ಆ್ಯಪ್ನಗರ

ಶಬರಿಮಲೆ ಬಳಿಕ ಇದೀಗ ಮಸೀದಿಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ಮನವಿ

ಶಬರಿಮಲೆಯ ಬಳಿಕ ಇದೀಗ ಮಸೀದಿಗಳಿಗೆ ಮಹಿಳಾ ಪ್ರವೇಶಕ್ಕಾಗಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಈ ಕುರಿತು ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರಕಾರಕ್ಕೆ ಹಾಗೂ ವಕ್ಫ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.

Vijaya Karnataka Web 17 Apr 2019, 11:38 am

ಹೈಲೈಟ್ಸ್‌:

  • ಶಬರಿಮಲೆಯ ಬಳಿಕ ಇದೀಗ ಮಸೀದಿಗಳಿಗೆ ಮಹಿಳಾ ಪ್ರವೇಶಕ್ಕಾಗಿ ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಸಲ್ಲಿಸಲಾಗಿದೆ.
  • ಈ ಕುರಿತು ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರಕಾರಕ್ಕೆ ಹಾಗೂ ವಕ್ಫ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
ಹೊಸದಿಲ್ಲಿ: ಮಹಿಳೆಯರೂ ಮಸೀದಿಯೊಳಗೆ ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕೆಂದು ಕೋರಿ ಪುಣೆ ಮೂಲದ ದಂಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಮಂಗಳವಾರ ಸಮ್ಮತಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್‌.ಎ ಬೊಬ್ಡೆ ನೇತೃತ್ವದ ಪೀಠ ಕೇಂದ್ರ ಸರಕಾರ, ಮಹಿಳಾ ಆಯೋಗ, ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮತ್ತು ಕೇಂದ್ರೀಯ ವಕ್ಫ್ ಮಂಡಳಿಗೆ ನೋಟಿಸ್‌ ಜಾರಿ ಮಾಡಿದೆ.

''ಮಹಿಳೆಯರಿಗೆ ಮಸೀದಿ ಪ್ರವೇಶ ನಿಷೇಧವು ಸಮಾನತೆ ಮತ್ತು ಮೂಲಭೂತ ಹಕ್ಕಿನ ಉಲ್ಲಂಘನೆಯಾಗುತ್ತದೆ. ಪುರುಷರಂತೆ ಮಹಿಳೆಯರಿಗೆ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಬೇಕು. ಕಳೆದ ಸೆಪ್ಟೆಂಬರ್‌ ತಿಂಗಳು ಕೇರಳದ ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲ ಪ್ರವೇಶಕ್ಕೆ ಮಹಿಳೆಯರಿಗೆ ಸುಪ್ರೀಂಕೋರ್ಟ್‌ ಅವಕಾಶ ಕಲ್ಪಿಸಿದೆ. ಅದರಂತೆ ಮುಸ್ಲಿಂ ಮಹಿಳೆಯರಿಗೆ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಮೆಕ್ಕಾ ಮತ್ತು ಕೆನಡಾಡದಲ್ಲಿ ಮಹಿಳೆಯರಿಗೆ ಇಂತಹ ಅವಕಾಶವಿದೆ,'' ಎಂದು ಅರ್ಜಿದಾರರು ಹೇಳಿದ್ದಾರೆ.

''ಶಬರಿಮಲೆ ದೇಗುಲ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿರುವ ಒಂದೇ ಕಾರಣಕ್ಕಾಗಿ ಈ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲಾಗಿದೆ,'' ಎಂದು ನ್ಯಾಯಪೀಠ ಹೇಳಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ