ಆ್ಯಪ್ನಗರ

ಸಂಸತ್ತಿನಲ್ಲಿ ಕನ್ನಡದಲ್ಲೇ ಧ್ವನಿ ಎತ್ತಿ ನೀರು ಕೇಳಿದ ಮಂಡ್ಯ ಸಂಸದೆ ಸುಮಲತಾ

ಸಂಸತ್ತಿನಲ್ಲಿ ಚೊಚ್ಚಲ ಭಾಷಣ ಮಾಡಿದ ಮಂಡ್ಯ ನೂತನ ಸಂಸದೆ ಸುಮಲತಾ ಅವರು, ರಾಜ್ಯ ಹಾಗೂ ತಮ್ಮ ಲೋಕಸಭಾ ಕ್ಷೇತ್ರಕ್ಕೆ ನೀರು ಬಿಡುವಂತೆ ಕನ್ನಡದಲ್ಲೇ ಆಗ್ರಹಿಸಿದರು.

Vijaya Karnataka Web 2 Jul 2019, 3:00 pm
ಹೊಸದಿಲ್ಲಿ: ಕರ್ನಾಟಕ ಮತ್ತು ನನ್ನ ಕ್ಷೇತ್ರವಾದ ಮಂಡ್ಯಕ್ಕೆ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯುವ ನೀರಿಗಾಗಿಯೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕುಡಿಯುವ ನೀರು ಬಿಡಿ ಎಂದು ಮಂಡ್ಯ ಲೋಕಸಭೆ ಕ್ಷೇತ್ರದ ಸಂಸದೆ ಸಂಸತ್ತಿನಲ್ಲಿ ಕನ್ನಡದಲ್ಲಿಯೇ ಧ್ವನಿ ಎತ್ತುವ ಮೂಲಕ ಗಮನ ಸೆಳೆದಿದ್ದಾರೆ.
Vijaya Karnataka Web sumalatha


ಇಂದು ಸಂಸತ್ತಿನಲ್ಲಿ ಮಾತನಾಡಿದ ಸುಮಲತಾ, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ನೀರಿಲ್ಲದೆ ರೈತರು ಸಂಕಷ್ಟದ ಸ್ಥಿತಿ ತಲುಪಿದ್ದಾರೆ. ನಾವೆಲ್ಲ ಅವರ ಬೆನ್ನಿಗೆ ನಿಲ್ಲಬೇಕಾಗಿದೆ. ಕೂಡಲೇ ರಾಜ್ಯಕ್ಕೆ ನೀರು ಬಿಡುವಂತೆ ಒತ್ತಾಯಿಸಿದ್ದಾರೆ.

17ನೇ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಸುಮಲತಾ ಅವರು, ಮೈತ್ರಿ ಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಪರಾಭವಗೊಳಿಸಿ ಲೋಕಸಭೆಗೆ ಆಯ್ಕೆಯಾಗಿದ್ದುರು. ಇಂದು ಸಂಸತ್ತಿನಲ್ಲಿ ಕನ್ನಡದಲ್ಲಿಯೇ ಚೊಚ್ಚಲ ಭಾಷಣ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ