ಆ್ಯಪ್ನಗರ

ಬೆಂಕಿ ದುರಂತ: ಕೊರೊನಾ ಲಸಿಕಾ ತಯಾರಿಕಾ ಸಂಸ್ಥೆ ಸೀರಮ್‌ಗೆ ಸಾವಿರ ಕೋಟಿ ರೂ. ನಷ್ಟ!

ಸೀರಮ್ ಇನ್ಸ್ಟಿಟ್ಯೂಟ್‌ನ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ, ಸಂಸ್ಥೆಗೆ ಸುಮಾರು ಒಂದು ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಆದರೆ ಕೊರೊನಾ ಲಸಿಕೆ ತಯಾರಿಕೆ ಹಾಗೂ ವಿತರಣೆ ಪ್ರಕ್ರಿಯೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಸಂಸ್ಥೆ ವಿಶ್ವಾಸ ವ್ಯಕ್ತಪಡಿಸಿದೆ.

Vijaya Karnataka Web 22 Jan 2021, 7:13 pm
ಪುಣೆ: ದೇಶದಲ್ಲಿ ಕೋವಿಶೀಲ್ಡ್ ಕೊರೊನಾ ಲಸಿಕೆ ವಿತರಕ ಸಂಸ್ಥೆ ಸೀರಮ್ ಇನ್ಸ್ಟಿಟ್ಯೂಟ್‌ನ ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ ಐವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ದೇಶವನ್ನು ಆಘಾತಕ್ಕೆ ತಳ್ಳಿದೆ.
Vijaya Karnataka Web Serum in
ಸಂಗ್ರಹ ಚಿತ್ರ


ನಿನ್ನೆ(ಜ.21-ಗುರುವಾರ) ನಡೆದ ಘಟನೆಗೆ ತೀವ್ರ ಖೇದ ವ್ಯಕ್ತಪಡಿಸಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಲಸಿಕೆಯ ಉತ್ಪಾದನೆ
ಹಾಗೂ ಪೂರೈಕೆಯ ತನ್ನ ವಾಗ್ದಾನವನ್ನು ಮುಂದುವರೆಸುವುದಾಗಿ ಸ್ಪಷ್ಟಪಡಿಸಿದೆ.

ಬೆಂಕಿ ಅವಘಡದಿಂದಾಗಿ ಒಂದು ಸಾವಿರ ಕೋಟಿ ರೂ.ಗಿಂತಲೂ ಅಧಿಕ ನಷ್ಟ ಸಂಭವಿಸಿದೆ ಎಂದಿರುವ ಸಂಸ್ಥೆ, ಲಸಿಕೆ ತಯಾರಿಕೆ ಹಾಗೂ ಸಂಗ್ರಹಣಾ ಘಟಕಗಳು ಸುರಕ್ಷಿತವಾಗಿರುವುದು ನೆಮ್ಮದಿಯ ಸಂಗತಿ ಎಂದು ಹೇಳಿದೆ.

ಸೀರಮ್ ಇನ್ಸ್ಟಿಟ್ಯೂಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಬೆಂಕಿ: ಮತ್ತೆ ಶುರುವಾಯ್ತು ಕಾರ್ಯಾಚರಣೆ!

ಬೆಂಕಿ ಅವಘಡದಿಂದಾಗಿ ಭಾರೀ ನಷ್ಟವನ್ನು ಎದುರಿಸಬೇಕಾಗಿ ಬಂದಿದ್ದು, ಭವಿಷ್ಯದಲ್ಲಿ ಬಿಸಿಜಿ ಮತ್ತು ರೋಟಾ ಲಸಿಕೆಗಳ ಉತ್ಪಾದನೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಸಾಧ್ಯತೆಯೂ ಇದೆ ಎಂದು ಸೀರಮ್ ಸಂಸ್ಥೆ ಶಂಕೆ ವ್ಯಕ್ತಪಡಿಸಿದೆ.


ಆದರೆ ಯಾವುದೇ ಕಾರಣಕ್ಕೂ ಕೊರೊನಾ ಲಸಿಕೆ ಉತ್ಪಾದನೆಯ ತನ್ನ ವಾಗ್ದಾನದಿಂದ ಸಂಸ್ಥೆ ಹಿಂದೆ ಸರಿಯುವುದಿಲ್ಲ ಎಂದು ಸಂಸ್ಥೆ ಸಿಇಒ ಆದಾರ್ ಪೂನಾವಾಲಾ ಸ್ಪಷ್ಟಪಡಿಸಿದ್ದಾರೆ.

ಇನ್ನು ಘಟನೆಯ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ತನಿಖಾ ವರದಿ ಬಂದ ಬಳಿಕವೇ ಈ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚಿಂತನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕೊರೊನಾ ಲಸಿಕೆ ತಯಾರಿಕಾ ಸಂಸ್ಥೆ ಸೀರಮ್‌ನಲ್ಲಿ ಅಗ್ನಿ ಅವಘಡ: ಐವರ ದುರ್ಮರಣ!

ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕಷ್ಟೇ ಈ ಕುರಿತು ಪ್ರತಿಕ್ರಿಯೆ ನೀಡುವುದಾಗಿ ಉದ್ಧವ್ ಠಾಕ್ರೆ ನುಡಿದಿದ್ದಾರೆ. ಅಲ್ಲದೇ ತನಿಖಾ ವರದಿ ಶೀಘ್ರವೇ ಬರಲಿದೆ ಎಂಬ ನಿರೀಕ್ಷೆ ಇದೆ ಎಂದು ಠಾಕ್ರೆ ಹೇಳಿದ್ದಾರೆ.

ವಿಶೇಷ ಆರ್ಥಿಕ ವಲಯ(SEZ)ದ ಭಾಗವಾಗಿರುವ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಟರ್ಮಿನಲ್ ಗೇಟ್ 1ರ ಒಳಗಿರುವ ಕಟ್ಟಡ ಮೂರು, ನಾಲ್ಕು ಮತ್ತು ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಿಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ