ಇಂಧೋರ್ (ಮಧ್ಯಪ್ರದೇಶ): ಹಾಸ್ಯದ ಹೆಸರಲ್ಲಿ ಹಿಂದೂ ದೇವತೆಗಳನ್ನು ಅವಹೇಳನ ಮಾಡಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಸ್ಟ್ಯಾಂಡ್ ಅಪ್ ಕಮಿಡಿಯನ್ ಮುನಾವರ್ ಫಾರೂಕಿಗೆ ಮಧ್ಯಪ್ರದೇಶ ಹೈಕೋರ್ಟ್ ಜಾಮೀನು ನಿರಾಕರಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಮಧ್ಯಪ್ರದೇಶ ಹೈಕೋರ್ಟ್ ಇಂಧೋರ್ ಪೀಠ, ಆರೋಪಿ ಮುನಾವರ್ ಫಾರೂಕಿ ಹಾಗೂ ಸಹ ಆರೋಪಿ ನಳಿನ್ ಯಾದವ್ಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. ಜಾಮೀನು ನೀಡಲು ಯಾವುದೇ ಕಾರಣಗಳಿಲ್ಲ ಎಂದು ಏಕಸದಸ್ಯ ಪೀಠದ ನ್ಯಾಯಮೂರ್ತಿ ರೋಹಿತ್ ಆರ್ಯ ಹೇಳಿದ್ದಾರೆ.
ಈ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ, ಈ ಹಂತದಲ್ಲಿ ಪ್ರಕರಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಿಲ್ಲ. ಆದ್ರೆ, ಈವರೆಗೂ ಸಂಗ್ರಹಿಸಿರುವ ಸಾಕ್ಷ್ಯಗಳ ಆಧಾರದ ಮೇಲೆ ಹೇಳೋದಾದ್ರೆ, ಮೇಲ್ನೋಟಕ್ಕೆ ಆಪಾದನೆಗಳು ಸಾಬೀತಾಗುತ್ತಿವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಾಸ್ಯ ಕಲಾವಿದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಹೇಳಿಕೆ ನೀಡಿರೋದಕ್ಕೆ ಪ್ರಾಥಮಿಕ ಸಾಕ್ಷಿಗಳು ಸಿಕ್ಕಿವೆ. ಹೀಗಾಗಿ, ಪ್ರಕರಣದ ತನಿಖೆ ಮುಂದುವರೆಯಲಿ ಎಂದು ಕೋರ್ಟ್ ಹೇಳಿದೆ. ಅಲ್ಲಿಯವರೆಗೂ ಜಾಮೀನು ನೀಡದೆ ಇರಲು ನ್ಯಾಯಾಲಯ ತೀರ್ಮಾನಿಸಿದೆ.
ಈ ಪ್ರಕರಣದ ಸಹ ಆರೋಪಿ ಕೂಡಾ ಹಿಂದೂ ದೇವತೆಗಳ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಹಾಸ್ಯಗಳನ್ನು ಮಾಡ್ತಿರೋದಕ್ಕೆ ಸಾಕ್ಷ್ಯಗಳು ಸಿಕ್ಕಿವೆ. ರಾಮ ಹಾಗೂ ಸೀತೆಯ ಕುರಿತಾಗಿಯೂ ಅಸಭ್ಯ ಹೇಳಿಕೆಗಳನ್ನು ನೀಡಿದ್ದಾರೆ. ಕಳೆದ 18 ತಿಂಗಳ ಹಿಂದಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಸಾಕ್ಷ್ಯಗಳು ಸಿಕ್ಕಿವೆ ಎಂದು ನ್ಯಾಯಪೀಠ ಹೇಳಿದೆ.
ಈ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ, ಈ ಹಂತದಲ್ಲಿ ಪ್ರಕರಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಲು ಸಾಧ್ಯವಿಲ್ಲ. ಆದ್ರೆ, ಈವರೆಗೂ ಸಂಗ್ರಹಿಸಿರುವ ಸಾಕ್ಷ್ಯಗಳ ಆಧಾರದ ಮೇಲೆ ಹೇಳೋದಾದ್ರೆ, ಮೇಲ್ನೋಟಕ್ಕೆ ಆಪಾದನೆಗಳು ಸಾಬೀತಾಗುತ್ತಿವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಹಾಸ್ಯ ಕಲಾವಿದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಹೇಳಿಕೆ ನೀಡಿರೋದಕ್ಕೆ ಪ್ರಾಥಮಿಕ ಸಾಕ್ಷಿಗಳು ಸಿಕ್ಕಿವೆ. ಹೀಗಾಗಿ, ಪ್ರಕರಣದ ತನಿಖೆ ಮುಂದುವರೆಯಲಿ ಎಂದು ಕೋರ್ಟ್ ಹೇಳಿದೆ. ಅಲ್ಲಿಯವರೆಗೂ ಜಾಮೀನು ನೀಡದೆ ಇರಲು ನ್ಯಾಯಾಲಯ ತೀರ್ಮಾನಿಸಿದೆ.
ಈ ಪ್ರಕರಣದ ಸಹ ಆರೋಪಿ ಕೂಡಾ ಹಿಂದೂ ದೇವತೆಗಳ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಹಾಸ್ಯಗಳನ್ನು ಮಾಡ್ತಿರೋದಕ್ಕೆ ಸಾಕ್ಷ್ಯಗಳು ಸಿಕ್ಕಿವೆ. ರಾಮ ಹಾಗೂ ಸೀತೆಯ ಕುರಿತಾಗಿಯೂ ಅಸಭ್ಯ ಹೇಳಿಕೆಗಳನ್ನು ನೀಡಿದ್ದಾರೆ. ಕಳೆದ 18 ತಿಂಗಳ ಹಿಂದಿನಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಈ ಸಂಬಂಧ ಸಾಕ್ಷ್ಯಗಳು ಸಿಕ್ಕಿವೆ ಎಂದು ನ್ಯಾಯಪೀಠ ಹೇಳಿದೆ.