ಆ್ಯಪ್ನಗರ

ಕೇಂದ್ರದ ಕೋವಿಡ್‌ ಮಾರ್ಗಸೂಚಿಯನ್ನು ರಾಜ್ಯಗಳು ಪಾಲಿಸಲೇಬೇಕು: ಸುಪ್ರೀಂ ಆದೇಶ

ಕೊರೊನಾ ಸೋಂಕು ದೃಢಪಟ್ಟವರು ಹಾಗೂ ಶಂಕಿತ ವ್ಯಕ್ತಿಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಹೊರಡಿಸಿರುವ ಮಾರ್ಗಸೂಚಿಗಳನ್ನು ಎಲ್ಲ ರಾಜ್ಯ ಸರಕಾರಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

Vijaya Karnataka Web 11 Sep 2020, 6:30 pm
ನವದೆಹಲಿ: ಕೊರೊನಾ ಸೋಂಕು ದೃಢಪಟ್ಟವರು ಹಾಗೂ ಶಂಕಿತ ವ್ಯಕ್ತಿಗಳ ಸಾಗಾಟಕ್ಕೆ ಸಂಬಂಧಿಸಿದಂತೆ ಕೇಂದ್ರ ಹೊರಡಿಸಿರುವ ಮಾರ್ಗಸೂಚಿಗಳನ್ನು ಎಲ್ಲ ರಾಜ್ಯ ಸರಕಾರಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.
Vijaya Karnataka Web Virus Outbreak Testing Guidelines


ನ್ಯಾಯಮೂರ್ತಿ ಅಶೋಕ್‌ ಭೂಷನ್‌, ನ್ಯಾ. ಆರ್‌. ಸುಭಾಷ್‌ ರೆಡ್ಡಿ ಮತ್ತು ನ್ಯಾ.ಎಂ. ಆರ್‌. ಶಾ ಅವರನ್ನೊಳಗೊಂಡ ನ್ಯಾಯಪೀಠ ಈ ಕುರಿತು ಆದೇಶ ನೀಡಿದೆ.

ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಕೋವಿಡ್ 19 ಮಾರ್ಗಸೂಚಿಯಲ್ಲಿ ಕೊರೊನಾ ಸೋಂಕಿತರನ್ನು ಕರೆದೊಯ್ಯುವ ಆಂಬುಲೆನ್ಸ್‌ಗೆ ಎಷ್ಟು ಬಾಡಿಗೆ ನೀಡಬೇಕು ಎಂಬ ಕುರಿತು ತಿಳಿಸಿಲ್ಲ. ಹೀಗಾಗಿ ಆಸ್ಪತ್ರೆಗಳು ರೋಗಿಗಳಿಗೆ ಸಿಕ್ಕಾಪಟ್ಟೆ ಬಾಡಿಗೆ ವಿಧಿಸುತ್ತಿವೆ. ಇದನ್ನು ಸರಿಪಡಿಸಬೇಕು ಎಂದು ಕೋರಿ 'ಅರ್ಥ್' ಸಂಸ್ಥೆಯವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ ಸರ್ಕಾರಗಳೇ ಆಂಬ್ಯುಲೆನ್ಸ್‌ಗಳಿಗೆ ಯೋಗ್ಯ ಬಾಡಿಗೆ ನಿಗದಿಪಡಿಸಬೇಕು ಎಂದು ಸೂಚಿಸಿದೆ.

ಆಂಟಿಜೆನ್‌ ಟೆಸ್ಟ್‌ನಲ್ಲಿ ನೆಗೆಟಿವ್ ಬಂದವರರಿಗೆ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿ: ಎಲ್ಲ ರಾಜ್ಯಗಳಿಗೆ ಕೇಂದ್ರ ಸೂಚನೆ

ಕೇಂದ್ರ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವಾಲಯ ಈಗಾಗಲೇ 'ಮಾರ್ಗಸೂಚಿ'ಗಳನ್ನು ಬಿಡುಗಡೆ ಮಾಡಿದ್ದು, ಎಲ್ಲ ರಾಜ್ಯಗಳು ಅದನ್ನು ಅನುಷ್ಠಾನಗೊಳಿಸಬೇಕು ಎಂದು ಕೇಂದ್ರ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯ ಪೀಠಕ್ಕೆ ತಿಳಿಸಿದರು.

ವಿಡಿಯೊ ಕಾನ್ಫರೆನ್ಸ್‌ ಮೂಲಕ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ' ಕೇಂದ್ರ ಸರ್ಕಾರ ನೀಡಿರುವ ಕೋವಿಡ್‌ 19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಅನುಸರಿಸುವ ಜತೆಗೆ, ಆಂಬ್ಯುಲೆನ್ಸ್‌ಗಳ ಸಾಮರ್ಥವ್ಯನ್ನು ಹೆಚ್ಚಿಸಲು ಕ್ರಮಕೈಗೊಳ್ಳಬೇಕು' ಎಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿತು.

ಇಎಂಐ ಪಾವತಿ ಅವಧಿ ಸೆ. 28ರವರೆಗೆ ವಿಸ್ತರಣೆ: ಮಧ್ಯಂತರ ಆದೇಶ ನೀಡಿದ ಸುಪ್ರೀಂ

ಅರ್ಜಿ ವಿಚಾರಣೆ ವೇಳೆ, ಕೆಲವು ರಾಜ್ಯಗಳು ಕೇಂದ್ರದ ಮಾರ್ಗಸೂಚಿಯನ್ನು ಪಾಲಿಸುತ್ತಿಲ್ಲ ಮತ್ತು ರೋಗಿಗಳಿಂದ ಆಂಬ್ಯುಲೆನ್ಸ್‌ ಸೇವೆಗಾಗಿ ₹7ಸಾವಿರ ಕೆಲವೊಮ್ಮೆ ₹50 ಸಾವಿರದವರೆಗೆ ಬಾಡಿಗೆ ಕೇಳುತ್ತಿದ್ದಾರೆ ಎಂಬ ಅಂಶವನ್ನು ಪೀಠ ಆಲಿಸಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ