ಆ್ಯಪ್ನಗರ

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ: ಒಐಸಿಗೆ ಸುಷ್ಮಾ ತಿರುಗೇಟು

ಕಾಶ್ಮೀರದ ವಿಚಾರವಾಗಿ ಭಾರತವನ್ನು ಟೀಕಿಸಿ 57 ದೇಶಗಳನ್ನು ಒಳಗೊಂಡ ಇಸ್ಲಾಮಿಕ್‌ ಸಹಕಾರ ಸಂಘಟನೆ(ಒಐಸಿ) ಶನಿವಾರ ಕೈಕೊಂಡ ನಿರ್ಣಯಕ್ಕೆ ಅವರು ಸುಷ್ಮಾ ಸ್ವರಾಜ್‌ ಪ್ರತ್ಯುತ್ತರ ನೀಡಿದ್ದಾರೆ.

Vijaya Karnataka 4 Mar 2019, 5:00 am
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದ್ದು, ಇಲ್ಲಿ ನಡೆಯುವ ಘಟನೆಗಳು ಸಂಪೂರ್ಣವಾಗಿ ಭಾರತದ ಆಂತರಿಕ ವಿಷಯವಾಗಿದೆ ಎಂದು
Vijaya Karnataka Web sushma

ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್‌ ಸ್ಪಷ್ಟಪಡಿಸಿದ್ದಾರೆ. ಕಾಶ್ಮೀರದ ವಿಚಾರವಾಗಿ ಭಾರತವನ್ನು ಟೀಕಿಸಿ 57 ದೇಶಗಳನ್ನು ಒಳಗೊಂಡ ಇಸ್ಲಾಮಿಕ್‌ ಸಹಕಾರ ಸಂಘಟನೆ(ಒಐಸಿ) ಶನಿವಾರ ಕೈಕೊಂಡ ನಿರ್ಣಯಕ್ಕೆ ಅವರು ಈ ಮೂಲಕ ಪ್ರತ್ಯುತ್ತರ ನೀಡಿದ್ದಾರೆ. ''2016ರ ಜುಲೈನಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತದ ಕ್ರೌರ್ಯ ಹೆಚ್ಚಿದೆ. ಅಕ್ರಮ ಬಂಧನ ಮತ್ತು ಕಣ್ಮರೆಗಳ ಪ್ರಕರಣಗಳು ಹೆಚ್ಚಿವೆ,'' ಎಂದು ಶನಿವಾರದ ಒಐಸಿ ನಿರ್ಣಯದಲ್ಲಿ ಹೇಳಲಾಗಿತ್ತು. ಇದೇ ಮೊದಲ ಬಾರಿಗೆ ಈ ಸಮಾವೇಶಕ್ಕೆ ಗೌರವ ಅತಿಥಿಯಾಗಿ ಭಾರತಕ್ಕೆ ಆಹ್ವಾನ ನೀಡಿದ್ದ ಹಿನ್ನೆಲೆಯಲ್ಲಿ ಸುಷ್ಮಾ ಸ್ವರಾಜ್‌ ಅವರು ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ