ಆ್ಯಪ್ನಗರ

ಕೋಲ್ಕತ್ತಾ: ಬಿಜೆಪಿ ರೋಡ್‌ ಶೋ ಮೇಲೆ ಕಲ್ಲೆಸೆತ, 'ಟಿಎಂಸಿ ಗೂಂಡಾ'ವರ್ತನೆಗೆ ಕಿಡಿ!

ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ರೋಡ್ ಶೋ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೇಂದ್ರ ಸಚಿವ ದೇಬಶ್ರೀ ಚೌಧರಿ, ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹಾಗೂ ಸುವೇಂದು ಅಧಿಕಾರಿ ಭಾಗವಹಿಸಿರುವ ರೋಡ್ ಶೋ ಮೇಲೆ ಕಲ್ಲುಗಳನ್ನು ಎಸೆಯಲಾಗಿದೆ.

Vijaya Karnataka Web 18 Jan 2021, 5:21 pm
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ಬಿಜೆಪಿ ಹಮ್ಮಿಕೊಂಡಿರುವ ರೋಡ್ ಶೋ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Vijaya Karnataka Web Roadshow
ಕೋಲ್ಕತ್ತಾದಲ್ಲಿ ನಡೆದ ಬಿಜೆಪಿ ರೋಡ್ ಶೋ ಮೇಲೆ ಕಲ್ಲೆಸೆತ


ಕೇಂದ್ರ ಸಚಿವ ದೇಬಶ್ರೀ ಚೌಧರಿ, ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹಾಗೂ ಸುವೇಂದು ಅಧಿಕಾರಿ ಭಾಗವಹಿಸಿರುವ ರೋಡ್ ಶೋ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು, ರೋಡ್ ಶೋನಲ್ಲಿ ಭಾಗವಹಿಸಿದ್ದ ಬಿಜೆಪಿ ಕಾರ್ಯಕರ್ತರಿಗೆ ಪೆಟ್ಟುಗಳಾಗಿವೆ.

ಕೋಲ್ಕತ್ತಾದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿದ್ದ ಬಿಜೆಪಿ ರೋಡ್ ಶೋ ಮೇಲೆ ಕಲ್ಲುಗಳನ್ನು ಎಸೆಯಲಾಗಿದ್ದು, ಟಿಎಂಸಿ ಕಾರ್ಯಕರ್ತರ ವಿರುದ್ಧ ಆರೋಪ ಕೇಳಿ ಬಂದಿದೆ.

ಕೋಲ್ಕತ್ತಾ ಬಳಿ ನಡ್ಡಾ ಬೆಂಗಾವಲು ವಾಹನದ ಮೇಲೆ ದಾಳಿ: ಮಾ ದುರ್ಗೆ ರಕ್ಷಿಸಿದಳು ಎಂದ ಬಿಜೆಪಿ ಅಧ್ಯಕ್ಷ!

ಈ ಕುರಿತು ಮಾತನಾಡಿರುವ ದಿಲೀಪ್ ಘೋಷ್, ರಾಜ್ಯದಲ್ಲಿ ಬಲಗೊಳ್ಳುತ್ತಿರುವ ಬಿಜೆಪಿ ವರ್ಚಸ್ಸನ್ನು ಕಂಡು ಬೆದರಿರುವ ಆಡಳಿತಾರೂಢ ಟಿಎಂಸಿ, ನಮ್ಮ ಮೇಲೆ ದಾಳಿ ಮಾಡಲು ಮುಂದಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.


ನಮ್ಮ ಮೇಲೆ ದಾಳಿ ನಡೆಸಿದಷ್ಟೂ ನಾವು ರಾಜ್ಯದಲ್ಲಿ ಬಲಗೊಳ್ಳುತ್ತೇವೆ. ರಾಜ್ಯದ ಜನತೆ ಆಡಳಿತಾರೂಢ ಟಿಎಂಸಿ ಪಕ್ಷದ ಗೂಂಡಾವರ್ತನೆಯಿಂದ ಬೇಸತ್ತಿದ್ದಾರೆ ಎಂದು ದಿಲೀಪ್ ಘೋಷ್ ಹರಿಹಾಯ್ದಿದ್ದಾರೆ.

ಸದ್ಯ ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಶ್ರಮಿಸುತ್ತಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಭೆ ಸಮಾರಂಭಗಳ ಮೇಲೆ ಮೇಲಿಂದ ಮೇಲೆ ದಾಳಿಗಳಾಗುತ್ತಿರುವುದು ರಾಜಕೀಯ ಜಿಜ್ಞಾಸೆಗೂ ಕಾರಣವಾಗಿದೆ.

ಮುಂದಿನ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧೆ: ಪಕ್ಷ ತೊರೆದ ಸುವೇಂದು ಅಧಿಕಾರಿಗೆ ಮಮತಾ ಬ್ಯಾನರ್ಜಿ ರಣವೀಳ್ಯ

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತಾವು ನಂದಿಗ್ರಾಮ್‌ದಿಂದ ಸ್ಪರ್ಧಿಸುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. ನಂದಿಗ್ರಾಮ್ ಸುವೇಂದು ಅಧಿಕಾರಿ ಅವರ ಸ್ವಕ್ಷೇತ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ನಿರ್ಣಯ ಕುತೂಹಲ ಕೆರಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ