ಆ್ಯಪ್ನಗರ

ಮತ್ತೂ ಬಿಗಡಾಯಿಸಿದ ದಿಲ್ಲಿ ವಾಯುಮಾಲಿನ್ಯ: ನ.4 ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ

ದಿಲ್ಲಿಯ ಮಿತಿಮೀರಿದ ವಾಯುಮಾಲಿನ್ಯ ಕುರಿತಂತೆ ನ.4ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ನಡೆಯಲಿದೆ. ನ್ಯಾಯಮೂರ್ತಿ ಅರುಣ್‌ ಮಿಶ್ರಾ ಅವರ ನೇತೃತ್ವದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಲಿದೆ.

Vijaya Karnataka Web 2 Nov 2019, 2:34 pm
ಹೊಸದಿಲ್ಲಿ: ಹೊಗೆ ಗೂಡಿನಂತಾಗಿರುವ ದಿಲ್ಲಿಯಲ್ಲಿ ವಾಯುಗುಣಮಟ್ಟ ಸೂಚ್ಯಂಕ ತೀವ್ರ ಕಳಪೆ ಮಟ್ಟಕ್ಕೆ ಕುಸಿದಿದ್ದು, ಈ ಕುರಿತು
Vijaya Karnataka Web air quality in delhi

ಸುಪ್ರೀಂ ಕೋರ್ಟ್‌ ನೇಮಿಸಿರುವ ಪರಿಸರ ಮಾಲಿನ್ಯ (ನಿಯಂತ್ರಣ ಮತ್ತು ತಡೆ) ಪ್ರಾಧಿಕಾರ (ಇಪಿಸಿಎ) ಪ್ರಕರಣ ದಾಖಲಿಸಿತ್ತು. ನ.4ರಂದು ಈ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಕಿದೆ. ನ್ಯಾಯಮೂರ್ತಿ ಅರುಣ್‌ ಮಿಶ್ರಾ ಅವರ ನೇತೃತ್ವದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಲಿದೆ.


ಹೊಗೆ ಗೂಡಾದ ದಿಲ್ಲಿಯಲ್ಲಿ 'ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ' ಘೋಷಣೆ

ಏನಿದು ಪ್ರಕರಣ:
ದಿಲ್ಲಿಯ ಮಿತಿಮೀರಿದ ವಾಯುಮಾಲಿನ್ಯ ಕುರಿತು ಪರಿಸರ ಮಾಲಿನ್ಯ (ನಿಯಂತ್ರಣ ಮತ್ತು ತಡೆ) ಪ್ರಾಧಿಕಾರ ಸುಪ್ರೀಂ ಕೋರ್ಟ್‌ಗೆ ವರದಿ ನೀಡಿದೆ. ವರದಿಯಲ್ಲಿ ದೆಹಲಿ ವಾಯುಮಾಲಿನ್ಯಕ್ಕೆ ಕಾರಣವಾಗಿರುವ ಪ್ರಮುಖ ಅಂಶಗಳನ್ನು ತಿಳಸಿದೆ. ನೆರೆ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯವನ್ನು ಸುಡುವುದರಿಂದ, ಕೈಗಾರಿಕೆಗಳಿಂದ ಸೂಸುವ ವಿಷಾನಿಲಗಳು, ಹಾಗೂ ನಿರ್ಮಾಣ ಕಾರ್ಯಗಳಿಂದ ಉಂಟಾಗುವ ಧೂಳು ಮಾಲಿನ್ಯಕ್ಕೆ ಪ್ರಮುಖ ಕಾರಣ ಎಂದು ತಿಳಿಸಿತ್ತು. ನ್ಯಾಯ ಪೀಠ ಕೃಷಿ ತ್ಯಾಜ್ಯಗಳನ್ನು ಸುಡುತ್ತಿರುವ ಕುರಿತು ವಿಚಾರಣೆ ನಡೆಸಲಿದೆ.

ಹೊಗೆಯಲ್ಲಿ ಮುಳುಗಿದ ದೆಹಲಿ: ಟ್ರಾಫಿಕ್‌ಗೆ ಹೈರಾಣಾದ ಜನತೆ

ದಿಲ್ಲಿಯಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ:
ವಾಯುಮಾಲಿನ್ಯ ಕೈಮೀರಿದ ಹಿನ್ನೆಲೆಯಲ್ಲಿ ಶುಕ್ರವಾರ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ದಿಲ್ಲಿಯ ಶಾಲೆಗಳಿಗೆ ನ.5ರವೆರೆಗೆ ರಜೆ ಘೋಷಿಸಲಾಗಿದೆ. ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮಕ್ಕಳು ಮತ್ತು ನಿವಾಸಿಗಳಿಗೆ ಮಾಸ್ಕ್ ಧರಿಸುವಂತೆ ಮನವಿ ಮಾಡಿದ್ದು, 50 ಲಕ್ಷ ಮಾಸ್ಕ್‌ಗಳನ್ನು ವಿತರಿಸಿದ್ದಾರೆ.

ನವೆಂಬರ್ 5ರವರೆಗೆ ದೆಹಲಿ ಮತ್ತು ಸುತ್ತಲಿನ ಪ್ರದೇಶದಲ್ಲಿ ನಿರ್ಮಾಣ ಕಾರ್ಯಗಳನ್ನು ಮಾಡದಂತೆ ಆದೇಶಿಸಿದೆ. ಜತೆಗೆ ಚಳಿಗಾಲದಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ