ಆ್ಯಪ್ನಗರ

ಸಚಿನ್ ಪೈಲಟ್ ಪತ್ರಿಕಾಗೋಷ್ಠಿ ಮುಂದೂಡಿಕೆ: ಬಿಜೆಪಿ ಸೇರಲ್ಲ ಎಂದ ರಾಜಸ್ಥಾನ ಬಂಡಾಯಗಾರ!

ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಇಂದು(ಬುಧವಾರ) ಹಮ್ಮಿಕೊಳ್ಳಲಿದ್ದ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದಾರೆ.

Vijaya Karnataka Web 15 Jul 2020, 12:20 pm
ಜೈಪುರ್: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಇಂದು(ಬುಧವಾರ) ಹಮ್ಮಿಕೊಳ್ಳಲಿದ್ದ ಪತ್ರಿಕಾಗೋಷ್ಠಿಯನ್ನು ಮುಂದೂಡಿದ್ದಾರೆ.

ಕಾರಣಾಂತರಗಳಿಂದ ಇಂದಿನ ಪತ್ರಿಕಾಗೋಷ್ಠಿಯನ್ನು ಮುಂದೂಡಲಾಗಿದೆ ಎಂದು ಸಚಿನ್ ಪೈಲಟ್ ಬೆಂಲಿಗರು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಪತ್ರಿಕಾಗೋಷ್ಠಿ ಕರೆಯಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಬುಧವಾರ ಬೆಳಗ್ಗೆ 10 ಗಂಟೆಗೆ ಸಚಿನ್‌ ಪೈಲಟ್‌ ಸುದ್ದಿಗೋಷ್ಠಿ; ರಾಜಸ್ಥಾನ ಕಾಂಗ್ರೆಸ್‌ ಬಿಕ್ಕಟ್ಟಿಗೆ ಕ್ಲೈಮ್ಯಾಕ್ಸ್‌ ಸಾಧ್ಯತೆ

ಇದೇ ವೇಳೆ ಯಾವುದೇ ಕಾರಣಕ್ಕೂ ತಾವು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಸಚಿನ್ ಪೈಲಟ್, ತಾವು ಇನ್ನೂ ಕಾಂಗ್ರೆಸ್‌ನಲ್ಲೇ ಇರುವುದಾಗಿ ಹೇಳಿದ್ದಾರೆ.


ಪಕ್ಷದ ವರಿಷ್ಠರಿಗೆ ನನ್ನ ಮೇಲಿನ ನಂಬಿಕೆ ಕಡಿಮೆಯಾಗಲಿ ಎಂದು ಕೆಲವರು ಹುನ್ನಾರ ನಡೆಸುತ್ತಿದ್ದು, ಇದೇ ಕಾರಣಕ್ಕೆ ತಾವು ಬಿಜೆಪಿ ಸೇರುತ್ತಿರುವುದಾಗಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಸಚಿನ್ ಪೈಲಟ್ ಕಿಡಿಕಾರಿದ್ದಾರೆ.

ರಾಜಸ್ಥಾನದಲ್ಲೂ ಅನರ್ಹತೆ ಅಸ್ತ್ರ? ವಿಶ್ವಾಸಮತ ಗೆಲ್ಲಲು ಕಾಂಗ್ರೆಸ್‌ ಮಾಸ್ಟರ್‌ ಪ್ಲ್ಯಾನ್‌

ಪಕ್ಷದ ಉನ್ನತ ನಾಯಕರು ತಮ್ಮ ಮೇಲಿನ ನಂಬಿಕೆ ಕಳೆದುಕೊಳ್ಳಲಿ ಎಂದೇ ಕೆಲವರು ಇಂತಹ ವದಂತಿ ಹಬ್ಬಿಸುತ್ತಿದ್ದು, ತಾವಿನ್ನೂ ಕಾಂಗ್ರೆಸ್‌ನಲ್ಲೇ ಇರುವುದಾಗಿ ಸಚಿನ್ ಪೈಲಟ್ ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ