ಆ್ಯಪ್ನಗರ

ಶಬರಿಮಲೆ ಮೇಲ್ಮನವಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ದಸರಾ ರಜೆಯ ನಂತರ ಅರ್ಜಿಯನ್ನು ಕೈಗೆತ್ತಿಕೊಳ್ಳಲಾಗುವುದು

Vijaya Karnataka Web 9 Oct 2018, 10:06 pm
ಹೊಸದಿಲ್ಲಿ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತ ತೀರ್ಪಿನ ವಿರುದ್ಧ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಮಂಗಳವಾರ ನಿರಾಕರಿಸಿದೆ.
Vijaya Karnataka Web sabarimala


ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ…, ನ್ಯಾಯಮೂರ್ತಿಗಳಾದ ಎಸ್‌.ಕೆ.ಕೌಲ್‌ ಮತ್ತು ಕೆ.ಎಂ.ಜೋಸೆಫ್‌ ಅವರನ್ನೊಳಗೊಂಡ ನ್ಯಾಯಪೀಠವು ರಾಷ್ಟ್ರೀಯ ಅಯ್ಯಪ್ಪ ಭಕ್ತರ ಒಕ್ಕೂಟದ ಪರವಾಗಿ ಅಧ್ಯಕ್ಷೆ ಶೈಲಜಾ ವಿಜಯನ್‌ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಪುರಸ್ಕರಿಸಿದ್ದು, ದಸರಾ ರಜೆಯ ನಂತರ ಅರ್ಜಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.

ಸಿಪಿಐ(ಎಂ) ಸಭೆ:
ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವ ಸುಪ್ರೀಂ ತೀರ್ಪಿನ ಅನುಷ್ಠಾನಕ್ಕೆ ಮುಂದಾಗಿರುವ ಕೇರಳದ ಎಲ್‌ಡಿಎಫ್‌ ಸರಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್‌ ಮತ್ತು ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿರುವ ಬೆನ್ನಲ್ಲೇ ಮಹಿಳೆಯರನ್ನು ಒಳಗೊಂಡಂತೆ ಸಿಪಿಐ(ಎಂ) ವಿಶಿದ್ಧಿಕಾರ್ಣಂ(ವಿವರಣಾತ್ಮಕ) ಸಭೆಗಳನ್ನು ಮಂಗಳವಾರದಿಂದ ಆರಂಭಿಸಿದೆ. ತೀರ್ಪು ಅನುಷ್ಠಾನಕ್ಕೆ ಬದ್ಧವಾಗಿರುವ ಪಕ್ಷ, ಜನರಿಗೆ ಈ ಕುರಿತು ವಿವರಣೆ ನೀಡಲು ಕೇರಳಾದ್ಯಂತ ಅನೇಕ ಸಭೆಗಳನ್ನು ನಡೆಸಲು ತೀರ್ಮಾನಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ