ಆ್ಯಪ್ನಗರ

ತರಗತಿಯೊಳಗೆ ಶಿಕ್ಷಕಿಯ ಕೈಗೆ ಮಸಾಜ್ ಮಾಡಿದ ವಿದ್ಯಾರ್ಥಿ: ವಿಡಿಯೋ ವೈರಲ್

Student Massaging Teacher: ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಪ್ರಾಥಮಿಕ ಶಾಲೆಯ ಒಳಗೆ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯಿಂದ ಮಸಾಜ್ ಮಾಡಿಸಿಕೊಂಡ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

Edited byಅಮಿತ್ ಎಂ.ಎಸ್ | Vijaya Karnataka Web 28 Jul 2022, 6:00 pm

ಹೈಲೈಟ್ಸ್‌:

  • ಉತ್ತರ ಪ್ರದೇಶದ ಹರ್ದೋಯಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ
  • ಪ್ರಾಥಮಿಕ ಶಾಲೆ ತರಗತಿಯೊಳಗೆ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ
  • ವಿಡಿಯೋ ವೈರಲ್ ಆದ ಬಳಿಕ ಶಿಕ್ಷಕಿಯನ್ನು ಅಮಾನತು ಮಾಡಿದ ಇಲಾಖೆ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web student massaging teacher hand in classroom in up video goes viral
ತರಗತಿಯೊಳಗೆ ಶಿಕ್ಷಕಿಯ ಕೈಗೆ ಮಸಾಜ್ ಮಾಡಿದ ವಿದ್ಯಾರ್ಥಿ: ವಿಡಿಯೋ ವೈರಲ್
ಲಖನೌ: ವಿದ್ಯಾರ್ಥಿಯಿಂದ ಕೈಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ಸರ್ಕಾರಿ ಶಾಲಾ ಶಿಕ್ಷಕಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅವರನ್ನು ಅಮಾನತು ಮಾಡಲಾಗಿದೆ. ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಈ ವಾರದ ಆರಂಭದಲ್ಲಿ ಘಟನೆ ನಡೆದಿದೆ.
ಪೊಖಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಕುರ್ಚಿಯ ಮೇಲೆ ಕುಳಿತು ವಿರಮಿಸುತ್ತಿದ್ದು, ಅವರ ಪಕ್ಕದಲ್ಲಿ ನಿಂತಿದ್ದ ವಿದ್ಯಾರ್ಥಿಯೊಬ್ಬ ಅವರ ಕೈಗೆ ಮಸಾಜ್ ಮಾಡಿದ್ದಾನೆ. ಶಾಲಾ ಅವಧಿಯಲ್ಲಿಯೇ ಈ ಘಟನೆ ನಡೆದಿದೆ. ಉಳಿದ ವಿದ್ಯಾರ್ಥಿಗಳು ತಮ್ಮ ಚಟುವಟಿಕೆಗಳಲ್ಲಿ ಮಗ್ನರಾಗಿದ್ದರು. ತರಗತಿಯಲ್ಲಿದ್ದ ಯಾರೋ ವ್ಯಕ್ತಿ ಈ ವಿಡಿಯೋ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಕೂಡಲೇ ವಿಡಿಯೋ ವೈರಲ್ ಆಗಿದೆ.
ತರಗತಿಗೆ ವಿದ್ಯಾರ್ಥಿಗಳ ಗೈರು, 24 ಲಕ್ಷ ರೂ ಸಂಬಳ ಮರಳಿಸಿದ ಪ್ರಾಧ್ಯಾಪಕ: ಹೀಗೊಂದು ಅಪರೂಪದ ಪ್ರಸಂಗ!

ಬಾಲಕ ತಮ್ಮ ಎಡಗೈಯನ್ನು ಒತ್ತುತ್ತಾ ಮಸಾಜ್ ಮಾಡುತ್ತಿರುವಾಗ ಶಿಕ್ಷಕಿ ಬಾಟಲಿಯಿಂದ ನೀರು ಕುಡಿದು ಸುಧಾರಿಸಿಕೊಳ್ಳುವುದು ಕಾಣಿಸಿದೆ. ವಿದ್ಯಾರ್ಥಿ ಮಸಾಜ್ ಮಾಡುವುದು ಮುಂದುವರಿಸಿರುವಾಗ, ಶಿಕ್ಷಕಿ ತರಗತಿಯಲ್ಲಿನ ಇತರೆ ವಿದ್ಯಾರ್ಥಿಗಳ ವಿರುದ್ಧ ಕಿರುಚುವುದು ಕೂಡ ಸೆರೆಯಾಗಿದೆ.


ಶಿಕ್ಷಕಿಯನ್ನು ಊರ್ಮಿಳಾ ಸಿಂಗ್ ಎಂದು ಗುರುತಿಸಲಾಗಿದೆ. ಬಾವನ್ ಬ್ಲಾಕ್‌ನಲ್ಲಿರುವ ಪೊಖಾರಿ ಪ್ರಾಥಮಿಕ ಶಾಲೆಯಲ್ಲಿ ಅವರು ಸಹಾಯಕ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾರೆ.
ಶಿಕ್ಷಣ ಸಚಿವರು ನೀಡಿದ ಕನ್ನಡ ಶಾಲೆಗಳ ವಿಲೀನ ಹೇಳಿಕೆ ವಿರೋಧಿಸಿದ್ದಕ್ಕೆ ಶಾಲಾ ಶಿಕ್ಷಕನಿಗೆ ನೋಟಿಸ್‌!

ಈ ವಿಡಿಯೋ ವೈರಲ್ ಆದ ಬಳಿಕ ಮೂಲ ಶಿಕ್ಷಣ ಅಧಿಕಾರಿ (ಬಿಎಸ್‌ಎ) ವಿಪಿ ಸಿಂಗ್ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಮತ್ತು ಇಲಾಖಾ ಮಟ್ಟದ ಕ್ರಮ ತೆಗೆದುಕೊಳ್ಳುವಂತೆ ಬ್ಲಾಕ್ ಶಿಕ್ಷಣ ಅಧಿಕಾರಿಗೆ ಸೂಚನೆ ನೀಡಿದ್ದಾರೆ.

ಮಥುರಾದಲ್ಲಿನ ಘಟನೆಯ ಮತ್ತೊಂದು ವಿಡಿಯೋ ಕೂಡ ವೈರಲ್ ಆಗಿದೆ. ಇಲ್ಲಿ ನೀರಿನಿಂದ ತುಂಬಿಕೊಂಡ ಶಾಲೆಗೆ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳು ಇರಿಸಿದ್ದ ಪ್ಲಾಸ್ಟಿಕ್ ಕುರ್ಚಿ ಮೇಲೆ ನಡೆದುಕೊಂಡು ಬರುವುದು ಸೆರೆಯಾಗಿದೆ. ಭಾರಿ ಮಳೆಯಿಂದ ಶಾಲೆಯ ಆವರಣದಲ್ಲಿ ನೀರು ತುಂಬಿದ್ದು, ಮಕ್ಕಳು ಸಾಲಾಗಿ ಇರಿಸಿದ್ದ ಕುರ್ಚಿಗಳ ಮೇಲೆ ದಾಟಿ ಸಾಗಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ