ಆ್ಯಪ್ನಗರ

ದೀಪಾವಳಿ ವೇಳೆ ಉಗ್ರರ ದಾಳಿ ಭೀತಿ: ಎಚ್ಚರ ವಹಿಸಲು ರಾಜ್ಯಗಳಿಗೆ ಸೂಚನೆ

ಕೇಂದ್ರ ಸರಕಾರ ಎಲ್ಲ ರಾಜ್ಯ ಸರಕಾರಗಳಿಗ ಸೂಚನೆ ನೀಡಿದೆ.

Agencies 18 Oct 2017, 11:58 pm
ಹೊಸದಿಲ್ಲಿ: ಪ್ರಸಕ್ತ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಉಗ್ರರು ಮತ್ತು ಸಮಾಜಘಾತುಕ ಶಕ್ತಿಗಳು ಶಾಂತಿ ಕದಡುವ ಸಾಧ್ಯತೆ ಇರುವುದರಿಂದ ರಾಜ್ಯ ಸರಕಾರಗಳು ಹೆಚ್ಚಿನ ಭದ್ರತೆ, ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಕೇಂದ್ರ ಸರಕಾರ ಸೂಚನೆ ನೀಡಿದೆ.
Vijaya Karnataka Web state govt should take precautions
ದೀಪಾವಳಿ ವೇಳೆ ಉಗ್ರರ ದಾಳಿ ಭೀತಿ: ಎಚ್ಚರ ವಹಿಸಲು ರಾಜ್ಯಗಳಿಗೆ ಸೂಚನೆ


ಹಬ್ಬಗಳ ಸಂದರ್ಭದಲ್ಲಿ ಕೋಮು ಸೌಹಾರ್ದ ಹಾಳು ಮಾಡಲು ಪ್ರಯತ್ನ ನಡೆಸುವ ಸಾಧ್ಯತೆ ಇದ್ದು, ರಾಜ್ಯ ಸರ್ಕಾರಗಳು ತೀವ್ರ ನಿಗಾವಹಿಸಬೇಕು ಹಾಗೂ ಭದ್ರತೆ ಹೆಚ್ಚಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಧಾರ್ಮಿಕ ಸ್ಥಳಗಳು ಮತ್ತು ಜನಸಂದಣಿ ಹೆಚ್ಚು ಇರುವ ಪ್ರದೇಶಗಳಲ್ಲಿ ಉಗ್ರರು ದಾಳಿ ನಡೆಸುವ ಸಂಭವವಿದ್ದು, ಈ ಭಾಗಗಳಲ್ಲಿ ಭದ್ರತಾ ಸಿಬ್ಬಂದಿಯನ್ನು ಹೆಚ್ಚು ನಿಯೋಜಿಸಬೇಕು. ಧಾರ್ಮಿಕ ಪ್ರದೇಶಗಳಲ್ಲಿ ಉದ್ರೇಕಕಾರಿ ಭಾಷಣಗಳ ಬಗ್ಗೆ ತೀವ್ರ ನಿಗಾವಹಿಸಬೇಕು ಎಂದು ರಾಜ್ಯಗಳಿಗೆ ಗೃಹ ಸಚಿವಾಲಯ ಸೂಚಿಸಿದೆ.

State Govt should take precautions

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ