ಆ್ಯಪ್ನಗರ

Religious Conversion: ಮೋಸದ ಮತಾಂತರ ತಡೆಯಲು ಕೈಗೊಂಡ ಕ್ರಮವೇನು? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್

Religious Conversion In India: ದೇಶದಲ್ಲಿ ಮೋಸದ ಮತಾಂತರ ನಡೆಯುತ್ತಿದೆ, ಜನರಿಗೆ ಬಲವಂತ ಮಾಡಲಾಗುತ್ತಿದೆ, ಹೆದರಿಸಲಾಗುತ್ತಿದೆ, ಅವರಿಗೆ ಹಣ, ಉಡುಗೊರೆ ಸೇರಿದಂತೆ ಹಲವು ಬಗೆಯ ಆಮಿಷಗಳಗಳನ್ನು ನೀಡಿ ಮತಾಂತರ ಮಾಡಲಾಗುತ್ತಿದೆ ಎಂದು ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಿಲ್ಲಿಸಿದ್ದರು. ಈ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದರು. ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದ್ದರು.

Authored byದಿಲೀಪ್ ಡಿ. ಆರ್. | Vijaya Karnataka Web 23 Sep 2022, 3:49 pm

ಹೈಲೈಟ್ಸ್‌:

  • ಬಲವಂತ ಹಾಗೂ ಮೋಸದ ಮತಾಂತರ ಇಡೀ ದೇಶದಲ್ಲಿ ನಡೆಯುತ್ತಿದೆ
  • ಸುಪ್ರೀಂ ಕೋರ್ಟ್‌ನಲ್ಲಿ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ವಾದ
  • ಈ ದಂಧೆಯನ್ನು ಸರ್ಕಾರ ಆದಷ್ಟು ಬೇಗ ತಡೆಯಬೇಕು ಎಂದು ಆಗ್ರಹ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web convesion
ಮೋಸದ ಮತಾಂತರ ತಡೆಯಲು ಕೈಗೊಂಡ ಕ್ರಮವೇನು? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್
ಹೊಸ ದಿಲ್ಲಿ: ಮೋಸ ಹಾಗೂ ಬಲವಂತದ ಮತಾಂತರ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಸಂಬಂಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಕೇಂದ್ರ ಸರ್ಕಾರ, ಗೃಹ ಸಚಿವಾಲಯ ಹಾಗೂ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ. ಆರ್. ಶಾ ಹಾಗೂ ಕೃಷ್ಣ ಮುರುಳಿ ಅವರಿದ್ದ ನ್ಯಾಯಪೀಠವು ಪ್ರಕರಣದ ವಿಚಾರಣೆ ನಡೆಸಿ ನೋಟಿಸ್ ಜಾರಿ ಮಾಡಿತು. ನವೆಂಬರ್ 14ರ ಒಳಗೆ ಉತ್ತರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.

ಕ್ರೈಸ್ತ, ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದಿದ ದಲಿತರ ಮಾಹಿತಿ ಸಂಗ್ರಹಿಸಲು ಕೇಂದ್ರ ಸರ್ಕಾರದಿಂದ ಹೊಸ ಆಯೋಗ
ದೇಶದಲ್ಲಿ ಮೋಸದ ಮತಾಂತರ ನಡೆಯುತ್ತಿದೆ, ಜನರಿಗೆ ಬಲವಂತ ಮಾಡಲಾಗುತ್ತಿದೆ, ಹೆದರಿಸಲಾಗುತ್ತಿದೆ, ಅವರಿಗೆ ಹಣ, ಉಡುಗೊರೆ ಸೇರಿದಂತೆ ಹಲವು ಬಗೆಯ ಆಮಿಷಗಳಗಳನ್ನು ನೀಡಿ ಮತಾಂತರ ಮಾಡಲಾಗುತ್ತಿದೆ ಎಂದು ವಕೀಲರಾದ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಿಲ್ಲಿಸಿದ್ದರು. ಈ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದರು. ಈ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ನ್ಯಾಯಪೀಠಕ್ಕೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಬಲವಂತ ಹಾಗೂ ಮೋಸದ ಮತಾಂತರವು ಇಡೀ ದೇಶದಲ್ಲಿ ನಡೆಯುತ್ತಿದೆ ಎಂದು ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಹೇಳಿದ್ದಾರೆ. ಈ ದಂಧೆಯನ್ನು ಸರ್ಕಾರ ಆದಷ್ಟು ಬೇಗ ತಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಬಂದರೆ ಮತಾಂತರ, ಗೋ ರಕ್ಷಣೆ ಕಾಯಿದೆಗೆ ತಿದ್ದುಪಡಿ: ಸಿದ್ದರಾಮಯ್ಯ
ಇದೇ ವೇಳೆ ಭಾರತೀಯ ಕಾನೂನು ಆಯೋಗ ಕೂಡಾ ಬಲವಂತದ ಮತಾಂತರಕ್ಕೆ ಅಂತ್ಯ ಹಾಡಲು ಆದಷ್ಟು ಬೇಗ ಕಾಯ್ದೆಯೊಂದನ್ನು ರೂಪಿಸಬೇಕೆಂದು ನಿರ್ದೇಶನ ನೀಡುವಂತೆಯೂ ಸುಪ್ರೀಂ ಕೋರ್ಟ್‌ಗೆ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಮನವಿ ಸಲ್ಲಿಸಿದ್ದಾರೆ. ಬೆದರಿಕೆಯ ಮತಾಂತರ ಹಾಗೂ ಆಮಿಷ ಒಡ್ಡುವ ಮತಾಂತರಕ್ಕೆ ಆದಷ್ಟು ಬೇಗ ಅಂತ್ಯ ಹಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.


ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ..

ಕರ್ನಾಟಕ ರಾಜ್ಯ ಸರ್ಕಾರವು ಇದೇ ವರ್ಷ ಮೇ ತಿಂಗಳಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿದೆ. ಆಮಿಷ ಒಡ್ಡಿ ಮತಾಂತರ ಮಾಡೋದು ಹಾಗೂ ಬಲವಂತದ ಮತಾಂತರ ಮಾಡೋದು ಕರ್ನಾಟಕದಲ್ಲಿ ನಿಷೇಧಿತ ಕಾರ್ಯವಾಗಿದೆ. ಸುಗ್ರೀವಾಜ್ಞೆ ಮೂಲಕ ಕಳೆದ ಮೇ ನಲ್ಲಿ ಕಾನೂನು ಜಾರಿಗೆ ತಂದ ಕರ್ನಾಟಕ ಸರ್ಕಾರ, ಇದೀಗ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲೂ ಕಾಯ್ದೆಗೆ ಅನುಮೋದನೆ ಪಡೆಯುವಲ್ಲಿ ಯಶಸ್ವಿಯಾಗಿದೆ. ರಾಜ್ಯಪಾಲರ ಸಹಿ ಬಾಕಿ ಉಳಿದಿದೆ. ಈಗಾಗಲೇ ಸುಗ್ರೀವಾಜ್ಞೆ ಮೂಲಕ ಜಾರಿಯಲ್ಲಿರುವ ಕಾಯ್ದೆಗೆ ಈ ಮೂಲಕ ಇನ್ನಷ್ಟು ಬಲ ಸಿಗಲಿದೆ.
ಲೇಖಕರ ಬಗ್ಗೆ
ದಿಲೀಪ್ ಡಿ. ಆರ್.
ವಿಜಯ ಕರ್ನಾಟಕದ ಡಿಜಿಟಲ್ ಪತ್ರಕರ್ತನಾಗಿ 2019ರ ಆಗಸ್ಟ್‌ನಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡ ಟಿವಿ ನ್ಯೂಸ್ ವಾಹಿನಿಗಳಲ್ಲಿ 14 ವರ್ಷಕ್ಕೂ ಹೆಚ್ಚು ಕಾಲ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಕಾಡು, ಹಸಿರು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ