ಆ್ಯಪ್ನಗರ

ಶಶಿಕಲಾ ಶೀಘ್ರ ಉಚ್ಚಾಟನೆ: ಎಐಡಿಎಂಕೆ ಸಂಸದ

ಎಐಡಿಎಂಕೆ ಪಕ್ಷ ವಿಲೀನಗೊಳ್ಳುತ್ತಿದ್ದಂತೆಯೇ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಕೆ ಶಶಿಕಲಾರನ್ನು ಪಕ್ಷದಿಂದ ಉಚ್ಚಾಟಿಸುವುದಾಗಿ ಸಂಸದ ಆರ್‌ ವೈತಿಲಿಂಗಮ್‌ ತಿಳಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 21 Aug 2017, 6:57 pm
ಚೆನ್ನೈ: ಎಐಎಡಿಎಂಕೆ ಪಕ್ಷ ವಿಲೀನಗೊಳ್ಳುತ್ತಿದ್ದಂತೆಯೇ ಪಕ್ಷದ ಪ್ರಧಾನ ಕಾರ್ಯದರ್ಶಿ ವಿಕೆ ಶಶಿಕಲಾರನ್ನು ಪಕ್ಷದಿಂದ ಉಚ್ಚಾಟಿಸುವುದಾಗಿ ಸಂಸದ ಆರ್‌ ವೈತಿಲಿಂಗಮ್‌ ತಿಳಿಸಿದ್ದಾರೆ.
Vijaya Karnataka Web steps will be taken to remove sasikala from party
ಶಶಿಕಲಾ ಶೀಘ್ರ ಉಚ್ಚಾಟನೆ: ಎಐಡಿಎಂಕೆ ಸಂಸದ


ರಾಜಭವನದಲ್ಲಿ ಪನ್ನೀರ್ ಸೆಲ್ವಂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಇವರ ಹಿಂಬಾಲಕರಾಗಿರುವ ವೈತಿಲಿಂಗಮ್‌ ಪಕ್ಷದ ಮುಖ್ಯಕಚೇರಿಯಲ್ಲಿ ಮಾತನಾಡಿದ್ದು, ಶಶಿಕಲಾ ಉಚ್ಚಾಟನೆಗೆ ಬೇಕಾದ ಎಲ್ಲಾ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಶಶಿಕಲಾ ಹಾಗೂ ದಿನಕರನ್‌ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂಬುದು ಪನ್ನೀರ್‌ ಸೆಲ್ವಂ ಬಣದ ಮೊದಲ ಬೇಡಿಕೆಯಾಗಿತ್ತು.
ಇದಾದ ಬಳಿಕ ಸೋಮವಾರ ಪನ್ನೀರ್‌ ಸೆಲ್ವಂ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ರಾಜ್ಯಪಾಲ ವಿದ್ಯಾಸಾಗರ್ ರಾವ್ ಪ್ರಮಾಣ ವಚನ ಬೋಧಿಸಿದ್ದಾರೆ. ಪನ್ನೀರ್ ಸೆಲ್ವಂ ಅವರೊಂದಿಗೆ ಕೆ ಪಾಂಡಿಯರಾಜನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ