ಲಖನೌ: ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ತಿರುಗೇಟು ನೀಡಿದ್ದಾರೆ.
''ಸೋಲಿನ ಹತಾಶೆಯಲ್ಲಿರುವ ಪ್ರಿಯಾಂಕಾ ಅವರು 'ಕೈಗೆಟುಕದ ದ್ರಾಕ್ಷಿ ಹುಳಿ' ಎನ್ನುವಂತೆ ಮನಸ್ಸಿಗೆ ಬಂದದ್ದನ್ನು ಮಾತಾಡುತ್ತಿದ್ದಾರೆ. ಅವರ ಪಕ್ಷದ ಅಧ್ಯಕ್ಷರೇ ಉತ್ತರ ಪ್ರದೇಶದಲ್ಲಿ ಮುಖಭಂಗ ಅನುಭವಿಸಿದರು. ಈ ಹೀನ ಸ್ಥಿತಿಯಲ್ಲಿ ಅವರು ದಿಲ್ಲಿ, ಇಟಲಿ ಅಥವಾ ಇಂಗ್ಲೆಂಡಿನಲ್ಲಿ ಕುಳಿತು ಸುದ್ದಿ ಮಾಡುವುದಕ್ಕಾಗಿಯೇ ಏನೇನೋ ಮಾತಾಡುತ್ತಿದ್ದಾರೆ. ಆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ,'' ಎಂದು ಹೇಳಿದ್ದಾರೆ.
ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ಗಳು ಆರಾಮವಾಗಿ ಓಡಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದರು.
''ಸೋಲಿನ ಹತಾಶೆಯಲ್ಲಿರುವ ಪ್ರಿಯಾಂಕಾ ಅವರು 'ಕೈಗೆಟುಕದ ದ್ರಾಕ್ಷಿ ಹುಳಿ' ಎನ್ನುವಂತೆ ಮನಸ್ಸಿಗೆ ಬಂದದ್ದನ್ನು ಮಾತಾಡುತ್ತಿದ್ದಾರೆ. ಅವರ ಪಕ್ಷದ ಅಧ್ಯಕ್ಷರೇ ಉತ್ತರ ಪ್ರದೇಶದಲ್ಲಿ ಮುಖಭಂಗ ಅನುಭವಿಸಿದರು. ಈ ಹೀನ ಸ್ಥಿತಿಯಲ್ಲಿ ಅವರು ದಿಲ್ಲಿ, ಇಟಲಿ ಅಥವಾ ಇಂಗ್ಲೆಂಡಿನಲ್ಲಿ ಕುಳಿತು ಸುದ್ದಿ ಮಾಡುವುದಕ್ಕಾಗಿಯೇ ಏನೇನೋ ಮಾತಾಡುತ್ತಿದ್ದಾರೆ. ಆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇಲ್ಲ,'' ಎಂದು ಹೇಳಿದ್ದಾರೆ.
ಯೋಗಿ ಆದಿತ್ಯನಾಥ್ ಅವರ ಉತ್ತರ ಪ್ರದೇಶದಲ್ಲಿ ಕ್ರಿಮಿನಲ್ಗಳು ಆರಾಮವಾಗಿ ಓಡಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದರು.