ ಗೆಲುವು ಎಂದ ಸ್ಪೀಕರ್

ಪ್ರಮುಖವಾಗಿ ಕೊರೊನಾ ವೈರಸ್ ತಪಾಸಣೆ ಪ್ರಕ್ರಿಯೆ ವೇಗ ಪಡೆದುಕೊಳ್ಳಬೇಕು ಎಂದು ಹೇಳಿರುವ ಸೋನಿಯಾ, 130 ಕೋಟಿಗೂ ಅಧಿಕ ಜನರಿರುವ ದೇಶದಲ್ಲಿ ಇದುವರೆಗೂ ಕೇವಲ 15 ಸಾವಿರಕ್ಕೂ ಅಧಿಕ ಜನರನ್ನು ಮಾತ್ರ ತಪಾಸಣೆ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಕೊರೊನಾ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರ ಖಾಸಗಿ ಮತ್ತು ಸರ್ಕಾರಿ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದರಲ್ಲಿ ವಿಫಲವಾಗಿದೆ ಎಂದಿರುವ ಸೋನಿಯಾ ಗಾಂಧಿ, ಈ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸುವ ಮೂಲಕ ಕೊರೊನಾ ತಪಾಸಣೆ ಪ್ರಕ್ರಿಯೆಗೆ ವೇಗ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಅಲ್ಲದೇ ಕರೊನಾ ಪೀಡಿತರಿಗೆ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿರುವ ಸೋನಿಯಾ ಗಾಂಧಿ, ಇದು ಕೊರೊನಾ ಪೀಡಿತರಿಗೆ ತಮ್ಮ ಚಿಕಿತ್ಸೆಗೆ ನೆರವು ನೀಡಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ನಷ್ಟದಲ್ಲಿರುವ ಉದ್ದಿಮೆಗಳಿಗೂ ಪ್ಯಾಕೇಜ್ ಘೋಷಿಸುವ ಮೂಲಕ ನೆವಿಗೆ ಧಾವಿಸಬೇಕು ಎಂದು ಸೋನಿಯಾ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇದೇ ವೇಳೆ ಜನತಾ ಕರ್ಫ್ಯೂಗೆ ಬೆಂಬಲ ನೀಡಿ ಎಲ್ಲ ಭಾರತೀಯರೂ ಮನೆಯಲ್ಲೇ ಉಳಿಯಬೇಕು ಎಂದು ಮನವಿ ಮಾಡಿರುವ ಸೋನಿಯಾ, ಒಟ್ಟಾಗಿ ಮಾರಕ ವೈರಾಣು ವಿರುದ್ಧ ಹೋರಾಡಿ ಗೆಲುವು ಸಾಧಿಸೋಣ ಎಂದು ಕರೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ