ಆ್ಯಪ್ನಗರ

ಕಂಚಿ ಮಠದ ನೂತನ ಪೀಠಾಧಿಪತಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ

ಕಂಚಿ ಮಠದ ಕಿರಿಯ ಶ್ರೀಗಳಾದ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಮಠದ ಉತ್ತರಾಧಿಕಾರಿಯಾಗಿ ಹೊಣೆ ವಹಿಸಿಕೊಂಡಿದ್ದಾರೆ.

Vijaya Karnataka Web 4 Mar 2018, 4:04 pm
ಕಾಂಚೀಪುರಂ: ಕಂಚಿ ಮಠದ ಕಿರಿಯ ಶ್ರೀಗಳಾದ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಅವರು ಮಠದ ಉತ್ತರಾಧಿಕಾರಿಯಾಗಿ ಹೊಣೆ ವಹಿಸಿಕೊಂಡಿದ್ದಾರೆ.
Vijaya Karnataka Web sri vijayendra saraswathi is now head of kanchi mutt
ಕಂಚಿ ಮಠದ ನೂತನ ಪೀಠಾಧಿಪತಿ ಶ್ರೀ ವಿಜಯೇಂದ್ರ ಸರಸ್ವತಿ ಸ್ವಾಮೀಜಿ


69ನೇ ಪೀಠಾಧಿಪತಿಯಾಗಿದ್ದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ಬ್ರಹ್ಮೈಕ್ಯರಾಗಿರುವ ಹಿನ್ನೆಲೆಯಲ್ಲಿ ಕಿರಿಯ ಸ್ವಾಮೀಜಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.

'ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮಿಗಳು ಶ್ರೀ ಕಂಚಿ ಕಾಮಕೋಟಿ ಪೀಠದ ಪೀಠಾಧಿಪತಿಯಾಗಿ ಕರ್ತವ್ಯಗಳನ್ನು ಆರಂಭಿಸಿದ್ದಾರೆ' ಎಂದು ಪ್ರಕಟಣೆ ತಿಳಿಸಿದೆ.

ಈ ಮಧ್ಯೆ, ತಮಿಳು ಗೀತೆಗೆ ಅಗೌರವ ತೋರಿದ ಆರೋಪದಲ್ಲಿ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಪೊಲೀಸರಿಗೆ ಮದ್ರಾಸ್‌ ಹೈಕೋರ್ಟ್‌ ನಿರ್ದೇಶನ ನೀಡಿದೆ. ತಂತೈ ಪೆರಿಯಾರ್‌ ದ್ರಾವಿಡರ್‌ ಕಳಗಂ ಉಪಾಧ್ಯಕ್ಷ ಎಸ್‌. ದೊರೈಸ್ವಾಮಿ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಎಂ.ಎಸ್‌ ರಮೇಶ್‌ ಈ ನಿರ್ದೇಶನ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ