ಆ್ಯಪ್ನಗರ

ಸುಪ್ರೀಂ ಕೋರ್ಟೇ ನಮ್ಮದು: ಬಿಜೆಪಿ ಸಚಿವ

'ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗೇ ಆಗುತ್ತದೆ. ಏಕೆಂದರೆ ಸುಪ್ರೀಂ ಕೋರ್ಟ್‌ ನಮ್ಮದು' ಎಂದು ಬಿಜೆಪಿ ಸಹಕಾರಿ ಸಚಿವ ಮುಕುಟ್‌ ಬಿಹಾರಿ ವರ್ಮಾ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ.

Times Now 9 Sep 2018, 3:34 pm
ಲಖನೌ: ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುವುದು ರಾಮನ ಕೈಯಲ್ಲಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಹೇಳಿಕೆ ನೀಡಿದ ಬೆನ್ನಲ್ಲೇ ಅಲ್ಲಿನ ಸಚಿವರೊಬ್ಬರು 'ಸುಪ್ರೀಂ ಕೋರ್ಟ್‌ ನಮ್ಮದು' ಎನ್ನುವ ಮೂಲಕ ವಿವಾದಕ್ಕೆ ಕಾರಣರಾಗಿದ್ದಾರೆ.
Vijaya Karnataka Web Bihari Verma


'ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆಗೇ ಆಗುತ್ತದೆ. ಏಕೆಂದರೆ ಸುಪ್ರೀಂ ಕೋರ್ಟ್‌ ನಮ್ಮದು' ಎಂದು ಬಿಜೆಪಿ ಸಹಕಾರಿ ಸಚಿವ ಮುಕುಟ್‌ ಬಿಹಾರಿ ವರ್ಮಾ ಬಹ್ರೈಚ್‌ನಲ್ಲಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬಂದಿದ್ದು ಅಭಿವೃದ್ಧಿ ಕಾರಣದಿಂದ. ಆದರೆ ರಾಮ ಮಂದಿರ ನಿರ್ಮಿಸಬೇಕು ಎಂಬುದು ನಮ್ಮ ನಿರ್ಣಯ. ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವಿದೆ ಮತ್ತು ಸುಪ್ರೀಂ ಕೋರ್ಟ್‌ ನಮ್ಮದು. ನ್ಯಾಯಾಂಗ ವ್ಯವಸ್ಥೆ, ಆಡಳಿತ, ರಾಷ್ಟ್ರ ಸೇರಿದಂತೆ ರಾಮ ಮಂದಿರವು ನಮಗೆ ಸೇರಿದ್ದಾಗಿದೆ ಎಂದು ಸಚಿವ ಬಿಹಾರಿ ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.

ಹಿಂದಿ ಸುದ್ದಿ ಪತ್ರಿಕೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಸಿಎಂ ಯೋಗಿ ಆದಿತ್ಯನಾಥ್‌ ಅವರು 'ನಿಗದಿ ಪಡಿಸಿದ ಅವಧಿಯಲ್ಲಿ ಏನು ಆಗಬೇಕೋ ಅದು ಆಗುತ್ತದೆ. ದೇವರ ಆಜ್ಞೆಯನ್ನು ಯಾರೂ ತಡೆಯಲು ಸಾಧ್ಯವಿಲ್ಲ' ಎಂದು ರಾಮ ಮಂದಿರ ನಿರ್ಮಾಣದ ಕುರಿತಾದ ಪ್ರಶ್ನೆಗೆ ಉತ್ತರಿಸಿದ್ದರು.

ಹಿಂದಿನ ಸರಕಾರಗಳು ಆಯೋಧ್ಯೆಗೆ ಭೇಟಿ ನೀಡಲು ಹೆದರುತ್ತಿದ್ದವು. ಆದರೆ ನಾನು ಪವಿತ್ರ ಭೂಮಿಗೆ ಭೇಟಿ ನೀಡಿದ್ದೇನೆ. ಇದು ಅಭಿವೃದ್ಧಿಯ ಹೆಜ್ಜೆ ಎಂದು ಯೋಗಿ ಆದಿತ್ಯನಾಥ್‌ ತಿಳಿಸಿದ್ದರು.

ಕಳೆದ ತಿಂಗಳು ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ, ಕೋರ್ಟ್‌ನಲ್ಲಿ ತೀರ್ಮಾನವಾಗದಿದ್ದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರಕಾರ ರಾಮ ಮಂದಿರಕ್ಕೆ ನ್ಯಾಯ ಒದಗಿಸಲಿದೆ ಎಂದಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ